ಮಾಗಿ ಉಳುಮೆಗೆ ಇದು ಸಕಾಲ- ಕೃಷಿ ಇಲಾಖೆ

ಮುಂಗಾರಿನ ಬೇಸಾಯಕ್ಕೆ ಭೂಮಿ ಸಿದ್ದಗೊಳಿಸುವ “ಮಾಗಿ ಉಳುಮೆ” ಪಾರಂಪರಿಕ ಕೃಷಿ ಪದ್ಧತಿಯಾಗಿದೆ. ಮುಂಗಾರಿಗಿಂತ ಮುಂಚೆ ಹಾಗೂ ಹಿಂಗಾರು ಬೆಳೆಗಳ ಕಟಾವಿನ ನಂತರ ಅಂದರೆ ಬೇಸಿಗೆಯಲ್ಲಿ ಕೈಗೊಳ್ಳಬೇಕಾದ ಕಡಿಮೆ ಖರ್ಚಿನ ನೆಲ ಅಗೆತ ಅಥವಾ ತಿರುವಿ ಹಾಕುವಿಕೆಗೆ ಈಗ ಸಕಾಲ ರೈತರು ಈ ಸಮಯದ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಇಲಾಖೆ ತಿಳಿಸಿದೆ.

ಜನವರಿ ಮತ್ತು ಫೆಬ್ರವರಿ ತಿಂಗಳೊಳಗೆ ರೈತರು ಬೆಳೆದ ಕೃಷಿ ಬೆಳೆಗಳನ್ನು ಕಟಾವು ಮಾಡಲು ಸೂಕ್ತ ಸಮಯವಾಗಿದೆ. ಭೂಮಿಯನ್ನು ಹದವಾಗಿ ಉಳುಮೆ ಮಾಡಬೇಕು. ಅಂದರೆ, ಪೂರ್ಣ ಅವಧಿ ಮುಗಿದ ನಂತರ ಮುಂದಿನ ಹಂಗಾಮಿನಲ್ಲಿ ಬೆಳೆ ಬೆಳೆಯಲು ಭೂಮಿ ಸಿದ್ಧಗೊಳಿಸುವುದಕ್ಕೆ “ಮಾಗಿ ಉಳುಮೆ” ಎನ್ನುವರು.

ಸಾಮಾನ್ಯವಾಗಿ ನೀರಾವರಿ ಸೌಲಭ್ಯವಿದ್ದಲ್ಲಿ ಮಾತ್ರ ರೈತರು ಬೇಸಿಗೆ ಹಂಗಾಮಿನಲ್ಲಿ ಬೆಳೆಗಳನ್ನು ಬೆಳೆಯುತ್ತಾರೆ. ಬೇಸಿಗೆ ಬೆಳೆಗೆ ಅವಕಾಶವಿಲ್ಲದ ಸಂದರ್ಭದಲ್ಲಿ ಮಾರ್ಚ್, ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಮೊದಲ ಮಳೆ ಬಿದ್ದ ತಕ್ಷಣ ಟ್ರಾಕ್ಟರ್ ಚಾಲಿತ ನೇಗಿಲು ಅಥವಾ ಎತ್ತಿನ ನೇಗಿಲಿನಿಂದ ಉಳುಮೆಯನ್ನು ಕೈಗೊಳ್ಳಬೇಕು. ಕೆಂಪು ಮಣ್ಣಿನಲ್ಲಿ ವರ್ಷಕ್ಕೊಮ್ಮೆ ಮಾಗಿ ಉಳುಮೆ ಕೈಗೊಳ್ಳಬೇಕು.

ಬಹುತೇಕ ರೈತರು ಮಾಗಿ ಉಳುಮೆ ಮಾಡುವುದನ್ನು ಮರೆತಿರುವುದರಿಂದ ಅನೇಕ ರೀತಿಯ ಸಸ್ಯರೋಗ, ಕೀಟರೋಗ ಭಾದೆ ಹೆಚ್ಚಾಗಲು ಕಾರಣವಾಗಿದೆ. ಈ ವರ್ಷದಲ್ಲಿ ಅವಧಿಗಿಂತ ಮುಂಚಿತವಾಗಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಮಾಗಿ ಉಳುಮೆ ಮಾಡಿದರೆ ಮಣ್ಣಿನ ಕೆಳ ಪದರದಲ್ಲಿ ಇರುವ ರೋಗಾಣುಗಳ ಶಿಲೀಂದ್ರಗಳು ನಾಶವಾಗುತ್ತವೆ.

ಮಾಗಿ ಉಳುಮೆಯ ಪ್ರಯೋಜನಗಳು

ಹಿಂದಿನ ಹಂಗಾಮಿನಲ್ಲಿ ಬೆಳೆದ ಬೆಳೆಯ ತ್ಯಾಜ್ಯ ವಸ್ತುಗಳನ್ನು ಮಣ್ಣಿನಲ್ಲಿ ಸೇರುವಂತೆ ಮಾಡಲಾಗುವುದರಿಂದ ತ್ಯಾಜ್ಯವು ಕೊಳೆತು ಸಾವಯವ ಗೊಬ್ಬರವಾಗುತ್ತದೆ ಮಾಗಿ ಉಳುಮೆಯಿಂದ ಮಣ್ಣು ಸಡಿಲಗೊಳ್ಳುತ್ತದೆ. ಇದರಿಂದ ಮಳೆ ನೀರು ಸಾಕಾಷ್ಟು ಪ್ರಮಾಣದಲ್ಲಿ ಭೂಮಿಯಲ್ಲಿ ಇಂಗಲು ಸಹಕಾರಿಯಾಗುತ್ತದೆ. ಹಿಂದಿನ ಹಂಗಾಮುಗಳಲ್ಲಿ ಬೆಳೆದ ಬೆಳೆಗಳಲ್ಲಿದ್ದ ಅಥವಾ ಮಣ್ಣಿನಲ್ಲಿರುವ ಕೀಟ,ಮೊಟ್ಟೆಗಳು ಹಾಗೂ ರೋಗಗಳು ಸೂರ್ಯನ ಬಿಸಿಲಿನ ತಾಪಕ್ಕೆ ನಾಶವಾಗುವುದರಿಂದ ಕೀಟ ಮತ್ತು ರೋಗಗಳನ್ನು ನಿಯಂತ್ರಿಸಬಹುದು.

ಮಾಗಿ ಉಳುಮೆಯನ್ನು ಇಳಿಜಾರಿಗೆ ಅಡ್ಡಲಾಗಿ ಮಾಡುವುದರಿಂದ ಅಕಾಲಿಕ ರಭಸದ ಮಳೆಯಿಂದ ಮಣ್ಣು ಕೊಚ್ಚಿ ಹೋಗದಂತೆ ತಡೆಯಬಹುದು, ಬಿದ್ದಂತಹ ಮಳೆ ನೀರು ಉಳುಮೆಯ ಕಿರುಪಾತಿಗಳಲ್ಲೇ ಶೇಖರಣೆಯಾಗುತ್ತದೆ. ಮಾಗಿ ಉಳುಮೆಯಿಂದ ಕಳೆಗಳಾದ ಗರಿಕೆಯ ಬೇರು ಮತ್ತು ಜೇಕಿನ ಗಡ್ಡೆಗಳನ್ನು ಆರಿಸಿ ತೆಗೆಯಲು ಅನುಕೂಲ ಆಗುವುದರಿಂದ ಬಹುವಾರ್ಷಿಕ ಕಳೆ ನಿಯಂತ್ರಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

6 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

10 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

10 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

13 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago