ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟುಹಬ್ಬ: ಚಂದ್ರ ಹಲಸು ನೀಡಿ ಶುಭಾಶಯ ಕೋರಿದ ರೈತ

ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಜನ್ಮದಿನ ಹಿನ್ನೆಲೆ ರಾಜ್ಯದಲ್ಲಿ ಚಂದ್ರ ಹಲಸು ಎಂದೇ ಹೆಸರುವಾಸಿಯಾಗಿರುವ ಹಲಸಿ ಹಣ್ಣನ್ನು ದೇವೇಗೌಡರಿಗೆ ನೀಡಿ ಹುಟ್ಟು ಹಬ್ಬದ ಶುಭಾಶಯ ಕೋರಿದ ತಾಲೂಕಿನ ರೈತ ಅಂಬರೀಶ್.

ಇಂದು ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿ ಹಲಸಿನ‌ ಹಣ್ಣನ್ನು ನೀಡುವ ಮೂಲಕ‌ ಜನ್ಮದಿನದ ಶುಭಾಶಯ ತಿಳಿಸಿದರು.

ಹಲಸಿನ ಹಣ್ಣನ್ನು ಆತ್ಮೀಯವಾಗಿ ಸ್ವೀಕರಿಸಿದ ದೇವೇಗೌಡ ಅವರು ಅತ್ಯಂತ ಕುತೂಹಲದಿಂದ ಹಲಸಿನ ಹಣ್ಣಿನ ಬಗ್ಗೆ ಮಾಹಿತಿ ಪಡೆದರು.

ತೂಬಗೆರೆ ಹೋಬಳಿ ಕಾಚಳ್ಳಿ, ಮೆಳೇಕೋಟೆ, ನೆಲ್ಲುಕುಂಟೆ ಸೇರಿದಂತೆ ಇಲ್ಲಿನ ಸುತ್ತಮುತ್ತ ನೂರಾರು ವರ್ಷಗಳ ಹಳೇಯ ಮರಗಳಿವೆ. ಬೇರೆಡೆ ಹೆಚ್ಚಿನ ಇಳುವರಿಯಾಗಿ ಹಣ್ಣುಗಳು ಮಾರುಕಟ್ಟೆಗೆ ಬಂದು ಬೆಲೆ ಇಳಿಮುಖ ವಾಗಿದ್ದರೂ, ತೂಬಗೆರೆ ಹಲಸು ಮಾತ್ರ ತನ್ನ ಬೆಲೆ ಕಳೆದುಕೊಂಡಿಲ್ಲ ಎನ್ನುವುದು ವಿಶೇಷ.

ಇಲ್ಲಿನ ಮಣ್ಣಿನ ಗುಣ ಹಲಸು ಹಣ್ಣುಗಳ ರುಚಿಗೆ ಕಾರಣವಾಗಿದ್ದು, ತೂಬಗೆರೆ ಚಂದ್ರ ಹಲಸು ಎಂದೇ ರಾಜ್ಯದಲ್ಲಿ ಹೆಸರು ಮಾಡಿದೆ.

ಈ ಎಲ್ಲಾ ಮಾಹಿತಿ ಪಡೆದ ಅವರು, ಮುಂದಿನ ದಿನಗಳಲ್ಲಿ ಹಲಸಿನ ಹಣ್ಣಿಗೆ ನಮ್ಮ ದೊಡ್ಡಬಳ್ಳಾಪುರದಲ್ಲಿ ಉತ್ತಮ ಮಾರುಕಟ್ಟೆ ಮಾಡಿಕೊಡುವುದಾಗಿ ಹಾಗೂ ಹಲಸು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

4 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

10 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

11 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago