Categories: ಕೋಲಾರ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಜೆಡಿಯು ಮುಖಂಡರೊಂದಿಗೆ ಭೇಟಿ ಮಾಡಿದ ಕಲ್ಲಂಡೂರು ಡಾ ಕೆ.ನಾಗರಾಜ್

ಕೋಲಾರ: ಜೆಡಿಯು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯದ ಉಸ್ತುವಾರಿ ಮನೀಶ್ ಕುಮಾರ್ ವರ್ಮಾ, ಪಕ್ಷದ ರಾಜ್ಯ ಅಧ್ಯಕ್ಷ ಮಾಜಿ ಶಾಸಕ ಮಹಿಮ ಪಟೇಲ್ ಯುವ ಘಟಕದ ರಾಜ್ಯಾಧ್ಯಕ್ಷ ಡಾ.ನಾಗರಾಜ್ ಮತ್ತು ಇತರೆ ಪದಾಧಿಕಾರಿಗಳು ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ಪಕ್ಷದ ಹಿರಿಯ ರಾಜಕಾರಣಿ ಎಚ್.ಡಿ. ದೇವೇಗೌಡರವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮುಂಬರುವ ಚುನಾವಣೆಗಳ ಕುರಿತಂತೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಮನೀಶ್ ಕುಮಾರ್ ಶರ್ಮ ಅವರು ಜೆಡಿಯು ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸುವುದು ಮುಂಬರುವ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಕಲ್ಲಂಡೂರು ಡಾ ಕೆ.ನಾಗರಾಜ್ ರವರನ್ನು ಆಯ್ಕೆ ಎನ್.ಡಿ.ಎ ಮೈತ್ರಿ ಕೂಟದಿಂದ ನಾವೆಲ್ಲ ಸೇರಿ ಗೆಲ್ಲಿಸಲು ಸಹಕರಿಸಬೇಕು ಮುಂದಿನ ಜಿಪಂ ತಾಪಂ ಚುನಾವಣೆಗೂ ಜೆಡಿಯು ಪಕ್ಷದಿಂದ ಅಭ್ಯರ್ಥಿಗಳನ್ನು ನಿಲ್ಲಿಸಲಿದ್ದು ಡಾ ನಾಗರಾಜ್ ಗೆಲುವ ಹಾಗೂ ರಾಜ್ಯದಲ್ಲಿ ಜೆಡಿಯು ಪಕ್ಷದ ಹಿಂದಿನ ಗತವೈಭವ ತರುವುದು ಮುಖ್ಯ ಗುರಿಯಾಗಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬಿಹಾರ ರಾಜ್ಯದ ಸಿಎಂ ನಿತೀಶ್ ಕುಮಾರ ಅವರ ಸಲಹಾ ಸಮಿತಿ ಸದಸ್ಯರಾದ ವಿಶಿಷ್ಟ ಮಂಡಲ್, ಅಜಯ್ ರಾವ್, ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಗಂಗೂರ್, ರೈತ ಘಟಕದ ಅಧ್ಯಕ್ಷ ಶ್ರೀನಿವಾಸ್ ಗೌಡ, ಮಹಿಳಾ ಘಟಕದ ಅಧ್ಯಕ್ಷೆ ಕಲಾವತಿ, ಪ್ರಧಾನ ಕಾರ್ಯದರ್ಶಿಗಳಾದ ರಂಗನಾಥ್, ಲಕ್ಷ್ಮೀ, ಯುವ ಘಟಕದ ಕಾರ್ಯಾಧ್ಯಕ್ಷ ಲಕನ್, ಉಪಾಧ್ಯಕ್ಷರಾದ ಗಂಗರಾಜು, ಡಿ ಜೆ ಪ್ರಭು, ಕಾರ್ಯದರ್ಶಿಗಳಾದ ಕ್ರಾಂತಿ, ಸೂರ್ಯಪ್ರಕಾಶ್ ಮಾಡಿಕ್, ಶಾಂತ ಕುಮಾರಿ, ಶಿಂದೆ, ಶ್ರೀ ಶೈಲ ಗೌಡ, ನಿಲಿಗಿರಿಯಪ್ಪ, ಶಕುಂತಲಾ ಶೆಟ್ಟಿ, ನಾರಾಯಣ ಸ್ವಾಮಿ ಗೌಡ, ಲಕ್ಷ್ಮೀ ಪತ್ತಾರ್, ಹೈಬತ್ತಿ, ಅಂಬರೀಷ್, ಮಂಜುನಾಥ್ ಗೌಡ, ಸುಮ,ಫಿಜ, ನಿರ್ಮಲ, ಚಂದ್ರು, ಸುರೇಶ ಮಲ್ಲಮ್ಮ, ಸುಬ್ರಮಣಿ, ಬಾಬು, ನಾಗರಾಜ್, ಚಿನ್ಮಯ, ಮುಂತಾದವರು ಇದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

2 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

4 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

9 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

10 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

13 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago