ಮಾಜಿ ಕೇಂದ್ರ ಸಚಿವ ದಿವಂಗತ ಆರ್.ಎಲ್.ಜಾಲಪ್ಪ 99ನೇ ಹುಟ್ಟುಹಬ್ಬ ಅಂಗವಾಗಿ ವಿವಿಧ ಕಾರ್ಯಕ್ರಮ

ಆರ್.ಎಲ್.ಜಾಲಪ್ಪನವರು ನೇರನಡೆ ಮತ್ತು ನಿಷ್ಠುರ ವ್ಯಕ್ತಿತ್ವದಿಂದಲೇ ಹೆಸರಾದ ಅಪರೂಪದ ರಾಜಕಾರಣಿಯಾಗಿದ್ದರು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ ಹೇಳಿದರು.

ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಶನಿವಾರ ಶ್ರೀ ದೇವರಾಜ ಅರಸ್‌ ಅಂತಾರಾಷ್ಟ್ರೀಯ ವಸತಿ ಶಾಲೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಜಾಲಪ್ಪ ಅವರು ಪರಿಸರ, ಶಿಕ್ಷಣ, ಗ್ರಾಮೀಣಾಭಿವೃದ್ದಿ, ಸಹಕಾರ ಸೇರಿದಂತೆ ವಿವಿಧ ವಲಯಗಳಲ್ಲಿ ಅನೇಕ ಸೇವಾ ಕಾರ್ಯಗಳನ್ನು ಜಾರಿಗೆ ತಂದ ಹೆಗ್ಗಳಿಕೆ ಹೊಂದಿದ್ದಾರೆ. ಅವರು ಸ್ಥಾಪಿಸಿರುವ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಹಿಂದುಳಿದ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮಹತ್ವದ ನೀಡುವ ಕೆಲಸ ಮಾಡುತ್ತಿದೆ ಎಂದರು.

ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಜಾಲಪ್ಪ ಅವರ ಒತ್ತಾಸೆಯಿಂದ ರಾಜ್ಯದಲ್ಲಿ ಜಾರಿಗೆ ಬಂದ ಹಲವು ಯೋಜನೆಗಳು ಇಂದಿಗೂ ಜನಸ್ನೇಹಿಯಾಗಿವೆ. ದೊಡ್ಡಬಳ್ಳಾಪುರದ ಅಪರೆಲ್ ಪಾರ್ಕ್ ಸಾವಿರಾರು ಜನರಿಗೆ ಉದ್ಯೋಗಾವಕಾಶಗಳನ್ನು ನೀಡಿದೆ. ಮುಖ್ಯವಾಗಿ ಮಹಿಳಾ ಉದ್ಯೋಗಿಗಳಿಗೆ ಆಸರೆಯಾಗಿದೆ. ಶೈಕ್ಷಣಿಕವಾಗಿಯೂ ಸಮಾಜವನ್ನು ಸದೃಢವಾಗಿ ಕಟ್ಟುವ ಉದ್ದೇಶದಿಂದ ಅನೇಕ ವಿದ್ಯಾ ಸಂಸ್ಥೆಗಳನ್ನು ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಸ್ಥಾಪಿಸಿ ಗ್ರಾಮೀಣ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕ ವಾತಾವರಣ ನಿರ್ಮಿಸಿದ್ದಾರೆ ಎಂದರು.

*ಪ್ರತಿಭಾ ಪುರಸ್ಕಾರ:*

ಇದೇ ವೇಳೆ ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಶ್ರೀದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ವಿಜಯಲಕ್ಷ್ಮಿ-ಆರ್.ಎಲ್.ಜಾಲಪ್ಪ ಶೈಕ್ಷಣಿಕ ದತ್ತಿ ಟ್ರಸ್ಟಿ ಎಂ.ಆರ್.ಶ್ರೀನಿವಾಸ್, ಲಯನ್ಸ್‌ ಕ್ಲಬ್‌ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ ಅಧ್ಯಕ್ಷ ಜೆ.ಆರ್.ರಾಕೇಶ್, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್‌ಕಾರ್ತಿಕ್, ಅಕಾಡೆಮಿಕ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ, ಎಒ ರಮೇಶ್‌ಕುಮಾರ್, ಕೃಷ್ಣಪ್ಪ, ವಿವಿಧ ಶೈಕ್ಷಣಿಕ ಘಟಕಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


*ರೋಗಿಗಳಿಗೆ ಹಾಲು-ಹಣ್ಣು ವಿತರಣೆ:*
ಜಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಸ್ಟಿಟ್ಯೂಷನ್ ಸಹಯೋಗದಲ್ಲಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಾಲು, ಬ್ರೆಡ್, ಹಣ್ಣುಗಳನ್ನು ವಿತರಿಸಲಾಯಿತು. ತೂಬಗೆರೆಯ ಆರ್.ಎಲ್.ಜಾಲಪ್ಪ ವೃದ್ದಾಶ್ರಮದಲ್ಲಿನ ಆಶ್ರಿತರಿಗೆ ಸವಲತ್ತುಗಳ ವಿತರಣೆ ನಡೆಯಿತು. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್‍ಯಕ್ರಮಗಳು ನಡೆದವು.

ಜಾಲಪ್ಪ ಸ್ಮೃತಿವನ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಿಹಿ ಹಂಚಿಕೆ ನಡೆಯಿತು.

Ramesh Babu

Journalist

Recent Posts

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

6 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

6 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

17 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

17 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

19 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

22 hours ago