ಮಾಜಿ ಕೇಂದ್ರ ಸಚಿವ ದಿವಂಗತ ಆರ್.ಎಲ್.ಜಾಲಪ್ಪ 99ನೇ ಹುಟ್ಟುಹಬ್ಬ ಅಂಗವಾಗಿ ವಿವಿಧ ಕಾರ್ಯಕ್ರಮ

ಆರ್.ಎಲ್.ಜಾಲಪ್ಪನವರು ನೇರನಡೆ ಮತ್ತು ನಿಷ್ಠುರ ವ್ಯಕ್ತಿತ್ವದಿಂದಲೇ ಹೆಸರಾದ ಅಪರೂಪದ ರಾಜಕಾರಣಿಯಾಗಿದ್ದರು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ ಹೇಳಿದರು.

ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಶನಿವಾರ ಶ್ರೀ ದೇವರಾಜ ಅರಸ್‌ ಅಂತಾರಾಷ್ಟ್ರೀಯ ವಸತಿ ಶಾಲೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಜಾಲಪ್ಪ ಅವರು ಪರಿಸರ, ಶಿಕ್ಷಣ, ಗ್ರಾಮೀಣಾಭಿವೃದ್ದಿ, ಸಹಕಾರ ಸೇರಿದಂತೆ ವಿವಿಧ ವಲಯಗಳಲ್ಲಿ ಅನೇಕ ಸೇವಾ ಕಾರ್ಯಗಳನ್ನು ಜಾರಿಗೆ ತಂದ ಹೆಗ್ಗಳಿಕೆ ಹೊಂದಿದ್ದಾರೆ. ಅವರು ಸ್ಥಾಪಿಸಿರುವ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಹಿಂದುಳಿದ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮಹತ್ವದ ನೀಡುವ ಕೆಲಸ ಮಾಡುತ್ತಿದೆ ಎಂದರು.

ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಜಾಲಪ್ಪ ಅವರ ಒತ್ತಾಸೆಯಿಂದ ರಾಜ್ಯದಲ್ಲಿ ಜಾರಿಗೆ ಬಂದ ಹಲವು ಯೋಜನೆಗಳು ಇಂದಿಗೂ ಜನಸ್ನೇಹಿಯಾಗಿವೆ. ದೊಡ್ಡಬಳ್ಳಾಪುರದ ಅಪರೆಲ್ ಪಾರ್ಕ್ ಸಾವಿರಾರು ಜನರಿಗೆ ಉದ್ಯೋಗಾವಕಾಶಗಳನ್ನು ನೀಡಿದೆ. ಮುಖ್ಯವಾಗಿ ಮಹಿಳಾ ಉದ್ಯೋಗಿಗಳಿಗೆ ಆಸರೆಯಾಗಿದೆ. ಶೈಕ್ಷಣಿಕವಾಗಿಯೂ ಸಮಾಜವನ್ನು ಸದೃಢವಾಗಿ ಕಟ್ಟುವ ಉದ್ದೇಶದಿಂದ ಅನೇಕ ವಿದ್ಯಾ ಸಂಸ್ಥೆಗಳನ್ನು ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಸ್ಥಾಪಿಸಿ ಗ್ರಾಮೀಣ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕ ವಾತಾವರಣ ನಿರ್ಮಿಸಿದ್ದಾರೆ ಎಂದರು.

*ಪ್ರತಿಭಾ ಪುರಸ್ಕಾರ:*

ಇದೇ ವೇಳೆ ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಶ್ರೀದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ವಿಜಯಲಕ್ಷ್ಮಿ-ಆರ್.ಎಲ್.ಜಾಲಪ್ಪ ಶೈಕ್ಷಣಿಕ ದತ್ತಿ ಟ್ರಸ್ಟಿ ಎಂ.ಆರ್.ಶ್ರೀನಿವಾಸ್, ಲಯನ್ಸ್‌ ಕ್ಲಬ್‌ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ ಅಧ್ಯಕ್ಷ ಜೆ.ಆರ್.ರಾಕೇಶ್, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್‌ಕಾರ್ತಿಕ್, ಅಕಾಡೆಮಿಕ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ, ಎಒ ರಮೇಶ್‌ಕುಮಾರ್, ಕೃಷ್ಣಪ್ಪ, ವಿವಿಧ ಶೈಕ್ಷಣಿಕ ಘಟಕಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


*ರೋಗಿಗಳಿಗೆ ಹಾಲು-ಹಣ್ಣು ವಿತರಣೆ:*
ಜಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಸ್ಟಿಟ್ಯೂಷನ್ ಸಹಯೋಗದಲ್ಲಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಾಲು, ಬ್ರೆಡ್, ಹಣ್ಣುಗಳನ್ನು ವಿತರಿಸಲಾಯಿತು. ತೂಬಗೆರೆಯ ಆರ್.ಎಲ್.ಜಾಲಪ್ಪ ವೃದ್ದಾಶ್ರಮದಲ್ಲಿನ ಆಶ್ರಿತರಿಗೆ ಸವಲತ್ತುಗಳ ವಿತರಣೆ ನಡೆಯಿತು. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್‍ಯಕ್ರಮಗಳು ನಡೆದವು.

ಜಾಲಪ್ಪ ಸ್ಮೃತಿವನ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಿಹಿ ಹಂಚಿಕೆ ನಡೆಯಿತು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

8 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

9 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

11 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

12 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

17 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

20 hours ago