ಹೈದರಾಬಾದ್ನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಚಿಕನ್ ಬಿರಿಯಾನಿ ತಿಂದ ವ್ಯಕ್ತಿಯೊಬ್ಬನ ಗಂಟಲಲ್ಲಿ ಚಿಕನ್ ತುಂಡು ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.
ರಂಗಾರೆಡ್ಡಿ ಜಿಲ್ಲೆಯ ಶಾದ್ನಗರ ಅಣ್ಣಾರಾಮ್ ಗ್ರಾಮದ ಸನುಗೋಮುಲ ಶ್ರೀಕಾಂತ್ (39) ಮೃತ ದುರ್ದೈವಿ.
ಮೊದಲು ಮದ್ಯ ಸೇವಿಸಿ ಸಾವನ್ನಪ್ಪಿದ್ದಾನೆ ಎಂದು ಊಹಿಸಲಾಗಿತ್ತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು., ಗಂಟಲಲ್ಲಿ ಮಾಂಸದ ತುಂಡು ಸಿಕ್ಕಿ ಉಸಿರುಗಟ್ಟಿ ಮೃತಪಟ್ಟಿರುವುದು ಪತ್ತೆಯಾಗಿದೆ.
ಮೃತ ಶ್ರೀಕಾಂತ್ ಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಹೈದರಾಬಾದ್ ನಲ್ಲಿ ನೆಲೆಸಿರುವ ಸಹೋದರಿಯನ್ನು ಭೇಟಿಯಾಗಲು ಹೈದರಾಬಾದ್ ಗೆ ಬಂದಿದ್ದರು. ತಂಗಿ ಆಗಲೇ ಮನೆ ಖಾಲಿ ಮಾಡಿ ಬೇರೆ ಮನೆಗೆ ಹೋಗಿದ್ದರು. ಆಗ ಸಹೋದರಿಗೆ ಫೋನ್ ಮಾಡಿ ಎಲ್ಲಿದ್ದೀರ ಎಂದು ಕೇಳಿದ್ದಾರೆ. ಆದರೆ ಅವರು ಔತಣಕೂಟದಲ್ಲಿದ್ದೇವೆ ಬರೋದು ತಡವಾಗುತ್ತದೆ ಎಂದು ಹೇಳಿದ್ದಾರೆ.
ಈ ಹಿನ್ನೆಲೆ ಮದ್ಯದಂಗಡಿಯಲ್ಲಿ ಮದ್ಯಪಾನ ಮಾಡಿ ಚಿಕನ್ ಬಿರಿಯಾನಿ ತಿಂದಿದ್ದಾನೆ. ಚಿಕನ್ ತಿನ್ನುವಾಗ ಕೋಳಿಯ ತುಂಡು ಗಂಟಲಿಗೆ ಸಿಲುಕಿ ಉಸಿರುಗಟ್ಟಿ ರಸ್ತೆ ಬದಿ ಕುಸಿದು ಬಿದ್ದಿದ್ದಾರೆ.
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…