ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟುಹಬ್ಬ: ಚಂದ್ರ ಹಲಸು ನೀಡಿ ಶುಭಾಶಯ ಕೋರಿದ ರೈತ

ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಜನ್ಮದಿನ ಹಿನ್ನೆಲೆ ರಾಜ್ಯದಲ್ಲಿ ಚಂದ್ರ ಹಲಸು ಎಂದೇ ಹೆಸರುವಾಸಿಯಾಗಿರುವ ಹಲಸಿ ಹಣ್ಣನ್ನು ದೇವೇಗೌಡರಿಗೆ ನೀಡಿ ಹುಟ್ಟು ಹಬ್ಬದ ಶುಭಾಶಯ ಕೋರಿದ ತಾಲೂಕಿನ ರೈತ ಅಂಬರೀಶ್.

ಇಂದು ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿ ಹಲಸಿನ‌ ಹಣ್ಣನ್ನು ನೀಡುವ ಮೂಲಕ‌ ಜನ್ಮದಿನದ ಶುಭಾಶಯ ತಿಳಿಸಿದರು.

ಹಲಸಿನ ಹಣ್ಣನ್ನು ಆತ್ಮೀಯವಾಗಿ ಸ್ವೀಕರಿಸಿದ ದೇವೇಗೌಡ ಅವರು ಅತ್ಯಂತ ಕುತೂಹಲದಿಂದ ಹಲಸಿನ ಹಣ್ಣಿನ ಬಗ್ಗೆ ಮಾಹಿತಿ ಪಡೆದರು.

ತೂಬಗೆರೆ ಹೋಬಳಿ ಕಾಚಳ್ಳಿ, ಮೆಳೇಕೋಟೆ, ನೆಲ್ಲುಕುಂಟೆ ಸೇರಿದಂತೆ ಇಲ್ಲಿನ ಸುತ್ತಮುತ್ತ ನೂರಾರು ವರ್ಷಗಳ ಹಳೇಯ ಮರಗಳಿವೆ. ಬೇರೆಡೆ ಹೆಚ್ಚಿನ ಇಳುವರಿಯಾಗಿ ಹಣ್ಣುಗಳು ಮಾರುಕಟ್ಟೆಗೆ ಬಂದು ಬೆಲೆ ಇಳಿಮುಖ ವಾಗಿದ್ದರೂ, ತೂಬಗೆರೆ ಹಲಸು ಮಾತ್ರ ತನ್ನ ಬೆಲೆ ಕಳೆದುಕೊಂಡಿಲ್ಲ ಎನ್ನುವುದು ವಿಶೇಷ.

ಇಲ್ಲಿನ ಮಣ್ಣಿನ ಗುಣ ಹಲಸು ಹಣ್ಣುಗಳ ರುಚಿಗೆ ಕಾರಣವಾಗಿದ್ದು, ತೂಬಗೆರೆ ಚಂದ್ರ ಹಲಸು ಎಂದೇ ರಾಜ್ಯದಲ್ಲಿ ಹೆಸರು ಮಾಡಿದೆ.

ಈ ಎಲ್ಲಾ ಮಾಹಿತಿ ಪಡೆದ ಅವರು, ಮುಂದಿನ ದಿನಗಳಲ್ಲಿ ಹಲಸಿನ ಹಣ್ಣಿಗೆ ನಮ್ಮ ದೊಡ್ಡಬಳ್ಳಾಪುರದಲ್ಲಿ ಉತ್ತಮ ಮಾರುಕಟ್ಟೆ ಮಾಡಿಕೊಡುವುದಾಗಿ ಹಾಗೂ ಹಲಸು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

51 minutes ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

1 hour ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

5 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

7 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

10 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

14 hours ago