ಮಾಜಿ ಕೇಂದ್ರ ಸಚಿವ ದಿವಂಗತ ಆರ್.ಎಲ್.ಜಾಲಪ್ಪ 99ನೇ ಹುಟ್ಟುಹಬ್ಬ ಅಂಗವಾಗಿ ವಿವಿಧ ಕಾರ್ಯಕ್ರಮ

ಆರ್.ಎಲ್.ಜಾಲಪ್ಪನವರು ನೇರನಡೆ ಮತ್ತು ನಿಷ್ಠುರ ವ್ಯಕ್ತಿತ್ವದಿಂದಲೇ ಹೆಸರಾದ ಅಪರೂಪದ ರಾಜಕಾರಣಿಯಾಗಿದ್ದರು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ ಹೇಳಿದರು.

ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಶನಿವಾರ ಶ್ರೀ ದೇವರಾಜ ಅರಸ್‌ ಅಂತಾರಾಷ್ಟ್ರೀಯ ವಸತಿ ಶಾಲೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಜಾಲಪ್ಪ ಅವರು ಪರಿಸರ, ಶಿಕ್ಷಣ, ಗ್ರಾಮೀಣಾಭಿವೃದ್ದಿ, ಸಹಕಾರ ಸೇರಿದಂತೆ ವಿವಿಧ ವಲಯಗಳಲ್ಲಿ ಅನೇಕ ಸೇವಾ ಕಾರ್ಯಗಳನ್ನು ಜಾರಿಗೆ ತಂದ ಹೆಗ್ಗಳಿಕೆ ಹೊಂದಿದ್ದಾರೆ. ಅವರು ಸ್ಥಾಪಿಸಿರುವ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಹಿಂದುಳಿದ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮಹತ್ವದ ನೀಡುವ ಕೆಲಸ ಮಾಡುತ್ತಿದೆ ಎಂದರು.

ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಜಾಲಪ್ಪ ಅವರ ಒತ್ತಾಸೆಯಿಂದ ರಾಜ್ಯದಲ್ಲಿ ಜಾರಿಗೆ ಬಂದ ಹಲವು ಯೋಜನೆಗಳು ಇಂದಿಗೂ ಜನಸ್ನೇಹಿಯಾಗಿವೆ. ದೊಡ್ಡಬಳ್ಳಾಪುರದ ಅಪರೆಲ್ ಪಾರ್ಕ್ ಸಾವಿರಾರು ಜನರಿಗೆ ಉದ್ಯೋಗಾವಕಾಶಗಳನ್ನು ನೀಡಿದೆ. ಮುಖ್ಯವಾಗಿ ಮಹಿಳಾ ಉದ್ಯೋಗಿಗಳಿಗೆ ಆಸರೆಯಾಗಿದೆ. ಶೈಕ್ಷಣಿಕವಾಗಿಯೂ ಸಮಾಜವನ್ನು ಸದೃಢವಾಗಿ ಕಟ್ಟುವ ಉದ್ದೇಶದಿಂದ ಅನೇಕ ವಿದ್ಯಾ ಸಂಸ್ಥೆಗಳನ್ನು ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಸ್ಥಾಪಿಸಿ ಗ್ರಾಮೀಣ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕ ವಾತಾವರಣ ನಿರ್ಮಿಸಿದ್ದಾರೆ ಎಂದರು.

*ಪ್ರತಿಭಾ ಪುರಸ್ಕಾರ:*

ಇದೇ ವೇಳೆ ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಶ್ರೀದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ವಿಜಯಲಕ್ಷ್ಮಿ-ಆರ್.ಎಲ್.ಜಾಲಪ್ಪ ಶೈಕ್ಷಣಿಕ ದತ್ತಿ ಟ್ರಸ್ಟಿ ಎಂ.ಆರ್.ಶ್ರೀನಿವಾಸ್, ಲಯನ್ಸ್‌ ಕ್ಲಬ್‌ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ ಅಧ್ಯಕ್ಷ ಜೆ.ಆರ್.ರಾಕೇಶ್, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್‌ಕಾರ್ತಿಕ್, ಅಕಾಡೆಮಿಕ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ, ಎಒ ರಮೇಶ್‌ಕುಮಾರ್, ಕೃಷ್ಣಪ್ಪ, ವಿವಿಧ ಶೈಕ್ಷಣಿಕ ಘಟಕಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


*ರೋಗಿಗಳಿಗೆ ಹಾಲು-ಹಣ್ಣು ವಿತರಣೆ:*
ಜಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಸ್ಟಿಟ್ಯೂಷನ್ ಸಹಯೋಗದಲ್ಲಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಾಲು, ಬ್ರೆಡ್, ಹಣ್ಣುಗಳನ್ನು ವಿತರಿಸಲಾಯಿತು. ತೂಬಗೆರೆಯ ಆರ್.ಎಲ್.ಜಾಲಪ್ಪ ವೃದ್ದಾಶ್ರಮದಲ್ಲಿನ ಆಶ್ರಿತರಿಗೆ ಸವಲತ್ತುಗಳ ವಿತರಣೆ ನಡೆಯಿತು. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್‍ಯಕ್ರಮಗಳು ನಡೆದವು.

ಜಾಲಪ್ಪ ಸ್ಮೃತಿವನ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಿಹಿ ಹಂಚಿಕೆ ನಡೆಯಿತು.

Ramesh Babu

Journalist

Recent Posts

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

42 minutes ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

2 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

21 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

23 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

24 hours ago