ಕೋಲಾರ: ಜೆಡಿಯು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯದ ಉಸ್ತುವಾರಿ ಮನೀಶ್ ಕುಮಾರ್ ವರ್ಮಾ, ಪಕ್ಷದ ರಾಜ್ಯ ಅಧ್ಯಕ್ಷ ಮಾಜಿ ಶಾಸಕ ಮಹಿಮ ಪಟೇಲ್ ಯುವ ಘಟಕದ ರಾಜ್ಯಾಧ್ಯಕ್ಷ ಡಾ.ನಾಗರಾಜ್ ಮತ್ತು ಇತರೆ ಪದಾಧಿಕಾರಿಗಳು ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ಪಕ್ಷದ ಹಿರಿಯ ರಾಜಕಾರಣಿ ಎಚ್.ಡಿ. ದೇವೇಗೌಡರವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮುಂಬರುವ ಚುನಾವಣೆಗಳ ಕುರಿತಂತೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಮನೀಶ್ ಕುಮಾರ್ ಶರ್ಮ ಅವರು ಜೆಡಿಯು ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸುವುದು ಮುಂಬರುವ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಕಲ್ಲಂಡೂರು ಡಾ ಕೆ.ನಾಗರಾಜ್ ರವರನ್ನು ಆಯ್ಕೆ ಎನ್.ಡಿ.ಎ ಮೈತ್ರಿ ಕೂಟದಿಂದ ನಾವೆಲ್ಲ ಸೇರಿ ಗೆಲ್ಲಿಸಲು ಸಹಕರಿಸಬೇಕು ಮುಂದಿನ ಜಿಪಂ ತಾಪಂ ಚುನಾವಣೆಗೂ ಜೆಡಿಯು ಪಕ್ಷದಿಂದ ಅಭ್ಯರ್ಥಿಗಳನ್ನು ನಿಲ್ಲಿಸಲಿದ್ದು ಡಾ ನಾಗರಾಜ್ ಗೆಲುವ ಹಾಗೂ ರಾಜ್ಯದಲ್ಲಿ ಜೆಡಿಯು ಪಕ್ಷದ ಹಿಂದಿನ ಗತವೈಭವ ತರುವುದು ಮುಖ್ಯ ಗುರಿಯಾಗಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಬಿಹಾರ ರಾಜ್ಯದ ಸಿಎಂ ನಿತೀಶ್ ಕುಮಾರ ಅವರ ಸಲಹಾ ಸಮಿತಿ ಸದಸ್ಯರಾದ ವಿಶಿಷ್ಟ ಮಂಡಲ್, ಅಜಯ್ ರಾವ್, ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಗಂಗೂರ್, ರೈತ ಘಟಕದ ಅಧ್ಯಕ್ಷ ಶ್ರೀನಿವಾಸ್ ಗೌಡ, ಮಹಿಳಾ ಘಟಕದ ಅಧ್ಯಕ್ಷೆ ಕಲಾವತಿ, ಪ್ರಧಾನ ಕಾರ್ಯದರ್ಶಿಗಳಾದ ರಂಗನಾಥ್, ಲಕ್ಷ್ಮೀ, ಯುವ ಘಟಕದ ಕಾರ್ಯಾಧ್ಯಕ್ಷ ಲಕನ್, ಉಪಾಧ್ಯಕ್ಷರಾದ ಗಂಗರಾಜು, ಡಿ ಜೆ ಪ್ರಭು, ಕಾರ್ಯದರ್ಶಿಗಳಾದ ಕ್ರಾಂತಿ, ಸೂರ್ಯಪ್ರಕಾಶ್ ಮಾಡಿಕ್, ಶಾಂತ ಕುಮಾರಿ, ಶಿಂದೆ, ಶ್ರೀ ಶೈಲ ಗೌಡ, ನಿಲಿಗಿರಿಯಪ್ಪ, ಶಕುಂತಲಾ ಶೆಟ್ಟಿ, ನಾರಾಯಣ ಸ್ವಾಮಿ ಗೌಡ, ಲಕ್ಷ್ಮೀ ಪತ್ತಾರ್, ಹೈಬತ್ತಿ, ಅಂಬರೀಷ್, ಮಂಜುನಾಥ್ ಗೌಡ, ಸುಮ,ಫಿಜ, ನಿರ್ಮಲ, ಚಂದ್ರು, ಸುರೇಶ ಮಲ್ಲಮ್ಮ, ಸುಬ್ರಮಣಿ, ಬಾಬು, ನಾಗರಾಜ್, ಚಿನ್ಮಯ, ಮುಂತಾದವರು ಇದ್ದರು.
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…