ಮಾಕಳಿ ರೈಲ್ವೆ ನಿಲ್ದಾಣ ಹಾಗೂ ಘಾಟಿ ಸಮೀಪ ಹೆಚ್ಚಾದ ಚಿರತೆ ಹಾಗೂ ಕರಡಿಗಳ ಉಪಟಳ: ಚಿರತೆ, ಕರಡಿ ಹೆಜ್ಜೆಗುರುತು ಪತ್ತೆ; ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ರೈಲ್ವೆ ನಿಲ್ದಾಣ ಹಾಗೂ ಘಾಟಿ ಕ್ಷೇತ್ರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಹಾಗೂ ಕರಡಿಗಳ ಉಪಟಳ ಹೆಚ್ಚಾಗಿದೆ.

ರೈತರ ಕೃಷಿ ಜಮೀನುಗಳಲ್ಲಿ ಚಿರತೆ ಹಾಗೂ ಕರಡಿಯ ಹೆಜ್ಜೆ ಗುರುತುಗಳು ಕಂಡುಬಂದಿದ್ದು, ರೈತರು ಭಯಭೀತರಾಗಿದ್ದಾರೆ. ಇದೀಗ ಬಿತ್ತನೆ ಮಾಡುವ ಸಮಯ. ರೈತರು ತಮ್ಮ ಕೃಷಿ ಜಮೀನುಗಳಲ್ಲಿ ಬಿತ್ತನೆ ಕಾರ್ಯ ಪ್ರಾರಂಭಿಸಿದ್ದಾರೆ. ರೈತರು ತಮ್ಮ ಹೊಲಗಳಲ್ಲಿ ರಾಗಿ, ಜೋಳ, ಕಾಳುಗಳು ಬಿತ್ತನೆ ಮಾಡುವ ಸಂದರ್ಭದಲ್ಲಿ ಚಿರತೆ ಹಾಗೂ ಕರಡಿಯ ಹೆಜ್ಜೆ ಕಂಡುಬಂದಿದೆ. ಇದನ್ನು ನೋಡಿದ ರೈತರು ಜೀವ ಭಯದಲ್ಲಿ ಹೊಲದಲ್ಲಿ ಕೆಲಸ ಮಾಡುವ ಸ್ಥಿತಿಯಲ್ಲಿ ಇದ್ದಾರೆ.

ಇತ್ತೀಚೆಗೆ ತೋಟದ ಮನೆ ಬಳಿ ಇದ್ದ ಮೂರು ನಾಯಿಗಳನ್ನು ಚಿರತೆ ಹೊತ್ತೊಯ್ದು ಬಲಿ ಪಡೆದಿತ್ತು. ಈ ಕುರಿತು ಅರಣ್ಯ ಇಲಾಖೆ ಗಮನಕ್ಕೆ ತಂದು ತೋಟದ ಮನೆ ಬಳಿ ಬೋನ್ ಇರಿಸಲಾಗಿದೆ. ಆದರೆ, ಚಿರತೆಯು ಬೋನಿಗೆ ಕ್ಯಾರೆ ಎನ್ನದೇ ನಾಯಿಯನ್ನು ಬೇಟೆಯಾಡಲು ಬಂದಿದೆ.  ನಾಯಿ ಬೋನಿನೊಳಗಡೆ ಇದ್ದಿದ್ದರಿಂದ ಬಂದಿದ ದಾರಿಗೆ ಸುಂಕವಿಲ್ಲದಂತೆ ಬರಿಗೈಯಲ್ಲಿ ವಾಪಸ್ ಆಗಿದೆ.

ಇದೀಗ ಚಿರತೆ ಜೊತೆಗೆ ಕರಡಿ ಕೂಡ ರೈತರ ಹೊಲಗಳಲ್ಲಿ ಓಡಾಡಿರುವ ಹೆಜ್ಜೆ ಗುರುತುಗಳು ಕಂಡುಬಂದಿವೆ. ಇದರಿಂದ ಸಾರ್ವಜನಿಕರು ಹಾಗೂ ರೈತರು ಜೀವ ಅಂಗೈಯಲ್ಲಿಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಚಿರತೆ ಹಾಗೂ ಕರಡಿಯನ್ನು ಸೆರೆ ಹಿಡಿದು ಮುಂದೆ ಆಗುವ ಅನಾಹುತವನ್ನು ತಪ್ಪಿಸಬೇಕು ಎಂದು ಜನ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

2 minutes ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

50 minutes ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

2 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

2 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

10 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago