ಇಂದು ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿ ಹಲಸಿನ ಹಣ್ಣನ್ನು ನೀಡುವ ಮೂಲಕ ಜನ್ಮದಿನದ ಶುಭಾಶಯ ತಿಳಿಸಿದರು.
ಹಲಸಿನ ಹಣ್ಣನ್ನು ಆತ್ಮೀಯವಾಗಿ ಸ್ವೀಕರಿಸಿದ ದೇವೇಗೌಡ ಅವರು ಅತ್ಯಂತ ಕುತೂಹಲದಿಂದ ಹಲಸಿನ ಹಣ್ಣಿನ ಬಗ್ಗೆ ಮಾಹಿತಿ ಪಡೆದರು.
ತೂಬಗೆರೆ ಹೋಬಳಿ ಕಾಚಳ್ಳಿ, ಮೆಳೇಕೋಟೆ, ನೆಲ್ಲುಕುಂಟೆ ಸೇರಿದಂತೆ ಇಲ್ಲಿನ ಸುತ್ತಮುತ್ತ ನೂರಾರು ವರ್ಷಗಳ ಹಳೇಯ ಮರಗಳಿವೆ. ಬೇರೆಡೆ ಹೆಚ್ಚಿನ ಇಳುವರಿಯಾಗಿ ಹಣ್ಣುಗಳು ಮಾರುಕಟ್ಟೆಗೆ ಬಂದು ಬೆಲೆ ಇಳಿಮುಖ ವಾಗಿದ್ದರೂ, ತೂಬಗೆರೆ ಹಲಸು ಮಾತ್ರ ತನ್ನ ಬೆಲೆ ಕಳೆದುಕೊಂಡಿಲ್ಲ ಎನ್ನುವುದು ವಿಶೇಷ.
ಇಲ್ಲಿನ ಮಣ್ಣಿನ ಗುಣ ಹಲಸು ಹಣ್ಣುಗಳ ರುಚಿಗೆ ಕಾರಣವಾಗಿದ್ದು, ತೂಬಗೆರೆ ಚಂದ್ರ ಹಲಸು ಎಂದೇ ರಾಜ್ಯದಲ್ಲಿ ಹೆಸರು ಮಾಡಿದೆ.
ಈ ಎಲ್ಲಾ ಮಾಹಿತಿ ಪಡೆದ ಅವರು, ಮುಂದಿನ ದಿನಗಳಲ್ಲಿ ಹಲಸಿನ ಹಣ್ಣಿಗೆ ನಮ್ಮ ದೊಡ್ಡಬಳ್ಳಾಪುರದಲ್ಲಿ ಉತ್ತಮ ಮಾರುಕಟ್ಟೆ ಮಾಡಿಕೊಡುವುದಾಗಿ ಹಾಗೂ ಹಲಸು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…