ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (92) ವಿಧಿವಶ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ(92) ಅವರು ಸದಾಶಿವನಗರದ ತಮ್ಮ ನಿವಾಸದಲ್ಲಿ ಇಂದು ವಿಧಿವಶರಾಗಿದ್ದಾರೆ. ಅವರು ವಯೋಸಹಸ ಕಾಯಿಲೆಯಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನ ಹೊಂದಿದ್ದಾರೆ.

ಎಸ್​.ಎಂ.ಕೃಷ್ಣ ಅವರ ಪೂರ್ಣ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಮಂಡ್ಯದ ಸೋಮನಹಳ್ಳಿಯಲ್ಲಿ 1932ರಲ್ಲಿ ಜನಿಸಿದ್ದ ಅವರು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದುಕೊಂಡಿದ್ದರು. ಎಸ್‌.ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.

ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು. 1971 ರಿಂದ 2014ರವರೆಗೆ ವಿವಿಧ ಕಾಲಘಟ್ಟದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಗಿದ್ದರು.

ಎಸ್.ಎಂ.ಕೃಷ್ಣ ಅವರು ಸಿಎಂ ಆಗಿದ್ದ ವೇಳೆ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟ, ಯಶಸ್ವಿನಿ ಯೋಜನೆ, ಬೆಂಗಳೂರು-ಮೈಸೂರು ಹೆದ್ದಾರಿ, ಬೆಂಗಳೂರನ್ನು ಸಿಲಿಕಾನ್ ಸಿಟಿಯನ್ನಾಗಿ ಮಾಡಿದ್ದು, ಐಟಿ ಬಿಟಿಯಲ್ಲಿ ಬಹುದೊಡ್ಡ ಕ್ರಾಂತಿ ಸೇರಿದಂತೆ ಇನ್ನೂ ಹತ್ತಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಜಕ್ಕಲಮೊಡಗು ಕುಡಿಯುವ ನೀರಿನ ಕಾಮಗಾರಿಗೆ ಶಂಕುಸ್ಥಾಪನೆ, ಅಂಬೇಡ್ಕರ್ ಪ್ರತಿಮೆ ಉದ್ಘಾಟನೆ ಮಾಡಿದ್ದು ಎಸ್‌. ಎಂ.ಕೃಷ್ಷ ಅವರು.

ಎಸ್.ಎಂ ಕೃಷ್ಣ ಅವರು ಮೊದಲ ಬಾರಿಗೆ ರಾಜಕೀಯ ಚುನಾವಣಾ ಪ್ರಚಾರ ನಡೆಸಿದ್ದು ಅಮೆರಿಕದಲ್ಲಿ ಓದುವಾಗ ಜಾನ್ ಕೆನಡಿ ಪರವಾಗಿ. ಹೀಗಾಗಿ ಕೆನಡಿ ಅವರು ಅಭಿನಂದನ ಪತ್ರ ಬರೆದಿದ್ದರು ಇವರಿಗೆ.

ಇವರು ಮೊದಲು ಶಾಸಕರಾಗಿದ್ದು ಸ್ವಂತ್ರ ಅಭ್ಯರ್ಥಿಯಾಗಿ ಮದ್ದೂರು ಕ್ಷೇತ್ರದಲ್ಲಿ. 1965 ರಲ್ಲಿ. 1968 ರಲ್ಲಿ ಮಂಡ್ಯ ಎಂಪಿ ಸೋಷಿಯಲಿಸ್ಟ್ ಪಕ್ಷದಿಂದ.
1971 ರಲ್ಲಿ ಮಂಡ್ಯ ಎಂಪಿ ಇಂದಿರಾ ಕಾಂಗ್ರೆಸ್ ಪಕ್ಷದಿಂದ. 1976ರಲ್ಲಿ‌ ದೇವರಾಜ ಅರಸು ಸಂಪುಟದ ಕೈಗಾರಿಕಾ ಸಚಿವರಾಗಿದ್ದರು.

Leave a Reply

Your email address will not be published. Required fields are marked *