Categories: Home

ಮಾಜಿ ಯೋಧನ ಮನೆಗೆ ತಂತಿ ಬೇಲಿ ದಿಗ್ಬಂಧನ: ನಮ್ಮ ಜಾಗವನ್ನ ಅತಿಕ್ರಮಣ ಪ್ರವೇಶ ಮಾಡಿ ಮನೆಯ ಸುತ್ತ ತಂತಿಬೇಲಿ ಹಾಕಿ ದೌರ್ಜನ್ಯ- ಮಾಜಿ ಯೋಧ ರವಿಕುಮಾರ್ ಆರೋಪ

ದೊಡ್ಡಬಳ್ಳಾಪುರ : ಪಿತ್ರಾರ್ಜಿತವಾಗಿ ಬಂದಿದ್ದ ಆಸ್ತಿಯಲ್ಲಿ ಮಾಜಿ ಯೋಧ ಮನೆ ಕಟ್ಟಿಕೊಂಡು ವಾಸವಾಗಿದ್ದರು. ಇದೀಗ ಪಕ್ಕದ ಜಮೀನಿನವರು ದೌರ್ಜನ್ಯದಿಂದ ಮನೆಯ ಸುತ್ತ ತಂತಿ ಬೇಲಿಯನ್ನ ಹಾಕಿ ದಿಗ್ಬಂಧನ ಮಾಡಿದ್ದಾರೆ. ಮನೆಯಿಂದ ಹೊರಕ್ಕೆ ಮತ್ತು ಒಳಕ್ಕೆ ಹೋಗದಂತೆ ಮಾಡಿದ್ದಾರೆ ಎಂದು ಮಾಜಿ ಯೋಧ ರವಿಕುಮಾರ್ ತಮ್ಮ ಅಳಲು ತೋಡಿಕೊಂಡಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿಯ ಗೊಲ್ಲಹಳ್ಳಿಯ ತಾಂಡದ ನಿವಾಸಿ ರವಿಕುಮಾರ್ ಭಾರತೀಯ ಸೇನೆಯ ಮಾಜಿ ಯೋಧ, ನಿವೃತ್ತಿಯ ನಂತರ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮದಲ್ಲಿ ಪಿತ್ರಾರ್ಜಿತವಾಗಿ ಬಂದಿದ್ದ ಜಾಗದಲ್ಲಿ ಮನೆಯನ್ನು ಕಟ್ಟಿಕೊಂಡು ವಯಸ್ಸಾದ ತಂದೆ ಮತ್ತು ಹೆಂಡತಿ ಮಕ್ಕಳ ಜೊತೆಯಲ್ಲಿ ವಾಸವಾಗಿದ್ದಾರೆ. ಇಂದು ಅವರ ತಂದೆ ಒಬ್ಬರೇ ಮನೆಯಲ್ಲಿದ್ದಾಗ ದೌರ್ಜನ್ಯದಿಂದ ಮನೆಯ ಸುತ್ತಾ ತಂತಿ ಬೇಲಿಯನ್ನ ಹಾಕಲಾಗಿದೆ ಎಂಬ ಆರೋಪಿಸಲಾಗಿದೆ.

ತಮ್ಮದೇ ಜಾಗವನ್ನ ಅತಿಕ್ರಮಣ ಪ್ರವೇಶ ಮಾಡಿ ಮನೆಯ ಸುತ್ತ ತಂತಿಬೇಲಿ ಹಾಕಿದ್ದಾರೆ ಎಂದು ಆರೋಪಿಸಿರುವ ರವಿಕುಮಾರ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಯೋಧ ರವಿಕುಮಾರ್, 150 ವರ್ಷಗಳ ಪಿತ್ರಾರ್ಜಿತ ಆಸ್ತಿ ಇದು, ಸೈನಿಕನಾಗಿ ನಿವೃತ್ತಿ ಪಡೆದ ನಂತರ ಪಿತ್ರಾರ್ಜಿತವಾಗಿ ಬಂದ ಸುಮಾರು 6 ಗುಂಟೆ ಜಾಗದಲ್ಲಿ ಮನೆಕಟ್ಟಿಕೊಂಡು ವಾಸವಾಗಿದ್ದಾನೆ. ಪಕ್ಕದ ಮನೆಯ ವಾಸಿ ಸುಬ್ರಮಣಿ ಮತ್ತು ಮುನಿಯಪ್ಪರವರು ಈ ಜಾಗ ತಮ್ಮದೆಂದ್ದು, ಇಂದು ನಮ್ಮ ತಂದೆಯವರು ಒಬ್ಬರೇ ಮನೆಯಲ್ಲಿದ್ದಾಗ ಮನೆಯ ಸುತ್ತ ತಂತಿ ಬೇಲಿ ಹಾಕಿದ್ದಾರೆ. ಕೇಳಲು ಹೋದ ನಮ್ಮ ತಂದೆಯನ್ನ ನೂಕಾಡಿದ್ದಾರೆ. ಸರ್ವೆ ಮಾಡಿದ್ದಾಗ ಸುಬ್ರಮಣಿ ನಮ್ಮ ಜಾಗವನ್ನ ಒತ್ತುವರಿ ಮಾಡಿರುವುದು ಬೆಳಕಿಗೆ ಬಂತು, ಆದರೂ ಸಹ ನಮ್ಮ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕೋರ್ಟ್ ನಲ್ಲಿ ತಡೆಯಾಜ್ಞೆ ಇದ್ದರು ಇಂದು ಏಕಾಏಕಿ ಬಂದು ಮನೆಯ ಸುತ್ತ ತಂತಿ ಬೇಲಿ ಹಾಕಿದ್ದಾರೆ, ತಂತಿ ಬೇಲಿಯಿಂದ ಮನೆಯೊಳಕ್ಕೆ ಮತ್ತು ಮನೆಯಿಂದ ಹೊರಗೆ ಬರದಂತೆ ಮಾಡಿದ್ದಾರೆ, ಇತ್ತಿಚೇಗೆ ನನಗೆ ಹೃದಯಾಘಾತವಾಗಿದೆ. ವಯಸ್ಸಾದ ತಂದೆಯವರು ಮನೆಯಲ್ಲಿದ್ದಾರೆ, ನಮಗೆ ರಕ್ಷಣೆ ನೀಡುವಂತೆ ಮತ್ತು ತಂತಿ ಬೇಲಿ ತೆರವು ಮಾಡುವಂತೆ ಪೊಲೀಸರಲ್ಲಿ ಮನವಿ ಮಾಡಿದರು.

ರವಿಕುಮಾರ್ ರವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸುಬ್ರಮಣಿ, ಈ ಹಿಂದೆ ಈ ಜಾಗದಲ್ಲಿ ಕಾಂಪೌಂಡ್ ಇತ್ತು, ಇತ್ತಿಚೇಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರು ಕಾಂಪೌಂಡ್ ಗೆ ಡಿಕ್ಕಿ ಹೊಡೆದಿತ್ತು, ಇದರಿಂದ ಕಾಂಪೌಂಡ್ ಗೋಡೆ ಸಂಪೂರ್ಣ ಕುಸಿದು ಬಿದ್ದಿತ್ತು, ಕೆಲವು ದಿನಗಳ ಹಿಂದೆ ಕಾಂಪೌಂಡ್ ಅವರಣದಲ್ಲಿದ್ದ ಬೈಕ್ ಸಹ ಕಳವಾಗಿತ್ತು, ಕಳ್ಳಕಾಕರ ಭಯದಿಂದ ಕಾಂಪೌಂಡ್ ಇದ್ದ ಜಾಗದಲ್ಲಿಯೇ ತಂತಿ ಬೇಲಿಯನ್ನ ಅಳವಡಿಕೆ ಮಾಡಲಾಗಿದೆ. ಕೋರ್ಟ್ ತಡೆಯಾಜ್ಞೆ ಇರುವುದು ಅವರ ಜಾಗಕ್ಕೆ, ನಮ್ಮ ಜಾಗದಲ್ಲಿ ನಾವು ತಂತಿ ಬೇಲಿ ಹಾಕಲಾಗಿದೆ ಎಂದರು.

Ramesh Babu

Journalist

Recent Posts

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

20 minutes ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

6 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

17 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

18 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

18 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

19 hours ago