ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

 

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ (85) ಅವರು ಶನಿವಾರ ನಿಧನರಾದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಜುಲೈ 15ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು.

ಚನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ. ಸತ್ಯನಾರಾಯಣ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗಿದ್ದರೂ ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ.
ಹಾಸನ ಜಿಲ್ಲೆಯ ಮುತ್ತಿಗೆ ಹಿರೇಹಳ್ಳಿ ಗ್ರಾಮದವರಾದ ಚನ್ನಮ್ಮ ಅವರು 1954ರ ಮೇ 25ರಂದು ಹೆಚ್.ಡಿ. ದೇವೇಗೌಡ ಅವರೊಂದಿಗೆ ವಿವಾಹವಾಗಿದ್ದರು. ಈ ದಂಪತಿಗೆ ಹೆಚ್.ಡಿ. ರೇವಣ್ಣ, ಹೆಚ್.ಡಿ. ಬಾಲಕೃಷ್ಣ, ಹೆಚ್.ಡಿ. ರಮೇಶ್ ಗೌಡ, ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ನಾಲ್ವರು ಪುತ್ರರು ಹಾಗೂ ಶೈಲಜಾ ಮತ್ತು ಅನಸೂಯಾ ಎಂಬ ಇಬ್ಬರು ಪುತ್ರಿಯರು ಸೇರಿ ಆರು ಮಂದಿ ಮಕ್ಕಳಿದ್ದಾರೆ.

ದೇವೇಗೌಡ ಅವರ ದೀರ್ಘ ರಾಜಕೀಯ ಜೀವನದಲ್ಲಿ ಚನ್ನಮ್ಮ ಅವರು ಕುಟುಂಬದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಅವರ ಯಶಸ್ಸಿಗೆ ಬೆನ್ನೆಲುಬಾಗಿ ನಿಂತಿದ್ದರು. ಮಕ್ಕಳ ಶಿಕ್ಷಣ ಹಾಗೂ ಕುಟುಂಬದ ನಿರ್ವಹಣೆಯ ಹೊಣೆ ಹೊತ್ತು ಆದರ್ಶ ಗೃಹಿಣಿಯಾಗಿ ಗುರುತಿಸಿಕೊಂಡಿದ್ದರು.

2001ರ ಫೆಬ್ರವರಿಯಲ್ಲಿ ಹರದನಹಳ್ಳಿಯ ದೇವಾಲಯದಲ್ಲಿ ಪೂಜೆ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಚನ್ನಮ್ಮ ಅವರ ಮೇಲೆ ಆ್ಯಸಿಡ್ ದಾಳಿ ನಡೆದಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು.

ಚನ್ನಮ್ಮ ಅವರ ನಿಧನಕ್ಕೆ ರಾಜಕೀಯ, ಸಾಮಾಜಿಕ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಅಗಲಿಕೆಯಿಂದ ದೇವೇಗೌಡ ಕುಟುಂಬ ಹಾಗೂ ಜೆಡಿಎಸ್ ಕಾರ್ಯಕರ್ತರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

Ramesh Babu

Journalist

Recent Posts

ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ

ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…

2 hours ago

ಬೈಕ್‌–ಕ್ಯಾಂಟರ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ದೊಡ್ಡಬಳ್ಳಾಪುರ: ತ್ರಿಬಲ್‌ ರೈಡಿಂಗ್‌ನಲ್ಲಿ ತೆರಳುತ್ತಿದ್ದ ಬೈಕ್‌ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…

4 hours ago

ಓದು, ಪ್ರವಾಸ ಮತ್ತು ಧ್ಯಾನಸ್ಥ ಮನಸ್ಥಿತಿ……..

ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…

16 hours ago

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

1 day ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

1 day ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

1 day ago