ಕೋಲಾರ: ಜೆಡಿಯು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯದ ಉಸ್ತುವಾರಿ ಮನೀಶ್ ಕುಮಾರ್ ವರ್ಮಾ, ಪಕ್ಷದ ರಾಜ್ಯ ಅಧ್ಯಕ್ಷ ಮಾಜಿ ಶಾಸಕ ಮಹಿಮ ಪಟೇಲ್ ಯುವ ಘಟಕದ ರಾಜ್ಯಾಧ್ಯಕ್ಷ ಡಾ.ನಾಗರಾಜ್ ಮತ್ತು ಇತರೆ ಪದಾಧಿಕಾರಿಗಳು ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ಪಕ್ಷದ ಹಿರಿಯ ರಾಜಕಾರಣಿ ಎಚ್.ಡಿ. ದೇವೇಗೌಡರವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮುಂಬರುವ ಚುನಾವಣೆಗಳ ಕುರಿತಂತೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಮನೀಶ್ ಕುಮಾರ್ ಶರ್ಮ ಅವರು ಜೆಡಿಯು ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸುವುದು ಮುಂಬರುವ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಕಲ್ಲಂಡೂರು ಡಾ ಕೆ.ನಾಗರಾಜ್ ರವರನ್ನು ಆಯ್ಕೆ ಎನ್.ಡಿ.ಎ ಮೈತ್ರಿ ಕೂಟದಿಂದ ನಾವೆಲ್ಲ ಸೇರಿ ಗೆಲ್ಲಿಸಲು ಸಹಕರಿಸಬೇಕು ಮುಂದಿನ ಜಿಪಂ ತಾಪಂ ಚುನಾವಣೆಗೂ ಜೆಡಿಯು ಪಕ್ಷದಿಂದ ಅಭ್ಯರ್ಥಿಗಳನ್ನು ನಿಲ್ಲಿಸಲಿದ್ದು ಡಾ ನಾಗರಾಜ್ ಗೆಲುವ ಹಾಗೂ ರಾಜ್ಯದಲ್ಲಿ ಜೆಡಿಯು ಪಕ್ಷದ ಹಿಂದಿನ ಗತವೈಭವ ತರುವುದು ಮುಖ್ಯ ಗುರಿಯಾಗಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಬಿಹಾರ ರಾಜ್ಯದ ಸಿಎಂ ನಿತೀಶ್ ಕುಮಾರ ಅವರ ಸಲಹಾ ಸಮಿತಿ ಸದಸ್ಯರಾದ ವಿಶಿಷ್ಟ ಮಂಡಲ್, ಅಜಯ್ ರಾವ್, ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಗಂಗೂರ್, ರೈತ ಘಟಕದ ಅಧ್ಯಕ್ಷ ಶ್ರೀನಿವಾಸ್ ಗೌಡ, ಮಹಿಳಾ ಘಟಕದ ಅಧ್ಯಕ್ಷೆ ಕಲಾವತಿ, ಪ್ರಧಾನ ಕಾರ್ಯದರ್ಶಿಗಳಾದ ರಂಗನಾಥ್, ಲಕ್ಷ್ಮೀ, ಯುವ ಘಟಕದ ಕಾರ್ಯಾಧ್ಯಕ್ಷ ಲಕನ್, ಉಪಾಧ್ಯಕ್ಷರಾದ ಗಂಗರಾಜು, ಡಿ ಜೆ ಪ್ರಭು, ಕಾರ್ಯದರ್ಶಿಗಳಾದ ಕ್ರಾಂತಿ, ಸೂರ್ಯಪ್ರಕಾಶ್ ಮಾಡಿಕ್, ಶಾಂತ ಕುಮಾರಿ, ಶಿಂದೆ, ಶ್ರೀ ಶೈಲ ಗೌಡ, ನಿಲಿಗಿರಿಯಪ್ಪ, ಶಕುಂತಲಾ ಶೆಟ್ಟಿ, ನಾರಾಯಣ ಸ್ವಾಮಿ ಗೌಡ, ಲಕ್ಷ್ಮೀ ಪತ್ತಾರ್, ಹೈಬತ್ತಿ, ಅಂಬರೀಷ್, ಮಂಜುನಾಥ್ ಗೌಡ, ಸುಮ,ಫಿಜ, ನಿರ್ಮಲ, ಚಂದ್ರು, ಸುರೇಶ ಮಲ್ಲಮ್ಮ, ಸುಬ್ರಮಣಿ, ಬಾಬು, ನಾಗರಾಜ್, ಚಿನ್ಮಯ, ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…
ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…