ಮಾಜಿ ಕೇಂದ್ರ ಸಚಿವ ದಿವಂಗತ ಆರ್.ಎಲ್.ಜಾಲಪ್ಪ 99ನೇ ಹುಟ್ಟುಹಬ್ಬ ಅಂಗವಾಗಿ ವಿವಿಧ ಕಾರ್ಯಕ್ರಮ

ಆರ್.ಎಲ್.ಜಾಲಪ್ಪನವರು ನೇರನಡೆ ಮತ್ತು ನಿಷ್ಠುರ ವ್ಯಕ್ತಿತ್ವದಿಂದಲೇ ಹೆಸರಾದ ಅಪರೂಪದ ರಾಜಕಾರಣಿಯಾಗಿದ್ದರು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ ಹೇಳಿದರು.

ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಶನಿವಾರ ಶ್ರೀ ದೇವರಾಜ ಅರಸ್‌ ಅಂತಾರಾಷ್ಟ್ರೀಯ ವಸತಿ ಶಾಲೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಜಾಲಪ್ಪ ಅವರು ಪರಿಸರ, ಶಿಕ್ಷಣ, ಗ್ರಾಮೀಣಾಭಿವೃದ್ದಿ, ಸಹಕಾರ ಸೇರಿದಂತೆ ವಿವಿಧ ವಲಯಗಳಲ್ಲಿ ಅನೇಕ ಸೇವಾ ಕಾರ್ಯಗಳನ್ನು ಜಾರಿಗೆ ತಂದ ಹೆಗ್ಗಳಿಕೆ ಹೊಂದಿದ್ದಾರೆ. ಅವರು ಸ್ಥಾಪಿಸಿರುವ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಹಿಂದುಳಿದ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮಹತ್ವದ ನೀಡುವ ಕೆಲಸ ಮಾಡುತ್ತಿದೆ ಎಂದರು.

ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಜಾಲಪ್ಪ ಅವರ ಒತ್ತಾಸೆಯಿಂದ ರಾಜ್ಯದಲ್ಲಿ ಜಾರಿಗೆ ಬಂದ ಹಲವು ಯೋಜನೆಗಳು ಇಂದಿಗೂ ಜನಸ್ನೇಹಿಯಾಗಿವೆ. ದೊಡ್ಡಬಳ್ಳಾಪುರದ ಅಪರೆಲ್ ಪಾರ್ಕ್ ಸಾವಿರಾರು ಜನರಿಗೆ ಉದ್ಯೋಗಾವಕಾಶಗಳನ್ನು ನೀಡಿದೆ. ಮುಖ್ಯವಾಗಿ ಮಹಿಳಾ ಉದ್ಯೋಗಿಗಳಿಗೆ ಆಸರೆಯಾಗಿದೆ. ಶೈಕ್ಷಣಿಕವಾಗಿಯೂ ಸಮಾಜವನ್ನು ಸದೃಢವಾಗಿ ಕಟ್ಟುವ ಉದ್ದೇಶದಿಂದ ಅನೇಕ ವಿದ್ಯಾ ಸಂಸ್ಥೆಗಳನ್ನು ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಸ್ಥಾಪಿಸಿ ಗ್ರಾಮೀಣ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕ ವಾತಾವರಣ ನಿರ್ಮಿಸಿದ್ದಾರೆ ಎಂದರು.

*ಪ್ರತಿಭಾ ಪುರಸ್ಕಾರ:*

ಇದೇ ವೇಳೆ ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಶ್ರೀದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ವಿಜಯಲಕ್ಷ್ಮಿ-ಆರ್.ಎಲ್.ಜಾಲಪ್ಪ ಶೈಕ್ಷಣಿಕ ದತ್ತಿ ಟ್ರಸ್ಟಿ ಎಂ.ಆರ್.ಶ್ರೀನಿವಾಸ್, ಲಯನ್ಸ್‌ ಕ್ಲಬ್‌ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ ಅಧ್ಯಕ್ಷ ಜೆ.ಆರ್.ರಾಕೇಶ್, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್‌ಕಾರ್ತಿಕ್, ಅಕಾಡೆಮಿಕ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ, ಎಒ ರಮೇಶ್‌ಕುಮಾರ್, ಕೃಷ್ಣಪ್ಪ, ವಿವಿಧ ಶೈಕ್ಷಣಿಕ ಘಟಕಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


*ರೋಗಿಗಳಿಗೆ ಹಾಲು-ಹಣ್ಣು ವಿತರಣೆ:*
ಜಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಸ್ಟಿಟ್ಯೂಷನ್ ಸಹಯೋಗದಲ್ಲಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಾಲು, ಬ್ರೆಡ್, ಹಣ್ಣುಗಳನ್ನು ವಿತರಿಸಲಾಯಿತು. ತೂಬಗೆರೆಯ ಆರ್.ಎಲ್.ಜಾಲಪ್ಪ ವೃದ್ದಾಶ್ರಮದಲ್ಲಿನ ಆಶ್ರಿತರಿಗೆ ಸವಲತ್ತುಗಳ ವಿತರಣೆ ನಡೆಯಿತು. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್‍ಯಕ್ರಮಗಳು ನಡೆದವು.

ಜಾಲಪ್ಪ ಸ್ಮೃತಿವನ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಿಹಿ ಹಂಚಿಕೆ ನಡೆಯಿತು.

Ramesh Babu

Journalist

Recent Posts

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

25 minutes ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

11 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

15 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

17 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

19 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

2 days ago