Categories: ಕೋಲಾರ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಜೆಡಿಯು ಮುಖಂಡರೊಂದಿಗೆ ಭೇಟಿ ಮಾಡಿದ ಕಲ್ಲಂಡೂರು ಡಾ ಕೆ.ನಾಗರಾಜ್

ಕೋಲಾರ: ಜೆಡಿಯು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯದ ಉಸ್ತುವಾರಿ ಮನೀಶ್ ಕುಮಾರ್ ವರ್ಮಾ, ಪಕ್ಷದ ರಾಜ್ಯ ಅಧ್ಯಕ್ಷ ಮಾಜಿ ಶಾಸಕ ಮಹಿಮ ಪಟೇಲ್ ಯುವ ಘಟಕದ ರಾಜ್ಯಾಧ್ಯಕ್ಷ ಡಾ.ನಾಗರಾಜ್ ಮತ್ತು ಇತರೆ ಪದಾಧಿಕಾರಿಗಳು ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ಪಕ್ಷದ ಹಿರಿಯ ರಾಜಕಾರಣಿ ಎಚ್.ಡಿ. ದೇವೇಗೌಡರವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮುಂಬರುವ ಚುನಾವಣೆಗಳ ಕುರಿತಂತೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಮನೀಶ್ ಕುಮಾರ್ ಶರ್ಮ ಅವರು ಜೆಡಿಯು ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸುವುದು ಮುಂಬರುವ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಕಲ್ಲಂಡೂರು ಡಾ ಕೆ.ನಾಗರಾಜ್ ರವರನ್ನು ಆಯ್ಕೆ ಎನ್.ಡಿ.ಎ ಮೈತ್ರಿ ಕೂಟದಿಂದ ನಾವೆಲ್ಲ ಸೇರಿ ಗೆಲ್ಲಿಸಲು ಸಹಕರಿಸಬೇಕು ಮುಂದಿನ ಜಿಪಂ ತಾಪಂ ಚುನಾವಣೆಗೂ ಜೆಡಿಯು ಪಕ್ಷದಿಂದ ಅಭ್ಯರ್ಥಿಗಳನ್ನು ನಿಲ್ಲಿಸಲಿದ್ದು ಡಾ ನಾಗರಾಜ್ ಗೆಲುವ ಹಾಗೂ ರಾಜ್ಯದಲ್ಲಿ ಜೆಡಿಯು ಪಕ್ಷದ ಹಿಂದಿನ ಗತವೈಭವ ತರುವುದು ಮುಖ್ಯ ಗುರಿಯಾಗಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬಿಹಾರ ರಾಜ್ಯದ ಸಿಎಂ ನಿತೀಶ್ ಕುಮಾರ ಅವರ ಸಲಹಾ ಸಮಿತಿ ಸದಸ್ಯರಾದ ವಿಶಿಷ್ಟ ಮಂಡಲ್, ಅಜಯ್ ರಾವ್, ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಗಂಗೂರ್, ರೈತ ಘಟಕದ ಅಧ್ಯಕ್ಷ ಶ್ರೀನಿವಾಸ್ ಗೌಡ, ಮಹಿಳಾ ಘಟಕದ ಅಧ್ಯಕ್ಷೆ ಕಲಾವತಿ, ಪ್ರಧಾನ ಕಾರ್ಯದರ್ಶಿಗಳಾದ ರಂಗನಾಥ್, ಲಕ್ಷ್ಮೀ, ಯುವ ಘಟಕದ ಕಾರ್ಯಾಧ್ಯಕ್ಷ ಲಕನ್, ಉಪಾಧ್ಯಕ್ಷರಾದ ಗಂಗರಾಜು, ಡಿ ಜೆ ಪ್ರಭು, ಕಾರ್ಯದರ್ಶಿಗಳಾದ ಕ್ರಾಂತಿ, ಸೂರ್ಯಪ್ರಕಾಶ್ ಮಾಡಿಕ್, ಶಾಂತ ಕುಮಾರಿ, ಶಿಂದೆ, ಶ್ರೀ ಶೈಲ ಗೌಡ, ನಿಲಿಗಿರಿಯಪ್ಪ, ಶಕುಂತಲಾ ಶೆಟ್ಟಿ, ನಾರಾಯಣ ಸ್ವಾಮಿ ಗೌಡ, ಲಕ್ಷ್ಮೀ ಪತ್ತಾರ್, ಹೈಬತ್ತಿ, ಅಂಬರೀಷ್, ಮಂಜುನಾಥ್ ಗೌಡ, ಸುಮ,ಫಿಜ, ನಿರ್ಮಲ, ಚಂದ್ರು, ಸುರೇಶ ಮಲ್ಲಮ್ಮ, ಸುಬ್ರಮಣಿ, ಬಾಬು, ನಾಗರಾಜ್, ಚಿನ್ಮಯ, ಮುಂತಾದವರು ಇದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

11 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

15 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

22 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

23 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago