ಮಹಿಷ ಚಾರಿತ್ರಿಕ ಹಾಗೂ ಪೌರಾಣಿಕ ಪುರುಷನೆ ಹೊರತು ಕಾಲ್ಪನಿಕ ವ್ಯಕ್ತಿಯಲ್ಲ-ಚಿಂತಕ ಪ್ರೊ.ವಿಠಲ್ ವಗ್ಗನ್

ದೊಡ್ಡಬಳ್ಳಾಪುರ: ನಮ್ಮ ಅಸ್ತಿತ ಮತ್ತು ಅಸ್ಮಿತೆಯ ಸಂಕೇತ ಮಹಿಷ ಎಂದು ಪ್ರಗತಿಪರ ಚಿಂತಕ ಪ್ರೊ.ವಿಠಲ್ ವಗ್ಗನ್ ಹೇಳಿದರು.

ಮಹಿಷ ಉತ್ಸವ ಆಚರಣ ಸಮಿತಿ ನಗರದ ಕನ್ನಡ ಜಾಗೃತ ಭವನದಲ್ಲಿ ಏರ್ಪಡಿಸಿದ್ದ ಮಹಿಷ ಉತ್ಸವವನ್ನು ಅರಳಿ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಷ ಚಾರಿತ್ರಿಕ ಹಾಗೂ ಪೌರಾಣಿಕ ಪುರುಷನೆ ಹೊರತು ಕಾಲ್ಪನಿಕ ವ್ಯಕ್ತಿಯಲ್ಲ ಎಂದ ಅವರು ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಹೊರ ತಂದಿರುವ ಸಂಶೋಧನಾ ದಾಖಲೆಗಳನ್ನು ಪ್ರದರ್ಶನ ಮಾಡಿದರು.

ಮಹಿಷ ಚಾರಿತ್ರಿಕ ವ್ಯಕ್ತಿ ಎಂಬುದಕ್ಕೆ 2500 ವರ್ಷಗಳ ಇತಿಹಾಸವಿದೆ, ಭಾರತ ಬಹುಸಂಸ್ಕೃತಿಗಳ ದೇಶ. ಭಾರತವನ್ನು ಜ್ಯಾತ್ಯಾತೀತ, ಇಲ್ಲಿನ ಪ್ರತಿ ಉದಾಯವು ಅವರ ಅವರದೆ ಆದ ಸಂಸ್ಕೃತಿಗಳ ಆಚರಣೆಗೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಲಾಗಿದೆ. ಮೈಸೂರು ಚಾಮುಂಡಿ ಕಾಲ್ಪನಿಕ ದೇವಿಯಾಗಿದ್ದು 18 ಪುರಾಣಗಳಲ್ಲಿ ಎಲ್ಲಿಯೂ ಚಾಮುಂಡಿ ಮಹಿಷನ ಕೊಂದ ಬಗ್ಗೆ ಉಲ್ಲೇಖವಿಲ್ಲ ಎಂದ ಅವರು, ಎಲ್ಲ ಪುರಾಣಗಳ ಪ್ರಕಾರ ಚಾಮುಂಡಿ ದೇವಿಗೆ ಸಿಂಹ ವಾಹನವಾಗಿದೆ. ಆದರೆ ಈಗಿನ ಮೈಸೂರು ಚಾಮುಂಡಿಯ ವಾಹನ ಹುಲಿಯಾಗಿದೆ. ಮಹಿಷನನ್ನು ಕೊಂದದ್ದು ಮೈಸೂರಿನಲ್ಲಿ ಅಲ್ಲ. ಕೊಲ್ಕತ್ತಾದಲ್ಲಿ ಅದು ದುರ್ಗೆ ಎಂಬ ಹೆಸರಿನ ಹೆಣ್ಣು ಮಗಳು. ಹಾಗಾಗಿ ಚಾಮುಂಡಿ ಮಹಿಷ ಎಂಬ ವ್ಯಕ್ತಿಯನ್ನು ಕೊಂದಿರುವುದಕ್ಕೆ ಯಾವುದೇ ಪುರಾಣ, ಚಾರಿತ್ರಿಕ ಇತಿಹಾಸದಲ್ಲಿ ಉಲ್ಲೇಖ ಆಗಿಲ್ಲ ಎಂದರು.

ದ್ರಾವಿಡ ರಾಜರನ್ನು ರಾಕ್ಷಸರು, ದುಷ್ಟರು, ಜೀವ ವಿರೋಧಿಗಳು ಎಂದು ಕೆಟ್ಟದಾಗಿ ಪುರಾಣ ಬರೆದಿದ್ದಾರೆ. ಎಂದ ಅವರು ಯಾವುದೇ ಊರು ಅಥವಾ ಸಂಸ್ಥೆಗೆ ಒಬ್ಬ ವ್ಯಕ್ತಿಯ ಹೆಸರಿಡಲು ಆ ವ್ಯಕ್ತಿ ಒಳ್ಳೆಯವನಾಗಿದ್ದರೆ ಮಾತ್ರ ಇಡುತ್ತಾರೆ, ಕರ್ನಾಟಕದ ಮೈಸೂರು (ಮಹಿಷನಾಡು) ಪಂಜಾಬಿನ ಜಲಂದರ್ ಮತ್ತು ಬಿಹಾರದ ಗಯಾ ( ಬೋದ್ ಗಯಾ) ಜಿಲ್ಲೆಗಳಿಗೆ ರಾಕ್ಷಸರ ಹೆಸರು ಇಟ್ಟಿದ್ದಾರೆ ಎಂದರೆ ಅವರು ಒಳ್ಳೆಯವರಾಗಿದ್ದರು ಎಂದು ಅರ್ಥವಲ್ಲವೆ ? ಎಂದು ಪ್ರಶ್ನಿಸಿದರು.

ಸಂಸದ ಪ್ರತಾಪ್ ಸಿಂಹ ಮತ್ತು ಭಾಷಣಕಾರ ಸೂಲಿಬೆಲೆ ಚಕ್ರವರ್ತಿ ಕುರಿತು ನಾನು ಪಂಥಾಹ್ವಾನ ನೀಡುತ್ತೇನೆ ಮಹಿಷ ಬೌತಿಕ ಅಸ್ತಿತ್ವದಲ್ಲಿದ್ದ ಎಂಬ ಬಗ್ಗೆ ನಾನು ದಾಖಲೆ ನೀಡುತ್ತೇನೆ. ಚಾಮುಂಡಿ ಅಸ್ತಿತ್ವದಲ್ಲಿ ಇದ್ದರು ಎಂಬುದಕ್ಕೆ  ಅವರು ದಾಖಲೆ ನೀಡಲಿ. ಇಲ್ಲವಾದಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ಸವಾಲು ಎಸೆದರು.

ಸಮಾಜಿಕ ವ್ಯವಸ್ಥೆಯಲ್ಲಿ ಮನುವಾದಿಗಳ ಅನಾವಾರಗಳನ್ನು ಪ್ರಶ್ನೆ ಮಾಡಿದರೆ ಆರಂಭದಲ್ಲೇ ತುಳಿದು ಹಾಕುತ್ತಾರೆ. ಇದು ಶತ ಮಾನಗಳಿಂದ ನಡೆದುಕೊಂಡು ಬಂದಿದೆ, ಅದು ಇಂದಿಗೂ ಚಲಾವಣೆಯಲ್ಲಿದೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.

ಕಾರ್ಯಕ್ರಮದಲ್ಲಿ ಪ್ರಜಾ ವಿಮೋಚನಾ ಸೇನೆಯ ರಾಜ್ಯಾಧ್ಯಕ್ಷ ಮಾ.ಮುನಿರಾಜು, ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ, ವಕೀಲರಾದ ಮುನಿರಾಜು, ಛಲವಾದಿ ಮಹಾಸಭಾ ತಾಲ್ಲೂಕು ಅಧ್ಯಕ್ಷ ಗುರುರಾಜಪ್ಪ, ಮಾನವ ಬಧುತ್ವ ವೇದಿಕೆ ಅಧ್ಯಕ್ಷ ವೆಂಕಟೇಶ್, ದಸಂಸ ರಾಜುಸಣ್ಣಕ್ಕಿ, ಪ್ರಜಾವಿಮೋಚನಾ ಸಮಿತಿ ರಾಜ್ಯ ಕಾರ್ಯಾಧ್ಯಕ್ಷ ಹನುಮಣ್ಣ ಗೂಳ್ಯ, ವಡ್ಡರಹಳ್ಳಿ ರಾಜಗೋಪಾಲ್, ಅಜಯ್ ಕುಮಾರ್,ಕರೀಂಸೊಣ್ಣೇನಹಳ್ಳಿ ಮುನಿಯಪ್ಪ, ತಳಗವಾರ ಪುನೀತ್, ಬೆಳವಂಗಲ ಮಹೇಶ್, ಕುಮಾರ್ ಮುಂತಾದವರು ಉಪಸ್ಥಿತರಿದ್ದರು

Ramesh Babu

Journalist

Recent Posts

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

3 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

5 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

17 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

17 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

20 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

22 hours ago