ಕೋಲಾರ: ಜೆಡಿಯು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯದ ಉಸ್ತುವಾರಿ ಮನೀಶ್ ಕುಮಾರ್ ವರ್ಮಾ, ಪಕ್ಷದ ರಾಜ್ಯ ಅಧ್ಯಕ್ಷ ಮಾಜಿ ಶಾಸಕ ಮಹಿಮ ಪಟೇಲ್ ಯುವ ಘಟಕದ ರಾಜ್ಯಾಧ್ಯಕ್ಷ ಡಾ.ನಾಗರಾಜ್ ಮತ್ತು ಇತರೆ ಪದಾಧಿಕಾರಿಗಳು ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ಪಕ್ಷದ ಹಿರಿಯ ರಾಜಕಾರಣಿ ಎಚ್.ಡಿ. ದೇವೇಗೌಡರವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮುಂಬರುವ ಚುನಾವಣೆಗಳ ಕುರಿತಂತೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಮನೀಶ್ ಕುಮಾರ್ ಶರ್ಮ ಅವರು ಜೆಡಿಯು ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸುವುದು ಮುಂಬರುವ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಕಲ್ಲಂಡೂರು ಡಾ ಕೆ.ನಾಗರಾಜ್ ರವರನ್ನು ಆಯ್ಕೆ ಎನ್.ಡಿ.ಎ ಮೈತ್ರಿ ಕೂಟದಿಂದ ನಾವೆಲ್ಲ ಸೇರಿ ಗೆಲ್ಲಿಸಲು ಸಹಕರಿಸಬೇಕು ಮುಂದಿನ ಜಿಪಂ ತಾಪಂ ಚುನಾವಣೆಗೂ ಜೆಡಿಯು ಪಕ್ಷದಿಂದ ಅಭ್ಯರ್ಥಿಗಳನ್ನು ನಿಲ್ಲಿಸಲಿದ್ದು ಡಾ ನಾಗರಾಜ್ ಗೆಲುವ ಹಾಗೂ ರಾಜ್ಯದಲ್ಲಿ ಜೆಡಿಯು ಪಕ್ಷದ ಹಿಂದಿನ ಗತವೈಭವ ತರುವುದು ಮುಖ್ಯ ಗುರಿಯಾಗಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಬಿಹಾರ ರಾಜ್ಯದ ಸಿಎಂ ನಿತೀಶ್ ಕುಮಾರ ಅವರ ಸಲಹಾ ಸಮಿತಿ ಸದಸ್ಯರಾದ ವಿಶಿಷ್ಟ ಮಂಡಲ್, ಅಜಯ್ ರಾವ್, ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಗಂಗೂರ್, ರೈತ ಘಟಕದ ಅಧ್ಯಕ್ಷ ಶ್ರೀನಿವಾಸ್ ಗೌಡ, ಮಹಿಳಾ ಘಟಕದ ಅಧ್ಯಕ್ಷೆ ಕಲಾವತಿ, ಪ್ರಧಾನ ಕಾರ್ಯದರ್ಶಿಗಳಾದ ರಂಗನಾಥ್, ಲಕ್ಷ್ಮೀ, ಯುವ ಘಟಕದ ಕಾರ್ಯಾಧ್ಯಕ್ಷ ಲಕನ್, ಉಪಾಧ್ಯಕ್ಷರಾದ ಗಂಗರಾಜು, ಡಿ ಜೆ ಪ್ರಭು, ಕಾರ್ಯದರ್ಶಿಗಳಾದ ಕ್ರಾಂತಿ, ಸೂರ್ಯಪ್ರಕಾಶ್ ಮಾಡಿಕ್, ಶಾಂತ ಕುಮಾರಿ, ಶಿಂದೆ, ಶ್ರೀ ಶೈಲ ಗೌಡ, ನಿಲಿಗಿರಿಯಪ್ಪ, ಶಕುಂತಲಾ ಶೆಟ್ಟಿ, ನಾರಾಯಣ ಸ್ವಾಮಿ ಗೌಡ, ಲಕ್ಷ್ಮೀ ಪತ್ತಾರ್, ಹೈಬತ್ತಿ, ಅಂಬರೀಷ್, ಮಂಜುನಾಥ್ ಗೌಡ, ಸುಮ,ಫಿಜ, ನಿರ್ಮಲ, ಚಂದ್ರು, ಸುರೇಶ ಮಲ್ಲಮ್ಮ, ಸುಬ್ರಮಣಿ, ಬಾಬು, ನಾಗರಾಜ್, ಚಿನ್ಮಯ, ಮುಂತಾದವರು ಇದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…