ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ರೈಲ್ವೆ ನಿಲ್ದಾಣ ಹಾಗೂ ಘಾಟಿ ಕ್ಷೇತ್ರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಹಾಗೂ ಕರಡಿಗಳ ಉಪಟಳ ಹೆಚ್ಚಾಗಿದೆ.
ರೈತರ ಕೃಷಿ ಜಮೀನುಗಳಲ್ಲಿ ಚಿರತೆ ಹಾಗೂ ಕರಡಿಯ ಹೆಜ್ಜೆ ಗುರುತುಗಳು ಕಂಡುಬಂದಿದ್ದು, ರೈತರು ಭಯಭೀತರಾಗಿದ್ದಾರೆ. ಇದೀಗ ಬಿತ್ತನೆ ಮಾಡುವ ಸಮಯ. ರೈತರು ತಮ್ಮ ಕೃಷಿ ಜಮೀನುಗಳಲ್ಲಿ ಬಿತ್ತನೆ ಕಾರ್ಯ ಪ್ರಾರಂಭಿಸಿದ್ದಾರೆ. ರೈತರು ತಮ್ಮ ಹೊಲಗಳಲ್ಲಿ ರಾಗಿ, ಜೋಳ, ಕಾಳುಗಳು ಬಿತ್ತನೆ ಮಾಡುವ ಸಂದರ್ಭದಲ್ಲಿ ಚಿರತೆ ಹಾಗೂ ಕರಡಿಯ ಹೆಜ್ಜೆ ಕಂಡುಬಂದಿದೆ. ಇದನ್ನು ನೋಡಿದ ರೈತರು ಜೀವ ಭಯದಲ್ಲಿ ಹೊಲದಲ್ಲಿ ಕೆಲಸ ಮಾಡುವ ಸ್ಥಿತಿಯಲ್ಲಿ ಇದ್ದಾರೆ.
ಇತ್ತೀಚೆಗೆ ತೋಟದ ಮನೆ ಬಳಿ ಇದ್ದ ಮೂರು ನಾಯಿಗಳನ್ನು ಚಿರತೆ ಹೊತ್ತೊಯ್ದು ಬಲಿ ಪಡೆದಿತ್ತು. ಈ ಕುರಿತು ಅರಣ್ಯ ಇಲಾಖೆ ಗಮನಕ್ಕೆ ತಂದು ತೋಟದ ಮನೆ ಬಳಿ ಬೋನ್ ಇರಿಸಲಾಗಿದೆ. ಆದರೆ, ಚಿರತೆಯು ಬೋನಿಗೆ ಕ್ಯಾರೆ ಎನ್ನದೇ ನಾಯಿಯನ್ನು ಬೇಟೆಯಾಡಲು ಬಂದಿದೆ. ನಾಯಿ ಬೋನಿನೊಳಗಡೆ ಇದ್ದಿದ್ದರಿಂದ ಬಂದಿದ ದಾರಿಗೆ ಸುಂಕವಿಲ್ಲದಂತೆ ಬರಿಗೈಯಲ್ಲಿ ವಾಪಸ್ ಆಗಿದೆ.
ಇದೀಗ ಚಿರತೆ ಜೊತೆಗೆ ಕರಡಿ ಕೂಡ ರೈತರ ಹೊಲಗಳಲ್ಲಿ ಓಡಾಡಿರುವ ಹೆಜ್ಜೆ ಗುರುತುಗಳು ಕಂಡುಬಂದಿವೆ. ಇದರಿಂದ ಸಾರ್ವಜನಿಕರು ಹಾಗೂ ರೈತರು ಜೀವ ಅಂಗೈಯಲ್ಲಿಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಚಿರತೆ ಹಾಗೂ ಕರಡಿಯನ್ನು ಸೆರೆ ಹಿಡಿದು ಮುಂದೆ ಆಗುವ ಅನಾಹುತವನ್ನು ತಪ್ಪಿಸಬೇಕು ಎಂದು ಜನ ಮನವಿ ಮಾಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್…
ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…