ಹೈದರಾಬಾದ್ನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಚಿಕನ್ ಬಿರಿಯಾನಿ ತಿಂದ ವ್ಯಕ್ತಿಯೊಬ್ಬನ ಗಂಟಲಲ್ಲಿ ಚಿಕನ್ ತುಂಡು ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.
ರಂಗಾರೆಡ್ಡಿ ಜಿಲ್ಲೆಯ ಶಾದ್ನಗರ ಅಣ್ಣಾರಾಮ್ ಗ್ರಾಮದ ಸನುಗೋಮುಲ ಶ್ರೀಕಾಂತ್ (39) ಮೃತ ದುರ್ದೈವಿ.
ಮೊದಲು ಮದ್ಯ ಸೇವಿಸಿ ಸಾವನ್ನಪ್ಪಿದ್ದಾನೆ ಎಂದು ಊಹಿಸಲಾಗಿತ್ತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು., ಗಂಟಲಲ್ಲಿ ಮಾಂಸದ ತುಂಡು ಸಿಕ್ಕಿ ಉಸಿರುಗಟ್ಟಿ ಮೃತಪಟ್ಟಿರುವುದು ಪತ್ತೆಯಾಗಿದೆ.
ಮೃತ ಶ್ರೀಕಾಂತ್ ಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಹೈದರಾಬಾದ್ ನಲ್ಲಿ ನೆಲೆಸಿರುವ ಸಹೋದರಿಯನ್ನು ಭೇಟಿಯಾಗಲು ಹೈದರಾಬಾದ್ ಗೆ ಬಂದಿದ್ದರು. ತಂಗಿ ಆಗಲೇ ಮನೆ ಖಾಲಿ ಮಾಡಿ ಬೇರೆ ಮನೆಗೆ ಹೋಗಿದ್ದರು. ಆಗ ಸಹೋದರಿಗೆ ಫೋನ್ ಮಾಡಿ ಎಲ್ಲಿದ್ದೀರ ಎಂದು ಕೇಳಿದ್ದಾರೆ. ಆದರೆ ಅವರು ಔತಣಕೂಟದಲ್ಲಿದ್ದೇವೆ ಬರೋದು ತಡವಾಗುತ್ತದೆ ಎಂದು ಹೇಳಿದ್ದಾರೆ.
ಈ ಹಿನ್ನೆಲೆ ಮದ್ಯದಂಗಡಿಯಲ್ಲಿ ಮದ್ಯಪಾನ ಮಾಡಿ ಚಿಕನ್ ಬಿರಿಯಾನಿ ತಿಂದಿದ್ದಾನೆ. ಚಿಕನ್ ತಿನ್ನುವಾಗ ಕೋಳಿಯ ತುಂಡು ಗಂಟಲಿಗೆ ಸಿಲುಕಿ ಉಸಿರುಗಟ್ಟಿ ರಸ್ತೆ ಬದಿ ಕುಸಿದು ಬಿದ್ದಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…