ಹೈದರಾಬಾದ್ನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಚಿಕನ್ ಬಿರಿಯಾನಿ ತಿಂದ ವ್ಯಕ್ತಿಯೊಬ್ಬನ ಗಂಟಲಲ್ಲಿ ಚಿಕನ್ ತುಂಡು ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.
ರಂಗಾರೆಡ್ಡಿ ಜಿಲ್ಲೆಯ ಶಾದ್ನಗರ ಅಣ್ಣಾರಾಮ್ ಗ್ರಾಮದ ಸನುಗೋಮುಲ ಶ್ರೀಕಾಂತ್ (39) ಮೃತ ದುರ್ದೈವಿ.
ಮೊದಲು ಮದ್ಯ ಸೇವಿಸಿ ಸಾವನ್ನಪ್ಪಿದ್ದಾನೆ ಎಂದು ಊಹಿಸಲಾಗಿತ್ತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು., ಗಂಟಲಲ್ಲಿ ಮಾಂಸದ ತುಂಡು ಸಿಕ್ಕಿ ಉಸಿರುಗಟ್ಟಿ ಮೃತಪಟ್ಟಿರುವುದು ಪತ್ತೆಯಾಗಿದೆ.
ಮೃತ ಶ್ರೀಕಾಂತ್ ಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಹೈದರಾಬಾದ್ ನಲ್ಲಿ ನೆಲೆಸಿರುವ ಸಹೋದರಿಯನ್ನು ಭೇಟಿಯಾಗಲು ಹೈದರಾಬಾದ್ ಗೆ ಬಂದಿದ್ದರು. ತಂಗಿ ಆಗಲೇ ಮನೆ ಖಾಲಿ ಮಾಡಿ ಬೇರೆ ಮನೆಗೆ ಹೋಗಿದ್ದರು. ಆಗ ಸಹೋದರಿಗೆ ಫೋನ್ ಮಾಡಿ ಎಲ್ಲಿದ್ದೀರ ಎಂದು ಕೇಳಿದ್ದಾರೆ. ಆದರೆ ಅವರು ಔತಣಕೂಟದಲ್ಲಿದ್ದೇವೆ ಬರೋದು ತಡವಾಗುತ್ತದೆ ಎಂದು ಹೇಳಿದ್ದಾರೆ.
ಈ ಹಿನ್ನೆಲೆ ಮದ್ಯದಂಗಡಿಯಲ್ಲಿ ಮದ್ಯಪಾನ ಮಾಡಿ ಚಿಕನ್ ಬಿರಿಯಾನಿ ತಿಂದಿದ್ದಾನೆ. ಚಿಕನ್ ತಿನ್ನುವಾಗ ಕೋಳಿಯ ತುಂಡು ಗಂಟಲಿಗೆ ಸಿಲುಕಿ ಉಸಿರುಗಟ್ಟಿ ರಸ್ತೆ ಬದಿ ಕುಸಿದು ಬಿದ್ದಿದ್ದಾರೆ.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…