Categories: Home

ಮಾಜಿ ಯೋಧನ ಮನೆಗೆ ತಂತಿ ಬೇಲಿ ದಿಗ್ಬಂಧನ: ನಮ್ಮ ಜಾಗವನ್ನ ಅತಿಕ್ರಮಣ ಪ್ರವೇಶ ಮಾಡಿ ಮನೆಯ ಸುತ್ತ ತಂತಿಬೇಲಿ ಹಾಕಿ ದೌರ್ಜನ್ಯ- ಮಾಜಿ ಯೋಧ ರವಿಕುಮಾರ್ ಆರೋಪ

ದೊಡ್ಡಬಳ್ಳಾಪುರ : ಪಿತ್ರಾರ್ಜಿತವಾಗಿ ಬಂದಿದ್ದ ಆಸ್ತಿಯಲ್ಲಿ ಮಾಜಿ ಯೋಧ ಮನೆ ಕಟ್ಟಿಕೊಂಡು ವಾಸವಾಗಿದ್ದರು. ಇದೀಗ ಪಕ್ಕದ ಜಮೀನಿನವರು ದೌರ್ಜನ್ಯದಿಂದ ಮನೆಯ ಸುತ್ತ ತಂತಿ ಬೇಲಿಯನ್ನ ಹಾಕಿ ದಿಗ್ಬಂಧನ ಮಾಡಿದ್ದಾರೆ. ಮನೆಯಿಂದ ಹೊರಕ್ಕೆ ಮತ್ತು ಒಳಕ್ಕೆ ಹೋಗದಂತೆ ಮಾಡಿದ್ದಾರೆ ಎಂದು ಮಾಜಿ ಯೋಧ ರವಿಕುಮಾರ್ ತಮ್ಮ ಅಳಲು ತೋಡಿಕೊಂಡಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿಯ ಗೊಲ್ಲಹಳ್ಳಿಯ ತಾಂಡದ ನಿವಾಸಿ ರವಿಕುಮಾರ್ ಭಾರತೀಯ ಸೇನೆಯ ಮಾಜಿ ಯೋಧ, ನಿವೃತ್ತಿಯ ನಂತರ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮದಲ್ಲಿ ಪಿತ್ರಾರ್ಜಿತವಾಗಿ ಬಂದಿದ್ದ ಜಾಗದಲ್ಲಿ ಮನೆಯನ್ನು ಕಟ್ಟಿಕೊಂಡು ವಯಸ್ಸಾದ ತಂದೆ ಮತ್ತು ಹೆಂಡತಿ ಮಕ್ಕಳ ಜೊತೆಯಲ್ಲಿ ವಾಸವಾಗಿದ್ದಾರೆ. ಇಂದು ಅವರ ತಂದೆ ಒಬ್ಬರೇ ಮನೆಯಲ್ಲಿದ್ದಾಗ ದೌರ್ಜನ್ಯದಿಂದ ಮನೆಯ ಸುತ್ತಾ ತಂತಿ ಬೇಲಿಯನ್ನ ಹಾಕಲಾಗಿದೆ ಎಂಬ ಆರೋಪಿಸಲಾಗಿದೆ.

ತಮ್ಮದೇ ಜಾಗವನ್ನ ಅತಿಕ್ರಮಣ ಪ್ರವೇಶ ಮಾಡಿ ಮನೆಯ ಸುತ್ತ ತಂತಿಬೇಲಿ ಹಾಕಿದ್ದಾರೆ ಎಂದು ಆರೋಪಿಸಿರುವ ರವಿಕುಮಾರ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಯೋಧ ರವಿಕುಮಾರ್, 150 ವರ್ಷಗಳ ಪಿತ್ರಾರ್ಜಿತ ಆಸ್ತಿ ಇದು, ಸೈನಿಕನಾಗಿ ನಿವೃತ್ತಿ ಪಡೆದ ನಂತರ ಪಿತ್ರಾರ್ಜಿತವಾಗಿ ಬಂದ ಸುಮಾರು 6 ಗುಂಟೆ ಜಾಗದಲ್ಲಿ ಮನೆಕಟ್ಟಿಕೊಂಡು ವಾಸವಾಗಿದ್ದಾನೆ. ಪಕ್ಕದ ಮನೆಯ ವಾಸಿ ಸುಬ್ರಮಣಿ ಮತ್ತು ಮುನಿಯಪ್ಪರವರು ಈ ಜಾಗ ತಮ್ಮದೆಂದ್ದು, ಇಂದು ನಮ್ಮ ತಂದೆಯವರು ಒಬ್ಬರೇ ಮನೆಯಲ್ಲಿದ್ದಾಗ ಮನೆಯ ಸುತ್ತ ತಂತಿ ಬೇಲಿ ಹಾಕಿದ್ದಾರೆ. ಕೇಳಲು ಹೋದ ನಮ್ಮ ತಂದೆಯನ್ನ ನೂಕಾಡಿದ್ದಾರೆ. ಸರ್ವೆ ಮಾಡಿದ್ದಾಗ ಸುಬ್ರಮಣಿ ನಮ್ಮ ಜಾಗವನ್ನ ಒತ್ತುವರಿ ಮಾಡಿರುವುದು ಬೆಳಕಿಗೆ ಬಂತು, ಆದರೂ ಸಹ ನಮ್ಮ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕೋರ್ಟ್ ನಲ್ಲಿ ತಡೆಯಾಜ್ಞೆ ಇದ್ದರು ಇಂದು ಏಕಾಏಕಿ ಬಂದು ಮನೆಯ ಸುತ್ತ ತಂತಿ ಬೇಲಿ ಹಾಕಿದ್ದಾರೆ, ತಂತಿ ಬೇಲಿಯಿಂದ ಮನೆಯೊಳಕ್ಕೆ ಮತ್ತು ಮನೆಯಿಂದ ಹೊರಗೆ ಬರದಂತೆ ಮಾಡಿದ್ದಾರೆ, ಇತ್ತಿಚೇಗೆ ನನಗೆ ಹೃದಯಾಘಾತವಾಗಿದೆ. ವಯಸ್ಸಾದ ತಂದೆಯವರು ಮನೆಯಲ್ಲಿದ್ದಾರೆ, ನಮಗೆ ರಕ್ಷಣೆ ನೀಡುವಂತೆ ಮತ್ತು ತಂತಿ ಬೇಲಿ ತೆರವು ಮಾಡುವಂತೆ ಪೊಲೀಸರಲ್ಲಿ ಮನವಿ ಮಾಡಿದರು.

ರವಿಕುಮಾರ್ ರವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸುಬ್ರಮಣಿ, ಈ ಹಿಂದೆ ಈ ಜಾಗದಲ್ಲಿ ಕಾಂಪೌಂಡ್ ಇತ್ತು, ಇತ್ತಿಚೇಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರು ಕಾಂಪೌಂಡ್ ಗೆ ಡಿಕ್ಕಿ ಹೊಡೆದಿತ್ತು, ಇದರಿಂದ ಕಾಂಪೌಂಡ್ ಗೋಡೆ ಸಂಪೂರ್ಣ ಕುಸಿದು ಬಿದ್ದಿತ್ತು, ಕೆಲವು ದಿನಗಳ ಹಿಂದೆ ಕಾಂಪೌಂಡ್ ಅವರಣದಲ್ಲಿದ್ದ ಬೈಕ್ ಸಹ ಕಳವಾಗಿತ್ತು, ಕಳ್ಳಕಾಕರ ಭಯದಿಂದ ಕಾಂಪೌಂಡ್ ಇದ್ದ ಜಾಗದಲ್ಲಿಯೇ ತಂತಿ ಬೇಲಿಯನ್ನ ಅಳವಡಿಕೆ ಮಾಡಲಾಗಿದೆ. ಕೋರ್ಟ್ ತಡೆಯಾಜ್ಞೆ ಇರುವುದು ಅವರ ಜಾಗಕ್ಕೆ, ನಮ್ಮ ಜಾಗದಲ್ಲಿ ನಾವು ತಂತಿ ಬೇಲಿ ಹಾಕಲಾಗಿದೆ ಎಂದರು.

Ramesh Babu

Journalist

Recent Posts

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

3 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

8 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

16 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

18 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

21 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

22 hours ago