ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆ ಜಾರಿ- ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್

ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್ ತಿಳಿಸಿದರು.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು ಅವರು, ನಾರಿಶಕ್ತಿ ವಂದನ್ ಅಧಿನಿಯಮ ಸಾಕಷ್ಟು ವರ್ಷಗಳಿಂದ ಬಾಕಿಯೇ ಇತ್ತು. ಇದು ಜನಸಂಘದ ಕಾಲದಿಂದಲ್ಲೂ ಮಹಿಳೆಯ ಸಬಲೀಕರಣಕ್ಕೆ ಒತ್ತು ನೀಡಲಾಗಿತ್ತು. ಈಗಾಗಲೇ ಅನೇಕ ವರ್ಷಗಳಿಂದ ಮಹಿಳೆ ಮೀಸಲಾತಿ ತರಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಕಾಂಗ್ರೆಸ್ ಹುನ್ನಾರದಿಂದ ಲೋಕಾಸಭೆಯಲ್ಲಿ ಅಂಗೀಕರಿಸಲು ಸಾಧ್ಯವಾಗುತ್ತಿರಲಿಲ್ಲ. ಕಳೆದ 10 ವರ್ಷಗಳಿಂದ ಕೇಂದ್ರ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಕೆಲಸ ಮಾಡಿಕೊಂಡು ಬರುತ್ತಿದೆ. ಮಹಿಳೆಯರಿಗೆ ಸ್ವಚ್ಚ ಭಾರತ್ ಅಭಿಯಾನ, ಬಯಲು ಶೌಚ ನಿರ್ಮೂಲನೆ, ಜನ್ ಧನ್ ಖಾತೆ, ಮುದ್ರಾ ಯೋಜನೆ, ಬೇಟಿ ಬಚಾವೋ, ಬೇಟಿ ಪಡಾವೋ ಸೇರಿದಂತೆ ನಾನಾ ಯೋಜನೆಗಳನ್ನು ಕೇಂದ್ರ ಸರಕಾರ ನಾರಿಯರಿಗೆ ಅನೇಕ ಸೌಲಭ್ಯಗಳನ್ನು ಕೇಂದ್ರ ಸರಕಾರ ನೀಡಿದೆ ಎಂದರು.

ಮಾತೃ ವಂದನಾ , ಮಾತೃ ಪೋಷಣ್ ಯೋಜನೆಗಳ ಮೂಲಕ ಪೌಷ್ಟಿಕ ಆಹಾರವನ್ನು ನೀಡಿದ್ದಾರೆ. ಆರ್ಥಿಕ, ಆರೋಗ್ಯ ಕ್ಷೇತ್ರಗಳಲ್ಲೂ ಮಹಿಳೆಯರನ್ನು ಸಬಲೀಕರಣ ಮಾಡಲು ಕೆಲಸ ಮಾಡಿದರು. ದೇಶದಲ್ಲಿ ಹೆಚ್ಚಿನ ಮತದಾನವನ್ನು ಮಹಿಳೆಯರು ಮಾಡುತ್ತಿದ್ದಾರೆ. ಮಹಿಳೆಯರು ಕೇವಲ ಫಲಾನುಭವಿಗಳಾಗಬಾರದು, ಯೋಜನೆಗಳನ್ನು ರೂಪಿಸುವ ಸ್ಥಾನಕ್ಕೆ ಮಹಿಳೆಯರು ಬರಬೇಕು. ವಿಕಸಿತ ಭಾರತ ಸಂಕಲ್ಪದೊಂದಿಗೆ ಕೆಲಸ ಮಾಡಲಾಗುತ್ತಿದೆ ಎಂದರು.

ಈ ವೇಳೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ವಿಜಯಲಕ್ಷ್ಮಿ ಆನಂದ್, ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ನಿರ್ಮಲಮ್ಮ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅನು ರೆಡ್ಡಿ ಸೇರಿದಂತೆ ವಿವಿಧ ತಾಲೂಕುಗಳ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಜರಿದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

7 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

9 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

14 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago