ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟುಹಬ್ಬ: ಚಂದ್ರ ಹಲಸು ನೀಡಿ ಶುಭಾಶಯ ಕೋರಿದ ರೈತ

ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಜನ್ಮದಿನ ಹಿನ್ನೆಲೆ ರಾಜ್ಯದಲ್ಲಿ ಚಂದ್ರ ಹಲಸು ಎಂದೇ ಹೆಸರುವಾಸಿಯಾಗಿರುವ ಹಲಸಿ ಹಣ್ಣನ್ನು ದೇವೇಗೌಡರಿಗೆ ನೀಡಿ ಹುಟ್ಟು ಹಬ್ಬದ ಶುಭಾಶಯ ಕೋರಿದ ತಾಲೂಕಿನ ರೈತ ಅಂಬರೀಶ್.

ಇಂದು ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿ ಹಲಸಿನ‌ ಹಣ್ಣನ್ನು ನೀಡುವ ಮೂಲಕ‌ ಜನ್ಮದಿನದ ಶುಭಾಶಯ ತಿಳಿಸಿದರು.

ಹಲಸಿನ ಹಣ್ಣನ್ನು ಆತ್ಮೀಯವಾಗಿ ಸ್ವೀಕರಿಸಿದ ದೇವೇಗೌಡ ಅವರು ಅತ್ಯಂತ ಕುತೂಹಲದಿಂದ ಹಲಸಿನ ಹಣ್ಣಿನ ಬಗ್ಗೆ ಮಾಹಿತಿ ಪಡೆದರು.

ತೂಬಗೆರೆ ಹೋಬಳಿ ಕಾಚಳ್ಳಿ, ಮೆಳೇಕೋಟೆ, ನೆಲ್ಲುಕುಂಟೆ ಸೇರಿದಂತೆ ಇಲ್ಲಿನ ಸುತ್ತಮುತ್ತ ನೂರಾರು ವರ್ಷಗಳ ಹಳೇಯ ಮರಗಳಿವೆ. ಬೇರೆಡೆ ಹೆಚ್ಚಿನ ಇಳುವರಿಯಾಗಿ ಹಣ್ಣುಗಳು ಮಾರುಕಟ್ಟೆಗೆ ಬಂದು ಬೆಲೆ ಇಳಿಮುಖ ವಾಗಿದ್ದರೂ, ತೂಬಗೆರೆ ಹಲಸು ಮಾತ್ರ ತನ್ನ ಬೆಲೆ ಕಳೆದುಕೊಂಡಿಲ್ಲ ಎನ್ನುವುದು ವಿಶೇಷ.

ಇಲ್ಲಿನ ಮಣ್ಣಿನ ಗುಣ ಹಲಸು ಹಣ್ಣುಗಳ ರುಚಿಗೆ ಕಾರಣವಾಗಿದ್ದು, ತೂಬಗೆರೆ ಚಂದ್ರ ಹಲಸು ಎಂದೇ ರಾಜ್ಯದಲ್ಲಿ ಹೆಸರು ಮಾಡಿದೆ.

ಈ ಎಲ್ಲಾ ಮಾಹಿತಿ ಪಡೆದ ಅವರು, ಮುಂದಿನ ದಿನಗಳಲ್ಲಿ ಹಲಸಿನ ಹಣ್ಣಿಗೆ ನಮ್ಮ ದೊಡ್ಡಬಳ್ಳಾಪುರದಲ್ಲಿ ಉತ್ತಮ ಮಾರುಕಟ್ಟೆ ಮಾಡಿಕೊಡುವುದಾಗಿ ಹಾಗೂ ಹಲಸು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

4 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

4 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

9 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

10 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

15 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

17 hours ago