ದೊಡ್ಡಬಳ್ಳಾಪುರ: ನಮ್ಮ ಅಸ್ತಿತ ಮತ್ತು ಅಸ್ಮಿತೆಯ ಸಂಕೇತ ಮಹಿಷ ಎಂದು ಪ್ರಗತಿಪರ ಚಿಂತಕ ಪ್ರೊ.ವಿಠಲ್ ವಗ್ಗನ್ ಹೇಳಿದರು.
ಮಹಿಷ ಉತ್ಸವ ಆಚರಣ ಸಮಿತಿ ನಗರದ ಕನ್ನಡ ಜಾಗೃತ ಭವನದಲ್ಲಿ ಏರ್ಪಡಿಸಿದ್ದ ಮಹಿಷ ಉತ್ಸವವನ್ನು ಅರಳಿ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಷ ಚಾರಿತ್ರಿಕ ಹಾಗೂ ಪೌರಾಣಿಕ ಪುರುಷನೆ ಹೊರತು ಕಾಲ್ಪನಿಕ ವ್ಯಕ್ತಿಯಲ್ಲ ಎಂದ ಅವರು ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಹೊರ ತಂದಿರುವ ಸಂಶೋಧನಾ ದಾಖಲೆಗಳನ್ನು ಪ್ರದರ್ಶನ ಮಾಡಿದರು.
ಸಂಸದ ಪ್ರತಾಪ್ ಸಿಂಹ ಮತ್ತು ಭಾಷಣಕಾರ ಸೂಲಿಬೆಲೆ ಚಕ್ರವರ್ತಿ ಕುರಿತು ನಾನು ಪಂಥಾಹ್ವಾನ ನೀಡುತ್ತೇನೆ ಮಹಿಷ ಬೌತಿಕ ಅಸ್ತಿತ್ವದಲ್ಲಿದ್ದ ಎಂಬ ಬಗ್ಗೆ ನಾನು ದಾಖಲೆ ನೀಡುತ್ತೇನೆ. ಚಾಮುಂಡಿ ಅಸ್ತಿತ್ವದಲ್ಲಿ ಇದ್ದರು ಎಂಬುದಕ್ಕೆ ಅವರು ದಾಖಲೆ ನೀಡಲಿ. ಇಲ್ಲವಾದಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ಸವಾಲು ಎಸೆದರು.
ಸಮಾಜಿಕ ವ್ಯವಸ್ಥೆಯಲ್ಲಿ ಮನುವಾದಿಗಳ ಅನಾವಾರಗಳನ್ನು ಪ್ರಶ್ನೆ ಮಾಡಿದರೆ ಆರಂಭದಲ್ಲೇ ತುಳಿದು ಹಾಕುತ್ತಾರೆ. ಇದು ಶತ ಮಾನಗಳಿಂದ ನಡೆದುಕೊಂಡು ಬಂದಿದೆ, ಅದು ಇಂದಿಗೂ ಚಲಾವಣೆಯಲ್ಲಿದೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…