ಮಾಕಳಿ ರೈಲ್ವೆ ನಿಲ್ದಾಣ ಹಾಗೂ ಘಾಟಿ ಸಮೀಪ ಹೆಚ್ಚಾದ ಚಿರತೆ ಹಾಗೂ ಕರಡಿಗಳ ಉಪಟಳ: ಚಿರತೆ, ಕರಡಿ ಹೆಜ್ಜೆಗುರುತು ಪತ್ತೆ; ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ರೈಲ್ವೆ ನಿಲ್ದಾಣ ಹಾಗೂ ಘಾಟಿ ಕ್ಷೇತ್ರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಹಾಗೂ ಕರಡಿಗಳ ಉಪಟಳ ಹೆಚ್ಚಾಗಿದೆ.

ರೈತರ ಕೃಷಿ ಜಮೀನುಗಳಲ್ಲಿ ಚಿರತೆ ಹಾಗೂ ಕರಡಿಯ ಹೆಜ್ಜೆ ಗುರುತುಗಳು ಕಂಡುಬಂದಿದ್ದು, ರೈತರು ಭಯಭೀತರಾಗಿದ್ದಾರೆ. ಇದೀಗ ಬಿತ್ತನೆ ಮಾಡುವ ಸಮಯ. ರೈತರು ತಮ್ಮ ಕೃಷಿ ಜಮೀನುಗಳಲ್ಲಿ ಬಿತ್ತನೆ ಕಾರ್ಯ ಪ್ರಾರಂಭಿಸಿದ್ದಾರೆ. ರೈತರು ತಮ್ಮ ಹೊಲಗಳಲ್ಲಿ ರಾಗಿ, ಜೋಳ, ಕಾಳುಗಳು ಬಿತ್ತನೆ ಮಾಡುವ ಸಂದರ್ಭದಲ್ಲಿ ಚಿರತೆ ಹಾಗೂ ಕರಡಿಯ ಹೆಜ್ಜೆ ಕಂಡುಬಂದಿದೆ. ಇದನ್ನು ನೋಡಿದ ರೈತರು ಜೀವ ಭಯದಲ್ಲಿ ಹೊಲದಲ್ಲಿ ಕೆಲಸ ಮಾಡುವ ಸ್ಥಿತಿಯಲ್ಲಿ ಇದ್ದಾರೆ.

ಇತ್ತೀಚೆಗೆ ತೋಟದ ಮನೆ ಬಳಿ ಇದ್ದ ಮೂರು ನಾಯಿಗಳನ್ನು ಚಿರತೆ ಹೊತ್ತೊಯ್ದು ಬಲಿ ಪಡೆದಿತ್ತು. ಈ ಕುರಿತು ಅರಣ್ಯ ಇಲಾಖೆ ಗಮನಕ್ಕೆ ತಂದು ತೋಟದ ಮನೆ ಬಳಿ ಬೋನ್ ಇರಿಸಲಾಗಿದೆ. ಆದರೆ, ಚಿರತೆಯು ಬೋನಿಗೆ ಕ್ಯಾರೆ ಎನ್ನದೇ ನಾಯಿಯನ್ನು ಬೇಟೆಯಾಡಲು ಬಂದಿದೆ.  ನಾಯಿ ಬೋನಿನೊಳಗಡೆ ಇದ್ದಿದ್ದರಿಂದ ಬಂದಿದ ದಾರಿಗೆ ಸುಂಕವಿಲ್ಲದಂತೆ ಬರಿಗೈಯಲ್ಲಿ ವಾಪಸ್ ಆಗಿದೆ.

ಇದೀಗ ಚಿರತೆ ಜೊತೆಗೆ ಕರಡಿ ಕೂಡ ರೈತರ ಹೊಲಗಳಲ್ಲಿ ಓಡಾಡಿರುವ ಹೆಜ್ಜೆ ಗುರುತುಗಳು ಕಂಡುಬಂದಿವೆ. ಇದರಿಂದ ಸಾರ್ವಜನಿಕರು ಹಾಗೂ ರೈತರು ಜೀವ ಅಂಗೈಯಲ್ಲಿಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಚಿರತೆ ಹಾಗೂ ಕರಡಿಯನ್ನು ಸೆರೆ ಹಿಡಿದು ಮುಂದೆ ಆಗುವ ಅನಾಹುತವನ್ನು ತಪ್ಪಿಸಬೇಕು ಎಂದು ಜನ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

8 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

10 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

12 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

22 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago