ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಹುಟ್ಟುಹಬ್ಬ: ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ನಾಡಿನ ಹಿರಿಯ ಚೇತನ, ರೈತ ನಾಯಕ, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬದ ಶುಭ ಸಂದರ್ಭದಲ್ಲಿ, ದೇವನಹಳ್ಳಿಯ ಪ್ರವಾಸಿ ಮಂದಿರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್ ಅವರು ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ನಿಸರ್ಗ ನಾರಾಯಣಸ್ವಾಮಿ ಅವರು, “ನಮ್ಮ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಅಪ್ಪಾಜಿ ಅವರ ಆಶಯದಂತೆ ಸರಳವಾಗಿ, ಅರ್ಥಪೂರ್ಣವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿ, ಅವರ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಲಾಗಿದೆ” ಎಂದರು.

ಅಪ್ಪಾಜಿ ಅವರು ತಿರುಪತಿಯಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರಿಂದ, ಅವರ ಆದೇಶದ ಮೇರೆಗೆ ಈ ಬಾರಿ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಯಿತು. “ಅವರ ಆಶೀರ್ವಾದ ಸದಾ ನಮ್ಮೆಲ್ಲರ ಮೇಲಿರಲಿ ಎಂದು ನಾವು ಪ್ರಾರ್ಥಿಸುತ್ತೇವೆ” ಎಂದು ಅವರು ನುಡಿದರು.

“ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡುತ್ತಿರುವ ಬೆಂಬಲಕ್ಕೆ ನಾವು ಸದಾ ಕೃತಜ್ಞರಾಗಿರುತ್ತೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚು ವಿದ್ಯಾರ್ಥಿಗಳನ್ನು ಸನ್ಮಾನಿಸುವ ಅವಕಾಶ ನಮಗೆ ದೊರೆಯಲಿ ಎಂದು ಆಶಿಸುತ್ತೇವೆ” ಎಂದು ನಾರಾಯಣಸ್ವಾಮಿ ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಬಿದಲೂರು ವಿ.ಎಸ್.ಎಸ್.ಎನ್ ಅಧ್ಯಕ್ಷರಾದ ಕೆ.ವಿ ಮಂಜುನಾಥ್, ಪುರಸಭಾ ಉಪಾಧ್ಯಕ್ಷರಾದ ಜಿ.ಎ ರವೀಂದ್ರ, ಬಮೂಲ್ ನಿರ್ದೇಶಕರಾದ ಶ್ರೀನಿವಾಸ್, ಜೆಡಿಎಸ್ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕಲ್ಯಾಣ ಕುಮಾರ್ ಬಾಬು, ಯುವ ಘಟಕದ ಅಧ್ಯಕ್ಷರಾದ ಟಿ.ರವಿ, ತಾಲ್ಲೂಕು ಸೊಸೈಟಿ ಅಧ್ಯಕ್ಷರಾದ ಮುನಿರಾಜ್, ಮುಖಂಡರಾದ ಜೊನ್ನಹಳ್ಳಿ ಮುನಿರಾಜ್, ಟೌನ್ ಅಧ್ಯಕ್ಷರಾದ ಮುನಿನಂಜಪ್ಪ, ನಾಗೇಶ್, ಸಾಯಿಕುಮಾರ್ ಬಾಬು, ಶ್ರೀನಿವಾಸ್, ನಟರಾಜ್, ಶ್ರೀನಾಥ್, ಮಾರೇಗೌಡ, ಭರತ್, ವಿಜಯ್ ಕುಮಾರ್, ಮಹೇಶ್, ಅನಿಲ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

12 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

17 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago