Categories: ಮಂಡ್ಯ

ಮಾಜಿ ಪ್ರಧಾನಿ ದೇವೇಗೌಡ ಅವರು ಬಿಜೆಪಿ ಮತ್ತು ಜೆಡಿಎಸ್ ನ ಅಪವಿತ್ರ ಮೈತ್ರಿಯನ್ನು ತಿರಸ್ಕರಿಸಿ, ನಮ್ಮನ್ನು ಬೆಂಬಲಿಸಬೇಕು- ಸಿಎಂ ಸಿದ್ದರಾಮಯ್ಯ

ಕಳೆದ ಚುನಾವಣೆಯಲ್ಲಿ ರಾಜ್ಯದ ಜನ ನಮ್ಮ ನಿರೀಕ್ಷೆಯನ್ನೂ ಮೀರಿ ಆಶೀರ್ವಾದ ಮಾಡಿದ್ದಾರೆ. 136 ಸ್ಥಾನಗಳಲ್ಲಿ ನಮ್ಮನ್ನು ಗೆಲ್ಲಿಸಿದ್ದಾರೆ. ಕರ್ನಾಟಕದ ಜನ ಪ್ರಭುದ್ಧವಾದ ತೀರ್ಮಾನ ಮಾಡಿದ್ದಾರೆ. ಮಂಡ್ಯ ಜನರಿಗೆ ಕೂಡ ವಿಪಕ್ಷಗಳು ಸುಳ್ಳು ಭರವಸೆ ನೀಡಿದ್ದರೂ, ದಾರಿ ತಪ್ಪಿಸುವ ಕೆಲಸ ಮಾಡಿದ್ದರೂ ಸರಿಯಾದ ತೀರ್ಮಾನವನ್ನೇ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಚುನಾವಣಾ ಪೂರ್ವದಲ್ಲಿ ನೀಡಿದ್ದ ಅನೇಕ ಭರವಸೆಗಳ ಪೈಕಿ ಪ್ರಮುಖವಾಗಿ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೆ ತಂದೆವು. ಪ್ರಮಾಣವಚನ ಸ್ವೀಕಾರ ಮಾಡಿದ ದಿನವೇ 5 ಗ್ಯಾರಂಟಿಗಳ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದೆವು ಎಂದರು.

ರಾಜ್ಯದ 3.50 ಕೋಟಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾದ ಶಕ್ತಿ ಯೋಜನೆಗೆ ಚಾಲನೆ ನೀಡಿದೆವು. ನಿತ್ಯ 50 ರಿಂದ 60 ಲಕ್ಷ ಮಹಿಳೆಯರು ಈ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಹೇಳಿದರು.

ಕೃಷಿ ಇಲಾಖೆಗೆ 600 ಕೋಟಿ ರೂ.ಗಳನ್ನು ಬೆಳೆ ವಿಮೆಗೆ ನೀಡಲಾಗಿದ್ದು, ಇನ್ನೂ 800 ಕೋಟಿ ರೂ.ಗಳನ್ನು ನೀಡಲಾಗುವುದು. 33.25 ಲಕ್ಷ ರೈತರಿಗೆ 631 ಕೋಟಿ ರೂ.ಗಳನ್ನು ತಲಾ 2,000 ರೂ.ಗಳ ಬೆಳೆ ಪರಿಹಾರಕ್ಕೆ ನೀಡಿದ್ದೇವೆ ಎಂದರು.

ಬಿಜೆಪಿ ಮೇಲೆ ಜೆಡಿಎಸ್ ಅವರಿಗೆ ಬಹಳ ಪ್ರೀತಿ ಉಂಟಾಗಿದೆ. ನಮ್ಮ ಗ್ಯಾರಂಟಿಗಳ ಬಗ್ಗೆ ಟೀಕಿಸುತ್ತಾರೆ. ಜನರಿಗೆ ಸತ್ಯ ತಿಳಿಸದೆ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಾವು ನಿಮ್ಮ ಪರ ಇದ್ದೇವೆ. ಮಂಡ್ಯ ಜಿಲ್ಲೆಯನ್ನು ಸಂಪೂರ್ಣ ಅಭಿವೃದ್ಧಿ ಮಾಡಲಾಗುವುದು. 500 ಕೋಟಿ ರೂ.ಗಳನ್ನು ಜಿಲ್ಲೆಗೆ ನೀಡಲಾಗುತ್ತಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ಇಲ್ಲಿ ವ್ಯವಸಾಯದ ಮೇಲೆ ಅವಲಂಬಿತ ಜನ ಹೆಚ್ಚಿದ್ದು, ಅಭಿವೃದ್ಧಿ ಮಾಡಲು ಪಣ ತೊಟ್ಟಿದ್ದೇವೆ. ಯಾರೂ ಏನೇ ಹೇಳಿದರೂ ಕೆಲಸ ಮಾಡಿದವರನ್ನು ಬೆಂಬಲಿಸಬೇಕು ಎಂದು ತಿಳಿಸಿದರು.

ಮಂಡ್ಯದಲ್ಲಿ 4.57 ಕೋಟಿ ಮಹಿಳೆಯರು ಹಾಗೂ ಇಡೀ ರಾಜ್ಯದಲ್ಲಿ 170 ಕೋಟಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ನಂತರ ಜನರನ್ನು ಸಂಪೂರ್ಣವಾಗಿ ಹಿಂದಿನ ಸರ್ಕಾರ ಮರೆತಿತ್ತು. ಆದರೆ ನಾವು ನುಡಿದಂತೆ ನಡೆದಿದ್ದೇವೆ ಎಂದರು.

ಬಿಜೆಪಿಯವರು ರೈತಪರ, ಬಡವರಪರ ಎಂದು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೂ, ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ಅವರು ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲಿಲ್ಲ. ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗ, ಬಿಜೆಪಿಯ ಯಡಿಯೂರಪ್ಪನವರು 17 ಶಾಸಕರನ್ನು ಕೊಂಡು ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರು ಎಂದು ಹೇಳಿದರು.

ಮಾಜಿ ಪ್ರಧಾನಿ ದೇವೇಗೌಡರು ಕೋಮುವಾದಿಗಳೊಂದಿಗೆ ಸೇರುವುದಿಲ್ಲ ಎಂದಿದ್ದವರು, ಈಗ ಅವರನ್ನೇ ಬೆಂಬಲಿಸುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನ ಅಪವಿತ್ರ ಮೈತ್ರಿಯನ್ನು ತಿರಸ್ಕರಿಸಿ, ನಮ್ಮನ್ನು ಬೆಂಬಲಿಸಬೇಕು ಎಂದು ತಿಳಿಸಿದರು.

ಅನ್ನಭಾಗ್ಯ ಯೋಜನೆಯಡಿ 5 ಕೆಜಿಯ ಜೊತೆಗೆ 5 ಕೆಜಿ ಅಕ್ಕಿ ನೀಡಿ, ರಾಜ್ಯವನ್ನು ಹಸಿವು ಮುಕ್ತ ಮಾಡುವ ಸರ್ಕಾರದ ಉದ್ದೇಶಕ್ಕೆ ಕೇಂದ್ರ ಸರ್ಕಾರ ಸಹಕರಿಸಲಿಲ್ಲ. ಆದ್ದರಿಂದ 5 ಕೆಜಿ ಬದಲಿಗೆ 170 ರೂ.ಗಳನ್ನು ನೀಡುತ್ತಿದ್ದೇವೆ. ಜಿಲ್ಲೆಯಲ್ಲಿ 4,38,705 ಫಲಾನುಭವಿಗಳಿಗೆ 166 ಕೋಟಿ ರೂ.ಗಳ ಅನ್ನಭಾಗ್ಯದ ಆರ್ಥಿಕ ನೆರವು ನೀಡಲಾಗಿದೆ. ಬಡವರ ಬೆಂಬಲಕ್ಕೆ ನಿಲ್ಲದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ತಕ್ಕ ಉತ್ತರ ನೀಡಬೇಕಲ್ಲವೇ ಎಂದು ಹೇಳಿದರು.

ಮಂಡ್ಯ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಇಲ್ಲಿನ ಜನರಿಗೆ 4,64,303 ಜನ ನೋಂದಾಯಿಸಿಕೊಂಡಿದ್ದು, 104 ಕೋಟಿ ರೂ. ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 4,49,197 ಮಹಿಳೆಯರು ನೊಂದಾಯಿಸಿಕೊಂಡಿದ್ದು, 512 ಕೋಟಿ ರೂ. ಗಳನ್ನು ನೀಡಲಾಗಿದೆ. ಯುವನಿಧಿ 3,148 ಅರ್ಜಿಗಳು ನೋಂದಾವಣೆಯಾಗಿದ್ದು, 22 ಲಕ್ಷ ರೂ.ಗಳನ್ನು ವರ್ಗಾಯಿಸಲಾಗಿದೆ. ಬಡವರು, ಮಹಿಳೆಯರು, ದಲಿತರು, ರೈತರು ಸೇರಿದಂತೆ ಎಲ್ಲ ಜಾತಿಧರ್ಮದವರಿಗೂ ಆರ್ಥಿಕವಾಗಿ ಬಲ ತುಂಬಲಾಗುತ್ತಿದೆ ಎಂದರು.

ರಾಜ್ಯದಲ್ಲಿ 4.60 ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿದೆ. ಈ ವರ್ಷ 36 ಸಾವಿರ ಕೋಟಿ, ಮುಂದಿನ ವರ್ಷ 52,009 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ನಿಗದಿಪಡಿಸಲಾಗಿದೆ. ಇದರ ಜೊತೆಗೆ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೂ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

8 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

8 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

20 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

23 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

1 day ago