ಮಾಜಿ ಕೇಂದ್ರ ಸಚಿವ ದಿವಂಗತ ಆರ್.ಎಲ್.ಜಾಲಪ್ಪ 99ನೇ ಹುಟ್ಟುಹಬ್ಬ ಅಂಗವಾಗಿ ವಿವಿಧ ಕಾರ್ಯಕ್ರಮ

ಆರ್.ಎಲ್.ಜಾಲಪ್ಪನವರು ನೇರನಡೆ ಮತ್ತು ನಿಷ್ಠುರ ವ್ಯಕ್ತಿತ್ವದಿಂದಲೇ ಹೆಸರಾದ ಅಪರೂಪದ ರಾಜಕಾರಣಿಯಾಗಿದ್ದರು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ ಹೇಳಿದರು.

ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಶನಿವಾರ ಶ್ರೀ ದೇವರಾಜ ಅರಸ್‌ ಅಂತಾರಾಷ್ಟ್ರೀಯ ವಸತಿ ಶಾಲೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಜಾಲಪ್ಪ ಅವರು ಪರಿಸರ, ಶಿಕ್ಷಣ, ಗ್ರಾಮೀಣಾಭಿವೃದ್ದಿ, ಸಹಕಾರ ಸೇರಿದಂತೆ ವಿವಿಧ ವಲಯಗಳಲ್ಲಿ ಅನೇಕ ಸೇವಾ ಕಾರ್ಯಗಳನ್ನು ಜಾರಿಗೆ ತಂದ ಹೆಗ್ಗಳಿಕೆ ಹೊಂದಿದ್ದಾರೆ. ಅವರು ಸ್ಥಾಪಿಸಿರುವ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಹಿಂದುಳಿದ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮಹತ್ವದ ನೀಡುವ ಕೆಲಸ ಮಾಡುತ್ತಿದೆ ಎಂದರು.

ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಜಾಲಪ್ಪ ಅವರ ಒತ್ತಾಸೆಯಿಂದ ರಾಜ್ಯದಲ್ಲಿ ಜಾರಿಗೆ ಬಂದ ಹಲವು ಯೋಜನೆಗಳು ಇಂದಿಗೂ ಜನಸ್ನೇಹಿಯಾಗಿವೆ. ದೊಡ್ಡಬಳ್ಳಾಪುರದ ಅಪರೆಲ್ ಪಾರ್ಕ್ ಸಾವಿರಾರು ಜನರಿಗೆ ಉದ್ಯೋಗಾವಕಾಶಗಳನ್ನು ನೀಡಿದೆ. ಮುಖ್ಯವಾಗಿ ಮಹಿಳಾ ಉದ್ಯೋಗಿಗಳಿಗೆ ಆಸರೆಯಾಗಿದೆ. ಶೈಕ್ಷಣಿಕವಾಗಿಯೂ ಸಮಾಜವನ್ನು ಸದೃಢವಾಗಿ ಕಟ್ಟುವ ಉದ್ದೇಶದಿಂದ ಅನೇಕ ವಿದ್ಯಾ ಸಂಸ್ಥೆಗಳನ್ನು ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಸ್ಥಾಪಿಸಿ ಗ್ರಾಮೀಣ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕ ವಾತಾವರಣ ನಿರ್ಮಿಸಿದ್ದಾರೆ ಎಂದರು.

*ಪ್ರತಿಭಾ ಪುರಸ್ಕಾರ:*

ಇದೇ ವೇಳೆ ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಶ್ರೀದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ವಿಜಯಲಕ್ಷ್ಮಿ-ಆರ್.ಎಲ್.ಜಾಲಪ್ಪ ಶೈಕ್ಷಣಿಕ ದತ್ತಿ ಟ್ರಸ್ಟಿ ಎಂ.ಆರ್.ಶ್ರೀನಿವಾಸ್, ಲಯನ್ಸ್‌ ಕ್ಲಬ್‌ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ ಅಧ್ಯಕ್ಷ ಜೆ.ಆರ್.ರಾಕೇಶ್, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್‌ಕಾರ್ತಿಕ್, ಅಕಾಡೆಮಿಕ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ, ಎಒ ರಮೇಶ್‌ಕುಮಾರ್, ಕೃಷ್ಣಪ್ಪ, ವಿವಿಧ ಶೈಕ್ಷಣಿಕ ಘಟಕಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


*ರೋಗಿಗಳಿಗೆ ಹಾಲು-ಹಣ್ಣು ವಿತರಣೆ:*
ಜಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಸ್ಟಿಟ್ಯೂಷನ್ ಸಹಯೋಗದಲ್ಲಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಾಲು, ಬ್ರೆಡ್, ಹಣ್ಣುಗಳನ್ನು ವಿತರಿಸಲಾಯಿತು. ತೂಬಗೆರೆಯ ಆರ್.ಎಲ್.ಜಾಲಪ್ಪ ವೃದ್ದಾಶ್ರಮದಲ್ಲಿನ ಆಶ್ರಿತರಿಗೆ ಸವಲತ್ತುಗಳ ವಿತರಣೆ ನಡೆಯಿತು. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್‍ಯಕ್ರಮಗಳು ನಡೆದವು.

ಜಾಲಪ್ಪ ಸ್ಮೃತಿವನ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಿಹಿ ಹಂಚಿಕೆ ನಡೆಯಿತು.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

56 minutes ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

59 minutes ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

1 hour ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

2 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

3 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

7 hours ago