ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ರೈಲ್ವೆ ನಿಲ್ದಾಣ ಹಾಗೂ ಘಾಟಿ ಕ್ಷೇತ್ರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಹಾಗೂ ಕರಡಿಗಳ ಉಪಟಳ ಹೆಚ್ಚಾಗಿದೆ.
ರೈತರ ಕೃಷಿ ಜಮೀನುಗಳಲ್ಲಿ ಚಿರತೆ ಹಾಗೂ ಕರಡಿಯ ಹೆಜ್ಜೆ ಗುರುತುಗಳು ಕಂಡುಬಂದಿದ್ದು, ರೈತರು ಭಯಭೀತರಾಗಿದ್ದಾರೆ. ಇದೀಗ ಬಿತ್ತನೆ ಮಾಡುವ ಸಮಯ. ರೈತರು ತಮ್ಮ ಕೃಷಿ ಜಮೀನುಗಳಲ್ಲಿ ಬಿತ್ತನೆ ಕಾರ್ಯ ಪ್ರಾರಂಭಿಸಿದ್ದಾರೆ. ರೈತರು ತಮ್ಮ ಹೊಲಗಳಲ್ಲಿ ರಾಗಿ, ಜೋಳ, ಕಾಳುಗಳು ಬಿತ್ತನೆ ಮಾಡುವ ಸಂದರ್ಭದಲ್ಲಿ ಚಿರತೆ ಹಾಗೂ ಕರಡಿಯ ಹೆಜ್ಜೆ ಕಂಡುಬಂದಿದೆ. ಇದನ್ನು ನೋಡಿದ ರೈತರು ಜೀವ ಭಯದಲ್ಲಿ ಹೊಲದಲ್ಲಿ ಕೆಲಸ ಮಾಡುವ ಸ್ಥಿತಿಯಲ್ಲಿ ಇದ್ದಾರೆ.
ಇತ್ತೀಚೆಗೆ ತೋಟದ ಮನೆ ಬಳಿ ಇದ್ದ ಮೂರು ನಾಯಿಗಳನ್ನು ಚಿರತೆ ಹೊತ್ತೊಯ್ದು ಬಲಿ ಪಡೆದಿತ್ತು. ಈ ಕುರಿತು ಅರಣ್ಯ ಇಲಾಖೆ ಗಮನಕ್ಕೆ ತಂದು ತೋಟದ ಮನೆ ಬಳಿ ಬೋನ್ ಇರಿಸಲಾಗಿದೆ. ಆದರೆ, ಚಿರತೆಯು ಬೋನಿಗೆ ಕ್ಯಾರೆ ಎನ್ನದೇ ನಾಯಿಯನ್ನು ಬೇಟೆಯಾಡಲು ಬಂದಿದೆ. ನಾಯಿ ಬೋನಿನೊಳಗಡೆ ಇದ್ದಿದ್ದರಿಂದ ಬಂದಿದ ದಾರಿಗೆ ಸುಂಕವಿಲ್ಲದಂತೆ ಬರಿಗೈಯಲ್ಲಿ ವಾಪಸ್ ಆಗಿದೆ.
ಇದೀಗ ಚಿರತೆ ಜೊತೆಗೆ ಕರಡಿ ಕೂಡ ರೈತರ ಹೊಲಗಳಲ್ಲಿ ಓಡಾಡಿರುವ ಹೆಜ್ಜೆ ಗುರುತುಗಳು ಕಂಡುಬಂದಿವೆ. ಇದರಿಂದ ಸಾರ್ವಜನಿಕರು ಹಾಗೂ ರೈತರು ಜೀವ ಅಂಗೈಯಲ್ಲಿಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಚಿರತೆ ಹಾಗೂ ಕರಡಿಯನ್ನು ಸೆರೆ ಹಿಡಿದು ಮುಂದೆ ಆಗುವ ಅನಾಹುತವನ್ನು ತಪ್ಪಿಸಬೇಕು ಎಂದು ಜನ ಮನವಿ ಮಾಡಿದ್ದಾರೆ.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…