ನಾಡಿನ ಹಿರಿಯ ಚೇತನ, ರೈತ ನಾಯಕ, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬದ ಶುಭ ಸಂದರ್ಭದಲ್ಲಿ, ದೇವನಹಳ್ಳಿಯ ಪ್ರವಾಸಿ ಮಂದಿರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್ ಅವರು ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ನಿಸರ್ಗ ನಾರಾಯಣಸ್ವಾಮಿ ಅವರು, “ನಮ್ಮ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಅಪ್ಪಾಜಿ ಅವರ ಆಶಯದಂತೆ ಸರಳವಾಗಿ, ಅರ್ಥಪೂರ್ಣವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿ, ಅವರ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಲಾಗಿದೆ” ಎಂದರು.
ಅಪ್ಪಾಜಿ ಅವರು ತಿರುಪತಿಯಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರಿಂದ, ಅವರ ಆದೇಶದ ಮೇರೆಗೆ ಈ ಬಾರಿ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಯಿತು. “ಅವರ ಆಶೀರ್ವಾದ ಸದಾ ನಮ್ಮೆಲ್ಲರ ಮೇಲಿರಲಿ ಎಂದು ನಾವು ಪ್ರಾರ್ಥಿಸುತ್ತೇವೆ” ಎಂದು ಅವರು ನುಡಿದರು.
“ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡುತ್ತಿರುವ ಬೆಂಬಲಕ್ಕೆ ನಾವು ಸದಾ ಕೃತಜ್ಞರಾಗಿರುತ್ತೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚು ವಿದ್ಯಾರ್ಥಿಗಳನ್ನು ಸನ್ಮಾನಿಸುವ ಅವಕಾಶ ನಮಗೆ ದೊರೆಯಲಿ ಎಂದು ಆಶಿಸುತ್ತೇವೆ” ಎಂದು ನಾರಾಯಣಸ್ವಾಮಿ ಅವರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಬಿದಲೂರು ವಿ.ಎಸ್.ಎಸ್.ಎನ್ ಅಧ್ಯಕ್ಷರಾದ ಕೆ.ವಿ ಮಂಜುನಾಥ್, ಪುರಸಭಾ ಉಪಾಧ್ಯಕ್ಷರಾದ ಜಿ.ಎ ರವೀಂದ್ರ, ಬಮೂಲ್ ನಿರ್ದೇಶಕರಾದ ಶ್ರೀನಿವಾಸ್, ಜೆಡಿಎಸ್ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕಲ್ಯಾಣ ಕುಮಾರ್ ಬಾಬು, ಯುವ ಘಟಕದ ಅಧ್ಯಕ್ಷರಾದ ಟಿ.ರವಿ, ತಾಲ್ಲೂಕು ಸೊಸೈಟಿ ಅಧ್ಯಕ್ಷರಾದ ಮುನಿರಾಜ್, ಮುಖಂಡರಾದ ಜೊನ್ನಹಳ್ಳಿ ಮುನಿರಾಜ್, ಟೌನ್ ಅಧ್ಯಕ್ಷರಾದ ಮುನಿನಂಜಪ್ಪ, ನಾಗೇಶ್, ಸಾಯಿಕುಮಾರ್ ಬಾಬು, ಶ್ರೀನಿವಾಸ್, ನಟರಾಜ್, ಶ್ರೀನಾಥ್, ಮಾರೇಗೌಡ, ಭರತ್, ವಿಜಯ್ ಕುಮಾರ್, ಮಹೇಶ್, ಅನಿಲ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…