ಮಹಿಷ ಚಾರಿತ್ರಿಕ ಹಾಗೂ ಪೌರಾಣಿಕ ಪುರುಷನೆ ಹೊರತು ಕಾಲ್ಪನಿಕ ವ್ಯಕ್ತಿಯಲ್ಲ-ಚಿಂತಕ ಪ್ರೊ.ವಿಠಲ್ ವಗ್ಗನ್

ದೊಡ್ಡಬಳ್ಳಾಪುರ: ನಮ್ಮ ಅಸ್ತಿತ ಮತ್ತು ಅಸ್ಮಿತೆಯ ಸಂಕೇತ ಮಹಿಷ ಎಂದು ಪ್ರಗತಿಪರ ಚಿಂತಕ ಪ್ರೊ.ವಿಠಲ್ ವಗ್ಗನ್ ಹೇಳಿದರು.

ಮಹಿಷ ಉತ್ಸವ ಆಚರಣ ಸಮಿತಿ ನಗರದ ಕನ್ನಡ ಜಾಗೃತ ಭವನದಲ್ಲಿ ಏರ್ಪಡಿಸಿದ್ದ ಮಹಿಷ ಉತ್ಸವವನ್ನು ಅರಳಿ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಷ ಚಾರಿತ್ರಿಕ ಹಾಗೂ ಪೌರಾಣಿಕ ಪುರುಷನೆ ಹೊರತು ಕಾಲ್ಪನಿಕ ವ್ಯಕ್ತಿಯಲ್ಲ ಎಂದ ಅವರು ಕೇಂದ್ರ ಸರ್ಕಾರದ ಪುರಾತತ್ವ ಇಲಾಖೆ ಹೊರ ತಂದಿರುವ ಸಂಶೋಧನಾ ದಾಖಲೆಗಳನ್ನು ಪ್ರದರ್ಶನ ಮಾಡಿದರು.

ಮಹಿಷ ಚಾರಿತ್ರಿಕ ವ್ಯಕ್ತಿ ಎಂಬುದಕ್ಕೆ 2500 ವರ್ಷಗಳ ಇತಿಹಾಸವಿದೆ, ಭಾರತ ಬಹುಸಂಸ್ಕೃತಿಗಳ ದೇಶ. ಭಾರತವನ್ನು ಜ್ಯಾತ್ಯಾತೀತ, ಇಲ್ಲಿನ ಪ್ರತಿ ಉದಾಯವು ಅವರ ಅವರದೆ ಆದ ಸಂಸ್ಕೃತಿಗಳ ಆಚರಣೆಗೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಲಾಗಿದೆ. ಮೈಸೂರು ಚಾಮುಂಡಿ ಕಾಲ್ಪನಿಕ ದೇವಿಯಾಗಿದ್ದು 18 ಪುರಾಣಗಳಲ್ಲಿ ಎಲ್ಲಿಯೂ ಚಾಮುಂಡಿ ಮಹಿಷನ ಕೊಂದ ಬಗ್ಗೆ ಉಲ್ಲೇಖವಿಲ್ಲ ಎಂದ ಅವರು, ಎಲ್ಲ ಪುರಾಣಗಳ ಪ್ರಕಾರ ಚಾಮುಂಡಿ ದೇವಿಗೆ ಸಿಂಹ ವಾಹನವಾಗಿದೆ. ಆದರೆ ಈಗಿನ ಮೈಸೂರು ಚಾಮುಂಡಿಯ ವಾಹನ ಹುಲಿಯಾಗಿದೆ. ಮಹಿಷನನ್ನು ಕೊಂದದ್ದು ಮೈಸೂರಿನಲ್ಲಿ ಅಲ್ಲ. ಕೊಲ್ಕತ್ತಾದಲ್ಲಿ ಅದು ದುರ್ಗೆ ಎಂಬ ಹೆಸರಿನ ಹೆಣ್ಣು ಮಗಳು. ಹಾಗಾಗಿ ಚಾಮುಂಡಿ ಮಹಿಷ ಎಂಬ ವ್ಯಕ್ತಿಯನ್ನು ಕೊಂದಿರುವುದಕ್ಕೆ ಯಾವುದೇ ಪುರಾಣ, ಚಾರಿತ್ರಿಕ ಇತಿಹಾಸದಲ್ಲಿ ಉಲ್ಲೇಖ ಆಗಿಲ್ಲ ಎಂದರು.

ದ್ರಾವಿಡ ರಾಜರನ್ನು ರಾಕ್ಷಸರು, ದುಷ್ಟರು, ಜೀವ ವಿರೋಧಿಗಳು ಎಂದು ಕೆಟ್ಟದಾಗಿ ಪುರಾಣ ಬರೆದಿದ್ದಾರೆ. ಎಂದ ಅವರು ಯಾವುದೇ ಊರು ಅಥವಾ ಸಂಸ್ಥೆಗೆ ಒಬ್ಬ ವ್ಯಕ್ತಿಯ ಹೆಸರಿಡಲು ಆ ವ್ಯಕ್ತಿ ಒಳ್ಳೆಯವನಾಗಿದ್ದರೆ ಮಾತ್ರ ಇಡುತ್ತಾರೆ, ಕರ್ನಾಟಕದ ಮೈಸೂರು (ಮಹಿಷನಾಡು) ಪಂಜಾಬಿನ ಜಲಂದರ್ ಮತ್ತು ಬಿಹಾರದ ಗಯಾ ( ಬೋದ್ ಗಯಾ) ಜಿಲ್ಲೆಗಳಿಗೆ ರಾಕ್ಷಸರ ಹೆಸರು ಇಟ್ಟಿದ್ದಾರೆ ಎಂದರೆ ಅವರು ಒಳ್ಳೆಯವರಾಗಿದ್ದರು ಎಂದು ಅರ್ಥವಲ್ಲವೆ ? ಎಂದು ಪ್ರಶ್ನಿಸಿದರು.

ಸಂಸದ ಪ್ರತಾಪ್ ಸಿಂಹ ಮತ್ತು ಭಾಷಣಕಾರ ಸೂಲಿಬೆಲೆ ಚಕ್ರವರ್ತಿ ಕುರಿತು ನಾನು ಪಂಥಾಹ್ವಾನ ನೀಡುತ್ತೇನೆ ಮಹಿಷ ಬೌತಿಕ ಅಸ್ತಿತ್ವದಲ್ಲಿದ್ದ ಎಂಬ ಬಗ್ಗೆ ನಾನು ದಾಖಲೆ ನೀಡುತ್ತೇನೆ. ಚಾಮುಂಡಿ ಅಸ್ತಿತ್ವದಲ್ಲಿ ಇದ್ದರು ಎಂಬುದಕ್ಕೆ  ಅವರು ದಾಖಲೆ ನೀಡಲಿ. ಇಲ್ಲವಾದಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ಸವಾಲು ಎಸೆದರು.

ಸಮಾಜಿಕ ವ್ಯವಸ್ಥೆಯಲ್ಲಿ ಮನುವಾದಿಗಳ ಅನಾವಾರಗಳನ್ನು ಪ್ರಶ್ನೆ ಮಾಡಿದರೆ ಆರಂಭದಲ್ಲೇ ತುಳಿದು ಹಾಕುತ್ತಾರೆ. ಇದು ಶತ ಮಾನಗಳಿಂದ ನಡೆದುಕೊಂಡು ಬಂದಿದೆ, ಅದು ಇಂದಿಗೂ ಚಲಾವಣೆಯಲ್ಲಿದೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.

ಕಾರ್ಯಕ್ರಮದಲ್ಲಿ ಪ್ರಜಾ ವಿಮೋಚನಾ ಸೇನೆಯ ರಾಜ್ಯಾಧ್ಯಕ್ಷ ಮಾ.ಮುನಿರಾಜು, ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ, ವಕೀಲರಾದ ಮುನಿರಾಜು, ಛಲವಾದಿ ಮಹಾಸಭಾ ತಾಲ್ಲೂಕು ಅಧ್ಯಕ್ಷ ಗುರುರಾಜಪ್ಪ, ಮಾನವ ಬಧುತ್ವ ವೇದಿಕೆ ಅಧ್ಯಕ್ಷ ವೆಂಕಟೇಶ್, ದಸಂಸ ರಾಜುಸಣ್ಣಕ್ಕಿ, ಪ್ರಜಾವಿಮೋಚನಾ ಸಮಿತಿ ರಾಜ್ಯ ಕಾರ್ಯಾಧ್ಯಕ್ಷ ಹನುಮಣ್ಣ ಗೂಳ್ಯ, ವಡ್ಡರಹಳ್ಳಿ ರಾಜಗೋಪಾಲ್, ಅಜಯ್ ಕುಮಾರ್,ಕರೀಂಸೊಣ್ಣೇನಹಳ್ಳಿ ಮುನಿಯಪ್ಪ, ತಳಗವಾರ ಪುನೀತ್, ಬೆಳವಂಗಲ ಮಹೇಶ್, ಕುಮಾರ್ ಮುಂತಾದವರು ಉಪಸ್ಥಿತರಿದ್ದರು

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

5 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

24 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago