ಮಹಿಷ ಚಾರಿತ್ರಿಕ ಹಾಗೂ ಪೌರಾಣಿಕ ಪುರುಷನೆ ಹೊರತು ಕಾಲ್ಪನಿಕ ವ್ಯಕ್ತಿಯಲ್ಲ-ಚಿಂತಕ ಪ್ರೊ.ವಿಠಲ್ ವಗ್ಗನ್

ದೊಡ್ಡಬಳ್ಳಾಪುರ: ನಮ್ಮ ಅಸ್ತಿತ ಮತ್ತು ಅಸ್ಮಿತೆಯ ಸಂಕೇತ ಮಹಿಷ ಎಂದು ಪ್ರಗತಿಪರ ಚಿಂತಕ ಪ್ರೊ.ವಿಠಲ್ ವಗ್ಗನ್ ಹೇಳಿದರು.

ಮಹಿಷ ಉತ್ಸವ ಆಚರಣ ಸಮಿತಿ ನಗರದ ಕನ್ನಡ ಜಾಗೃತ ಭವನದಲ್ಲಿ ಏರ್ಪಡಿಸಿದ್ದ ಮಹಿಷ ಉತ್ಸವವನ್ನು ಅರಳಿ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಷ ಚಾರಿತ್ರಿಕ ಹಾಗೂ ಪೌರಾಣಿಕ ಪುರುಷನೆ ಹೊರತು ಕಾಲ್ಪನಿಕ ವ್ಯಕ್ತಿಯಲ್ಲ ಎಂದ ಅವರು ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಹೊರ ತಂದಿರುವ ಸಂಶೋಧನಾ ದಾಖಲೆಗಳನ್ನು ಪ್ರದರ್ಶನ ಮಾಡಿದರು.

ಮಹಿಷ ಚಾರಿತ್ರಿಕ ವ್ಯಕ್ತಿ ಎಂಬುದಕ್ಕೆ 2500 ವರ್ಷಗಳ ಇತಿಹಾಸವಿದೆ, ಭಾರತ ಬಹುಸಂಸ್ಕೃತಿಗಳ ದೇಶ. ಭಾರತವನ್ನು ಜ್ಯಾತ್ಯಾತೀತ, ಇಲ್ಲಿನ ಪ್ರತಿ ಉದಾಯವು ಅವರ ಅವರದೆ ಆದ ಸಂಸ್ಕೃತಿಗಳ ಆಚರಣೆಗೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಲಾಗಿದೆ. ಮೈಸೂರು ಚಾಮುಂಡಿ ಕಾಲ್ಪನಿಕ ದೇವಿಯಾಗಿದ್ದು 18 ಪುರಾಣಗಳಲ್ಲಿ ಎಲ್ಲಿಯೂ ಚಾಮುಂಡಿ ಮಹಿಷನ ಕೊಂದ ಬಗ್ಗೆ ಉಲ್ಲೇಖವಿಲ್ಲ ಎಂದ ಅವರು, ಎಲ್ಲ ಪುರಾಣಗಳ ಪ್ರಕಾರ ಚಾಮುಂಡಿ ದೇವಿಗೆ ಸಿಂಹ ವಾಹನವಾಗಿದೆ. ಆದರೆ ಈಗಿನ ಮೈಸೂರು ಚಾಮುಂಡಿಯ ವಾಹನ ಹುಲಿಯಾಗಿದೆ. ಮಹಿಷನನ್ನು ಕೊಂದದ್ದು ಮೈಸೂರಿನಲ್ಲಿ ಅಲ್ಲ. ಕೊಲ್ಕತ್ತಾದಲ್ಲಿ ಅದು ದುರ್ಗೆ ಎಂಬ ಹೆಸರಿನ ಹೆಣ್ಣು ಮಗಳು. ಹಾಗಾಗಿ ಚಾಮುಂಡಿ ಮಹಿಷ ಎಂಬ ವ್ಯಕ್ತಿಯನ್ನು ಕೊಂದಿರುವುದಕ್ಕೆ ಯಾವುದೇ ಪುರಾಣ, ಚಾರಿತ್ರಿಕ ಇತಿಹಾಸದಲ್ಲಿ ಉಲ್ಲೇಖ ಆಗಿಲ್ಲ ಎಂದರು.

ದ್ರಾವಿಡ ರಾಜರನ್ನು ರಾಕ್ಷಸರು, ದುಷ್ಟರು, ಜೀವ ವಿರೋಧಿಗಳು ಎಂದು ಕೆಟ್ಟದಾಗಿ ಪುರಾಣ ಬರೆದಿದ್ದಾರೆ. ಎಂದ ಅವರು ಯಾವುದೇ ಊರು ಅಥವಾ ಸಂಸ್ಥೆಗೆ ಒಬ್ಬ ವ್ಯಕ್ತಿಯ ಹೆಸರಿಡಲು ಆ ವ್ಯಕ್ತಿ ಒಳ್ಳೆಯವನಾಗಿದ್ದರೆ ಮಾತ್ರ ಇಡುತ್ತಾರೆ, ಕರ್ನಾಟಕದ ಮೈಸೂರು (ಮಹಿಷನಾಡು) ಪಂಜಾಬಿನ ಜಲಂದರ್ ಮತ್ತು ಬಿಹಾರದ ಗಯಾ ( ಬೋದ್ ಗಯಾ) ಜಿಲ್ಲೆಗಳಿಗೆ ರಾಕ್ಷಸರ ಹೆಸರು ಇಟ್ಟಿದ್ದಾರೆ ಎಂದರೆ ಅವರು ಒಳ್ಳೆಯವರಾಗಿದ್ದರು ಎಂದು ಅರ್ಥವಲ್ಲವೆ ? ಎಂದು ಪ್ರಶ್ನಿಸಿದರು.

ಸಂಸದ ಪ್ರತಾಪ್ ಸಿಂಹ ಮತ್ತು ಭಾಷಣಕಾರ ಸೂಲಿಬೆಲೆ ಚಕ್ರವರ್ತಿ ಕುರಿತು ನಾನು ಪಂಥಾಹ್ವಾನ ನೀಡುತ್ತೇನೆ ಮಹಿಷ ಬೌತಿಕ ಅಸ್ತಿತ್ವದಲ್ಲಿದ್ದ ಎಂಬ ಬಗ್ಗೆ ನಾನು ದಾಖಲೆ ನೀಡುತ್ತೇನೆ. ಚಾಮುಂಡಿ ಅಸ್ತಿತ್ವದಲ್ಲಿ ಇದ್ದರು ಎಂಬುದಕ್ಕೆ  ಅವರು ದಾಖಲೆ ನೀಡಲಿ. ಇಲ್ಲವಾದಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ಸವಾಲು ಎಸೆದರು.

ಸಮಾಜಿಕ ವ್ಯವಸ್ಥೆಯಲ್ಲಿ ಮನುವಾದಿಗಳ ಅನಾವಾರಗಳನ್ನು ಪ್ರಶ್ನೆ ಮಾಡಿದರೆ ಆರಂಭದಲ್ಲೇ ತುಳಿದು ಹಾಕುತ್ತಾರೆ. ಇದು ಶತ ಮಾನಗಳಿಂದ ನಡೆದುಕೊಂಡು ಬಂದಿದೆ, ಅದು ಇಂದಿಗೂ ಚಲಾವಣೆಯಲ್ಲಿದೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.

ಕಾರ್ಯಕ್ರಮದಲ್ಲಿ ಪ್ರಜಾ ವಿಮೋಚನಾ ಸೇನೆಯ ರಾಜ್ಯಾಧ್ಯಕ್ಷ ಮಾ.ಮುನಿರಾಜು, ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ, ವಕೀಲರಾದ ಮುನಿರಾಜು, ಛಲವಾದಿ ಮಹಾಸಭಾ ತಾಲ್ಲೂಕು ಅಧ್ಯಕ್ಷ ಗುರುರಾಜಪ್ಪ, ಮಾನವ ಬಧುತ್ವ ವೇದಿಕೆ ಅಧ್ಯಕ್ಷ ವೆಂಕಟೇಶ್, ದಸಂಸ ರಾಜುಸಣ್ಣಕ್ಕಿ, ಪ್ರಜಾವಿಮೋಚನಾ ಸಮಿತಿ ರಾಜ್ಯ ಕಾರ್ಯಾಧ್ಯಕ್ಷ ಹನುಮಣ್ಣ ಗೂಳ್ಯ, ವಡ್ಡರಹಳ್ಳಿ ರಾಜಗೋಪಾಲ್, ಅಜಯ್ ಕುಮಾರ್,ಕರೀಂಸೊಣ್ಣೇನಹಳ್ಳಿ ಮುನಿಯಪ್ಪ, ತಳಗವಾರ ಪುನೀತ್, ಬೆಳವಂಗಲ ಮಹೇಶ್, ಕುಮಾರ್ ಮುಂತಾದವರು ಉಪಸ್ಥಿತರಿದ್ದರು

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

11 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

12 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

12 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

12 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

14 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

18 hours ago