ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆ ಜಾರಿ- ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್

ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್ ತಿಳಿಸಿದರು.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು ಅವರು, ನಾರಿಶಕ್ತಿ ವಂದನ್ ಅಧಿನಿಯಮ ಸಾಕಷ್ಟು ವರ್ಷಗಳಿಂದ ಬಾಕಿಯೇ ಇತ್ತು. ಇದು ಜನಸಂಘದ ಕಾಲದಿಂದಲ್ಲೂ ಮಹಿಳೆಯ ಸಬಲೀಕರಣಕ್ಕೆ ಒತ್ತು ನೀಡಲಾಗಿತ್ತು. ಈಗಾಗಲೇ ಅನೇಕ ವರ್ಷಗಳಿಂದ ಮಹಿಳೆ ಮೀಸಲಾತಿ ತರಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಕಾಂಗ್ರೆಸ್ ಹುನ್ನಾರದಿಂದ ಲೋಕಾಸಭೆಯಲ್ಲಿ ಅಂಗೀಕರಿಸಲು ಸಾಧ್ಯವಾಗುತ್ತಿರಲಿಲ್ಲ. ಕಳೆದ 10 ವರ್ಷಗಳಿಂದ ಕೇಂದ್ರ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಕೆಲಸ ಮಾಡಿಕೊಂಡು ಬರುತ್ತಿದೆ. ಮಹಿಳೆಯರಿಗೆ ಸ್ವಚ್ಚ ಭಾರತ್ ಅಭಿಯಾನ, ಬಯಲು ಶೌಚ ನಿರ್ಮೂಲನೆ, ಜನ್ ಧನ್ ಖಾತೆ, ಮುದ್ರಾ ಯೋಜನೆ, ಬೇಟಿ ಬಚಾವೋ, ಬೇಟಿ ಪಡಾವೋ ಸೇರಿದಂತೆ ನಾನಾ ಯೋಜನೆಗಳನ್ನು ಕೇಂದ್ರ ಸರಕಾರ ನಾರಿಯರಿಗೆ ಅನೇಕ ಸೌಲಭ್ಯಗಳನ್ನು ಕೇಂದ್ರ ಸರಕಾರ ನೀಡಿದೆ ಎಂದರು.

ಮಾತೃ ವಂದನಾ , ಮಾತೃ ಪೋಷಣ್ ಯೋಜನೆಗಳ ಮೂಲಕ ಪೌಷ್ಟಿಕ ಆಹಾರವನ್ನು ನೀಡಿದ್ದಾರೆ. ಆರ್ಥಿಕ, ಆರೋಗ್ಯ ಕ್ಷೇತ್ರಗಳಲ್ಲೂ ಮಹಿಳೆಯರನ್ನು ಸಬಲೀಕರಣ ಮಾಡಲು ಕೆಲಸ ಮಾಡಿದರು. ದೇಶದಲ್ಲಿ ಹೆಚ್ಚಿನ ಮತದಾನವನ್ನು ಮಹಿಳೆಯರು ಮಾಡುತ್ತಿದ್ದಾರೆ. ಮಹಿಳೆಯರು ಕೇವಲ ಫಲಾನುಭವಿಗಳಾಗಬಾರದು, ಯೋಜನೆಗಳನ್ನು ರೂಪಿಸುವ ಸ್ಥಾನಕ್ಕೆ ಮಹಿಳೆಯರು ಬರಬೇಕು. ವಿಕಸಿತ ಭಾರತ ಸಂಕಲ್ಪದೊಂದಿಗೆ ಕೆಲಸ ಮಾಡಲಾಗುತ್ತಿದೆ ಎಂದರು.

ಈ ವೇಳೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ವಿಜಯಲಕ್ಷ್ಮಿ ಆನಂದ್, ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ನಿರ್ಮಲಮ್ಮ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅನು ರೆಡ್ಡಿ ಸೇರಿದಂತೆ ವಿವಿಧ ತಾಲೂಕುಗಳ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಜರಿದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

7 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago