ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ರೈಲ್ವೆ ನಿಲ್ದಾಣ ಹಾಗೂ ಘಾಟಿ ಕ್ಷೇತ್ರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಹಾಗೂ ಕರಡಿಗಳ ಉಪಟಳ ಹೆಚ್ಚಾಗಿದೆ.
ರೈತರ ಕೃಷಿ ಜಮೀನುಗಳಲ್ಲಿ ಚಿರತೆ ಹಾಗೂ ಕರಡಿಯ ಹೆಜ್ಜೆ ಗುರುತುಗಳು ಕಂಡುಬಂದಿದ್ದು, ರೈತರು ಭಯಭೀತರಾಗಿದ್ದಾರೆ. ಇದೀಗ ಬಿತ್ತನೆ ಮಾಡುವ ಸಮಯ. ರೈತರು ತಮ್ಮ ಕೃಷಿ ಜಮೀನುಗಳಲ್ಲಿ ಬಿತ್ತನೆ ಕಾರ್ಯ ಪ್ರಾರಂಭಿಸಿದ್ದಾರೆ. ರೈತರು ತಮ್ಮ ಹೊಲಗಳಲ್ಲಿ ರಾಗಿ, ಜೋಳ, ಕಾಳುಗಳು ಬಿತ್ತನೆ ಮಾಡುವ ಸಂದರ್ಭದಲ್ಲಿ ಚಿರತೆ ಹಾಗೂ ಕರಡಿಯ ಹೆಜ್ಜೆ ಕಂಡುಬಂದಿದೆ. ಇದನ್ನು ನೋಡಿದ ರೈತರು ಜೀವ ಭಯದಲ್ಲಿ ಹೊಲದಲ್ಲಿ ಕೆಲಸ ಮಾಡುವ ಸ್ಥಿತಿಯಲ್ಲಿ ಇದ್ದಾರೆ.
ಇತ್ತೀಚೆಗೆ ತೋಟದ ಮನೆ ಬಳಿ ಇದ್ದ ಮೂರು ನಾಯಿಗಳನ್ನು ಚಿರತೆ ಹೊತ್ತೊಯ್ದು ಬಲಿ ಪಡೆದಿತ್ತು. ಈ ಕುರಿತು ಅರಣ್ಯ ಇಲಾಖೆ ಗಮನಕ್ಕೆ ತಂದು ತೋಟದ ಮನೆ ಬಳಿ ಬೋನ್ ಇರಿಸಲಾಗಿದೆ. ಆದರೆ, ಚಿರತೆಯು ಬೋನಿಗೆ ಕ್ಯಾರೆ ಎನ್ನದೇ ನಾಯಿಯನ್ನು ಬೇಟೆಯಾಡಲು ಬಂದಿದೆ. ನಾಯಿ ಬೋನಿನೊಳಗಡೆ ಇದ್ದಿದ್ದರಿಂದ ಬಂದಿದ ದಾರಿಗೆ ಸುಂಕವಿಲ್ಲದಂತೆ ಬರಿಗೈಯಲ್ಲಿ ವಾಪಸ್ ಆಗಿದೆ.
ಇದೀಗ ಚಿರತೆ ಜೊತೆಗೆ ಕರಡಿ ಕೂಡ ರೈತರ ಹೊಲಗಳಲ್ಲಿ ಓಡಾಡಿರುವ ಹೆಜ್ಜೆ ಗುರುತುಗಳು ಕಂಡುಬಂದಿವೆ. ಇದರಿಂದ ಸಾರ್ವಜನಿಕರು ಹಾಗೂ ರೈತರು ಜೀವ ಅಂಗೈಯಲ್ಲಿಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಚಿರತೆ ಹಾಗೂ ಕರಡಿಯನ್ನು ಸೆರೆ ಹಿಡಿದು ಮುಂದೆ ಆಗುವ ಅನಾಹುತವನ್ನು ತಪ್ಪಿಸಬೇಕು ಎಂದು ಜನ ಮನವಿ ಮಾಡಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…