
ಇಂದು ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿ ಹಲಸಿನ ಹಣ್ಣನ್ನು ನೀಡುವ ಮೂಲಕ ಜನ್ಮದಿನದ ಶುಭಾಶಯ ತಿಳಿಸಿದರು.
ಹಲಸಿನ ಹಣ್ಣನ್ನು ಆತ್ಮೀಯವಾಗಿ ಸ್ವೀಕರಿಸಿದ ದೇವೇಗೌಡ ಅವರು ಅತ್ಯಂತ ಕುತೂಹಲದಿಂದ ಹಲಸಿನ ಹಣ್ಣಿನ ಬಗ್ಗೆ ಮಾಹಿತಿ ಪಡೆದರು.
ತೂಬಗೆರೆ ಹೋಬಳಿ ಕಾಚಳ್ಳಿ, ಮೆಳೇಕೋಟೆ, ನೆಲ್ಲುಕುಂಟೆ ಸೇರಿದಂತೆ ಇಲ್ಲಿನ ಸುತ್ತಮುತ್ತ ನೂರಾರು ವರ್ಷಗಳ ಹಳೇಯ ಮರಗಳಿವೆ. ಬೇರೆಡೆ ಹೆಚ್ಚಿನ ಇಳುವರಿಯಾಗಿ ಹಣ್ಣುಗಳು ಮಾರುಕಟ್ಟೆಗೆ ಬಂದು ಬೆಲೆ ಇಳಿಮುಖ ವಾಗಿದ್ದರೂ, ತೂಬಗೆರೆ ಹಲಸು ಮಾತ್ರ ತನ್ನ ಬೆಲೆ ಕಳೆದುಕೊಂಡಿಲ್ಲ ಎನ್ನುವುದು ವಿಶೇಷ.
ಇಲ್ಲಿನ ಮಣ್ಣಿನ ಗುಣ ಹಲಸು ಹಣ್ಣುಗಳ ರುಚಿಗೆ ಕಾರಣವಾಗಿದ್ದು, ತೂಬಗೆರೆ ಚಂದ್ರ ಹಲಸು ಎಂದೇ ರಾಜ್ಯದಲ್ಲಿ ಹೆಸರು ಮಾಡಿದೆ.
ಈ ಎಲ್ಲಾ ಮಾಹಿತಿ ಪಡೆದ ಅವರು, ಮುಂದಿನ ದಿನಗಳಲ್ಲಿ ಹಲಸಿನ ಹಣ್ಣಿಗೆ ನಮ್ಮ ದೊಡ್ಡಬಳ್ಳಾಪುರದಲ್ಲಿ ಉತ್ತಮ ಮಾರುಕಟ್ಟೆ ಮಾಡಿಕೊಡುವುದಾಗಿ ಹಾಗೂ ಹಲಸು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು.