ಮಹಿಷ ಚಾರಿತ್ರಿಕ ಹಾಗೂ ಪೌರಾಣಿಕ ಪುರುಷನೆ ಹೊರತು ಕಾಲ್ಪನಿಕ ವ್ಯಕ್ತಿಯಲ್ಲ-ಚಿಂತಕ ಪ್ರೊ.ವಿಠಲ್ ವಗ್ಗನ್

ದೊಡ್ಡಬಳ್ಳಾಪುರ: ನಮ್ಮ ಅಸ್ತಿತ ಮತ್ತು ಅಸ್ಮಿತೆಯ ಸಂಕೇತ ಮಹಿಷ ಎಂದು ಪ್ರಗತಿಪರ ಚಿಂತಕ ಪ್ರೊ.ವಿಠಲ್ ವಗ್ಗನ್ ಹೇಳಿದರು.

ಮಹಿಷ ಉತ್ಸವ ಆಚರಣ ಸಮಿತಿ ನಗರದ ಕನ್ನಡ ಜಾಗೃತ ಭವನದಲ್ಲಿ ಏರ್ಪಡಿಸಿದ್ದ ಮಹಿಷ ಉತ್ಸವವನ್ನು ಅರಳಿ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಷ ಚಾರಿತ್ರಿಕ ಹಾಗೂ ಪೌರಾಣಿಕ ಪುರುಷನೆ ಹೊರತು ಕಾಲ್ಪನಿಕ ವ್ಯಕ್ತಿಯಲ್ಲ ಎಂದ ಅವರು ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಹೊರ ತಂದಿರುವ ಸಂಶೋಧನಾ ದಾಖಲೆಗಳನ್ನು ಪ್ರದರ್ಶನ ಮಾಡಿದರು.

ಮಹಿಷ ಚಾರಿತ್ರಿಕ ವ್ಯಕ್ತಿ ಎಂಬುದಕ್ಕೆ 2500 ವರ್ಷಗಳ ಇತಿಹಾಸವಿದೆ, ಭಾರತ ಬಹುಸಂಸ್ಕೃತಿಗಳ ದೇಶ. ಭಾರತವನ್ನು ಜ್ಯಾತ್ಯಾತೀತ, ಇಲ್ಲಿನ ಪ್ರತಿ ಉದಾಯವು ಅವರ ಅವರದೆ ಆದ ಸಂಸ್ಕೃತಿಗಳ ಆಚರಣೆಗೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಲಾಗಿದೆ. ಮೈಸೂರು ಚಾಮುಂಡಿ ಕಾಲ್ಪನಿಕ ದೇವಿಯಾಗಿದ್ದು 18 ಪುರಾಣಗಳಲ್ಲಿ ಎಲ್ಲಿಯೂ ಚಾಮುಂಡಿ ಮಹಿಷನ ಕೊಂದ ಬಗ್ಗೆ ಉಲ್ಲೇಖವಿಲ್ಲ ಎಂದ ಅವರು, ಎಲ್ಲ ಪುರಾಣಗಳ ಪ್ರಕಾರ ಚಾಮುಂಡಿ ದೇವಿಗೆ ಸಿಂಹ ವಾಹನವಾಗಿದೆ. ಆದರೆ ಈಗಿನ ಮೈಸೂರು ಚಾಮುಂಡಿಯ ವಾಹನ ಹುಲಿಯಾಗಿದೆ. ಮಹಿಷನನ್ನು ಕೊಂದದ್ದು ಮೈಸೂರಿನಲ್ಲಿ ಅಲ್ಲ. ಕೊಲ್ಕತ್ತಾದಲ್ಲಿ ಅದು ದುರ್ಗೆ ಎಂಬ ಹೆಸರಿನ ಹೆಣ್ಣು ಮಗಳು. ಹಾಗಾಗಿ ಚಾಮುಂಡಿ ಮಹಿಷ ಎಂಬ ವ್ಯಕ್ತಿಯನ್ನು ಕೊಂದಿರುವುದಕ್ಕೆ ಯಾವುದೇ ಪುರಾಣ, ಚಾರಿತ್ರಿಕ ಇತಿಹಾಸದಲ್ಲಿ ಉಲ್ಲೇಖ ಆಗಿಲ್ಲ ಎಂದರು.

ದ್ರಾವಿಡ ರಾಜರನ್ನು ರಾಕ್ಷಸರು, ದುಷ್ಟರು, ಜೀವ ವಿರೋಧಿಗಳು ಎಂದು ಕೆಟ್ಟದಾಗಿ ಪುರಾಣ ಬರೆದಿದ್ದಾರೆ. ಎಂದ ಅವರು ಯಾವುದೇ ಊರು ಅಥವಾ ಸಂಸ್ಥೆಗೆ ಒಬ್ಬ ವ್ಯಕ್ತಿಯ ಹೆಸರಿಡಲು ಆ ವ್ಯಕ್ತಿ ಒಳ್ಳೆಯವನಾಗಿದ್ದರೆ ಮಾತ್ರ ಇಡುತ್ತಾರೆ, ಕರ್ನಾಟಕದ ಮೈಸೂರು (ಮಹಿಷನಾಡು) ಪಂಜಾಬಿನ ಜಲಂದರ್ ಮತ್ತು ಬಿಹಾರದ ಗಯಾ ( ಬೋದ್ ಗಯಾ) ಜಿಲ್ಲೆಗಳಿಗೆ ರಾಕ್ಷಸರ ಹೆಸರು ಇಟ್ಟಿದ್ದಾರೆ ಎಂದರೆ ಅವರು ಒಳ್ಳೆಯವರಾಗಿದ್ದರು ಎಂದು ಅರ್ಥವಲ್ಲವೆ ? ಎಂದು ಪ್ರಶ್ನಿಸಿದರು.

ಸಂಸದ ಪ್ರತಾಪ್ ಸಿಂಹ ಮತ್ತು ಭಾಷಣಕಾರ ಸೂಲಿಬೆಲೆ ಚಕ್ರವರ್ತಿ ಕುರಿತು ನಾನು ಪಂಥಾಹ್ವಾನ ನೀಡುತ್ತೇನೆ ಮಹಿಷ ಬೌತಿಕ ಅಸ್ತಿತ್ವದಲ್ಲಿದ್ದ ಎಂಬ ಬಗ್ಗೆ ನಾನು ದಾಖಲೆ ನೀಡುತ್ತೇನೆ. ಚಾಮುಂಡಿ ಅಸ್ತಿತ್ವದಲ್ಲಿ ಇದ್ದರು ಎಂಬುದಕ್ಕೆ  ಅವರು ದಾಖಲೆ ನೀಡಲಿ. ಇಲ್ಲವಾದಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ಸವಾಲು ಎಸೆದರು.

ಸಮಾಜಿಕ ವ್ಯವಸ್ಥೆಯಲ್ಲಿ ಮನುವಾದಿಗಳ ಅನಾವಾರಗಳನ್ನು ಪ್ರಶ್ನೆ ಮಾಡಿದರೆ ಆರಂಭದಲ್ಲೇ ತುಳಿದು ಹಾಕುತ್ತಾರೆ. ಇದು ಶತ ಮಾನಗಳಿಂದ ನಡೆದುಕೊಂಡು ಬಂದಿದೆ, ಅದು ಇಂದಿಗೂ ಚಲಾವಣೆಯಲ್ಲಿದೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.

ಕಾರ್ಯಕ್ರಮದಲ್ಲಿ ಪ್ರಜಾ ವಿಮೋಚನಾ ಸೇನೆಯ ರಾಜ್ಯಾಧ್ಯಕ್ಷ ಮಾ.ಮುನಿರಾಜು, ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ, ವಕೀಲರಾದ ಮುನಿರಾಜು, ಛಲವಾದಿ ಮಹಾಸಭಾ ತಾಲ್ಲೂಕು ಅಧ್ಯಕ್ಷ ಗುರುರಾಜಪ್ಪ, ಮಾನವ ಬಧುತ್ವ ವೇದಿಕೆ ಅಧ್ಯಕ್ಷ ವೆಂಕಟೇಶ್, ದಸಂಸ ರಾಜುಸಣ್ಣಕ್ಕಿ, ಪ್ರಜಾವಿಮೋಚನಾ ಸಮಿತಿ ರಾಜ್ಯ ಕಾರ್ಯಾಧ್ಯಕ್ಷ ಹನುಮಣ್ಣ ಗೂಳ್ಯ, ವಡ್ಡರಹಳ್ಳಿ ರಾಜಗೋಪಾಲ್, ಅಜಯ್ ಕುಮಾರ್,ಕರೀಂಸೊಣ್ಣೇನಹಳ್ಳಿ ಮುನಿಯಪ್ಪ, ತಳಗವಾರ ಪುನೀತ್, ಬೆಳವಂಗಲ ಮಹೇಶ್, ಕುಮಾರ್ ಮುಂತಾದವರು ಉಪಸ್ಥಿತರಿದ್ದರು

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

6 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

7 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

11 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

12 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

17 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

19 hours ago