ಮಹಿಷ ಚಾರಿತ್ರಿಕ ಹಾಗೂ ಪೌರಾಣಿಕ ಪುರುಷನೆ ಹೊರತು ಕಾಲ್ಪನಿಕ ವ್ಯಕ್ತಿಯಲ್ಲ-ಚಿಂತಕ ಪ್ರೊ.ವಿಠಲ್ ವಗ್ಗನ್

ದೊಡ್ಡಬಳ್ಳಾಪುರ: ನಮ್ಮ ಅಸ್ತಿತ ಮತ್ತು ಅಸ್ಮಿತೆಯ ಸಂಕೇತ ಮಹಿಷ ಎಂದು ಪ್ರಗತಿಪರ ಚಿಂತಕ ಪ್ರೊ.ವಿಠಲ್ ವಗ್ಗನ್ ಹೇಳಿದರು.

ಮಹಿಷ ಉತ್ಸವ ಆಚರಣ ಸಮಿತಿ ನಗರದ ಕನ್ನಡ ಜಾಗೃತ ಭವನದಲ್ಲಿ ಏರ್ಪಡಿಸಿದ್ದ ಮಹಿಷ ಉತ್ಸವವನ್ನು ಅರಳಿ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಷ ಚಾರಿತ್ರಿಕ ಹಾಗೂ ಪೌರಾಣಿಕ ಪುರುಷನೆ ಹೊರತು ಕಾಲ್ಪನಿಕ ವ್ಯಕ್ತಿಯಲ್ಲ ಎಂದ ಅವರು ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಹೊರ ತಂದಿರುವ ಸಂಶೋಧನಾ ದಾಖಲೆಗಳನ್ನು ಪ್ರದರ್ಶನ ಮಾಡಿದರು.

ಮಹಿಷ ಚಾರಿತ್ರಿಕ ವ್ಯಕ್ತಿ ಎಂಬುದಕ್ಕೆ 2500 ವರ್ಷಗಳ ಇತಿಹಾಸವಿದೆ, ಭಾರತ ಬಹುಸಂಸ್ಕೃತಿಗಳ ದೇಶ. ಭಾರತವನ್ನು ಜ್ಯಾತ್ಯಾತೀತ, ಇಲ್ಲಿನ ಪ್ರತಿ ಉದಾಯವು ಅವರ ಅವರದೆ ಆದ ಸಂಸ್ಕೃತಿಗಳ ಆಚರಣೆಗೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಲಾಗಿದೆ. ಮೈಸೂರು ಚಾಮುಂಡಿ ಕಾಲ್ಪನಿಕ ದೇವಿಯಾಗಿದ್ದು 18 ಪುರಾಣಗಳಲ್ಲಿ ಎಲ್ಲಿಯೂ ಚಾಮುಂಡಿ ಮಹಿಷನ ಕೊಂದ ಬಗ್ಗೆ ಉಲ್ಲೇಖವಿಲ್ಲ ಎಂದ ಅವರು, ಎಲ್ಲ ಪುರಾಣಗಳ ಪ್ರಕಾರ ಚಾಮುಂಡಿ ದೇವಿಗೆ ಸಿಂಹ ವಾಹನವಾಗಿದೆ. ಆದರೆ ಈಗಿನ ಮೈಸೂರು ಚಾಮುಂಡಿಯ ವಾಹನ ಹುಲಿಯಾಗಿದೆ. ಮಹಿಷನನ್ನು ಕೊಂದದ್ದು ಮೈಸೂರಿನಲ್ಲಿ ಅಲ್ಲ. ಕೊಲ್ಕತ್ತಾದಲ್ಲಿ ಅದು ದುರ್ಗೆ ಎಂಬ ಹೆಸರಿನ ಹೆಣ್ಣು ಮಗಳು. ಹಾಗಾಗಿ ಚಾಮುಂಡಿ ಮಹಿಷ ಎಂಬ ವ್ಯಕ್ತಿಯನ್ನು ಕೊಂದಿರುವುದಕ್ಕೆ ಯಾವುದೇ ಪುರಾಣ, ಚಾರಿತ್ರಿಕ ಇತಿಹಾಸದಲ್ಲಿ ಉಲ್ಲೇಖ ಆಗಿಲ್ಲ ಎಂದರು.

ದ್ರಾವಿಡ ರಾಜರನ್ನು ರಾಕ್ಷಸರು, ದುಷ್ಟರು, ಜೀವ ವಿರೋಧಿಗಳು ಎಂದು ಕೆಟ್ಟದಾಗಿ ಪುರಾಣ ಬರೆದಿದ್ದಾರೆ. ಎಂದ ಅವರು ಯಾವುದೇ ಊರು ಅಥವಾ ಸಂಸ್ಥೆಗೆ ಒಬ್ಬ ವ್ಯಕ್ತಿಯ ಹೆಸರಿಡಲು ಆ ವ್ಯಕ್ತಿ ಒಳ್ಳೆಯವನಾಗಿದ್ದರೆ ಮಾತ್ರ ಇಡುತ್ತಾರೆ, ಕರ್ನಾಟಕದ ಮೈಸೂರು (ಮಹಿಷನಾಡು) ಪಂಜಾಬಿನ ಜಲಂದರ್ ಮತ್ತು ಬಿಹಾರದ ಗಯಾ ( ಬೋದ್ ಗಯಾ) ಜಿಲ್ಲೆಗಳಿಗೆ ರಾಕ್ಷಸರ ಹೆಸರು ಇಟ್ಟಿದ್ದಾರೆ ಎಂದರೆ ಅವರು ಒಳ್ಳೆಯವರಾಗಿದ್ದರು ಎಂದು ಅರ್ಥವಲ್ಲವೆ ? ಎಂದು ಪ್ರಶ್ನಿಸಿದರು.

ಸಂಸದ ಪ್ರತಾಪ್ ಸಿಂಹ ಮತ್ತು ಭಾಷಣಕಾರ ಸೂಲಿಬೆಲೆ ಚಕ್ರವರ್ತಿ ಕುರಿತು ನಾನು ಪಂಥಾಹ್ವಾನ ನೀಡುತ್ತೇನೆ ಮಹಿಷ ಬೌತಿಕ ಅಸ್ತಿತ್ವದಲ್ಲಿದ್ದ ಎಂಬ ಬಗ್ಗೆ ನಾನು ದಾಖಲೆ ನೀಡುತ್ತೇನೆ. ಚಾಮುಂಡಿ ಅಸ್ತಿತ್ವದಲ್ಲಿ ಇದ್ದರು ಎಂಬುದಕ್ಕೆ  ಅವರು ದಾಖಲೆ ನೀಡಲಿ. ಇಲ್ಲವಾದಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ಸವಾಲು ಎಸೆದರು.

ಸಮಾಜಿಕ ವ್ಯವಸ್ಥೆಯಲ್ಲಿ ಮನುವಾದಿಗಳ ಅನಾವಾರಗಳನ್ನು ಪ್ರಶ್ನೆ ಮಾಡಿದರೆ ಆರಂಭದಲ್ಲೇ ತುಳಿದು ಹಾಕುತ್ತಾರೆ. ಇದು ಶತ ಮಾನಗಳಿಂದ ನಡೆದುಕೊಂಡು ಬಂದಿದೆ, ಅದು ಇಂದಿಗೂ ಚಲಾವಣೆಯಲ್ಲಿದೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.

ಕಾರ್ಯಕ್ರಮದಲ್ಲಿ ಪ್ರಜಾ ವಿಮೋಚನಾ ಸೇನೆಯ ರಾಜ್ಯಾಧ್ಯಕ್ಷ ಮಾ.ಮುನಿರಾಜು, ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ, ವಕೀಲರಾದ ಮುನಿರಾಜು, ಛಲವಾದಿ ಮಹಾಸಭಾ ತಾಲ್ಲೂಕು ಅಧ್ಯಕ್ಷ ಗುರುರಾಜಪ್ಪ, ಮಾನವ ಬಧುತ್ವ ವೇದಿಕೆ ಅಧ್ಯಕ್ಷ ವೆಂಕಟೇಶ್, ದಸಂಸ ರಾಜುಸಣ್ಣಕ್ಕಿ, ಪ್ರಜಾವಿಮೋಚನಾ ಸಮಿತಿ ರಾಜ್ಯ ಕಾರ್ಯಾಧ್ಯಕ್ಷ ಹನುಮಣ್ಣ ಗೂಳ್ಯ, ವಡ್ಡರಹಳ್ಳಿ ರಾಜಗೋಪಾಲ್, ಅಜಯ್ ಕುಮಾರ್,ಕರೀಂಸೊಣ್ಣೇನಹಳ್ಳಿ ಮುನಿಯಪ್ಪ, ತಳಗವಾರ ಪುನೀತ್, ಬೆಳವಂಗಲ ಮಹೇಶ್, ಕುಮಾರ್ ಮುಂತಾದವರು ಉಪಸ್ಥಿತರಿದ್ದರು

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 hour ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

2 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

4 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

4 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

8 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

10 hours ago