ದೊಡ್ಡಬಳ್ಳಾಪುರ : ಪಿತ್ರಾರ್ಜಿತವಾಗಿ ಬಂದಿದ್ದ ಆಸ್ತಿಯಲ್ಲಿ ಮಾಜಿ ಯೋಧ ಮನೆ ಕಟ್ಟಿಕೊಂಡು ವಾಸವಾಗಿದ್ದರು. ಇದೀಗ ಪಕ್ಕದ ಜಮೀನಿನವರು ದೌರ್ಜನ್ಯದಿಂದ ಮನೆಯ ಸುತ್ತ ತಂತಿ ಬೇಲಿಯನ್ನ ಹಾಕಿ ದಿಗ್ಬಂಧನ ಮಾಡಿದ್ದಾರೆ. ಮನೆಯಿಂದ ಹೊರಕ್ಕೆ ಮತ್ತು ಒಳಕ್ಕೆ ಹೋಗದಂತೆ ಮಾಡಿದ್ದಾರೆ ಎಂದು ಮಾಜಿ ಯೋಧ ರವಿಕುಮಾರ್ ತಮ್ಮ ಅಳಲು ತೋಡಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿಯ ಗೊಲ್ಲಹಳ್ಳಿಯ ತಾಂಡದ ನಿವಾಸಿ ರವಿಕುಮಾರ್ ಭಾರತೀಯ ಸೇನೆಯ ಮಾಜಿ ಯೋಧ, ನಿವೃತ್ತಿಯ ನಂತರ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮದಲ್ಲಿ ಪಿತ್ರಾರ್ಜಿತವಾಗಿ ಬಂದಿದ್ದ ಜಾಗದಲ್ಲಿ ಮನೆಯನ್ನು ಕಟ್ಟಿಕೊಂಡು ವಯಸ್ಸಾದ ತಂದೆ ಮತ್ತು ಹೆಂಡತಿ ಮಕ್ಕಳ ಜೊತೆಯಲ್ಲಿ ವಾಸವಾಗಿದ್ದಾರೆ. ಇಂದು ಅವರ ತಂದೆ ಒಬ್ಬರೇ ಮನೆಯಲ್ಲಿದ್ದಾಗ ದೌರ್ಜನ್ಯದಿಂದ ಮನೆಯ ಸುತ್ತಾ ತಂತಿ ಬೇಲಿಯನ್ನ ಹಾಕಲಾಗಿದೆ ಎಂಬ ಆರೋಪಿಸಲಾಗಿದೆ.
ತಮ್ಮದೇ ಜಾಗವನ್ನ ಅತಿಕ್ರಮಣ ಪ್ರವೇಶ ಮಾಡಿ ಮನೆಯ ಸುತ್ತ ತಂತಿಬೇಲಿ ಹಾಕಿದ್ದಾರೆ ಎಂದು ಆರೋಪಿಸಿರುವ ರವಿಕುಮಾರ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಯೋಧ ರವಿಕುಮಾರ್, 150 ವರ್ಷಗಳ ಪಿತ್ರಾರ್ಜಿತ ಆಸ್ತಿ ಇದು, ಸೈನಿಕನಾಗಿ ನಿವೃತ್ತಿ ಪಡೆದ ನಂತರ ಪಿತ್ರಾರ್ಜಿತವಾಗಿ ಬಂದ ಸುಮಾರು 6 ಗುಂಟೆ ಜಾಗದಲ್ಲಿ ಮನೆಕಟ್ಟಿಕೊಂಡು ವಾಸವಾಗಿದ್ದಾನೆ. ಪಕ್ಕದ ಮನೆಯ ವಾಸಿ ಸುಬ್ರಮಣಿ ಮತ್ತು ಮುನಿಯಪ್ಪರವರು ಈ ಜಾಗ ತಮ್ಮದೆಂದ್ದು, ಇಂದು ನಮ್ಮ ತಂದೆಯವರು ಒಬ್ಬರೇ ಮನೆಯಲ್ಲಿದ್ದಾಗ ಮನೆಯ ಸುತ್ತ ತಂತಿ ಬೇಲಿ ಹಾಕಿದ್ದಾರೆ. ಕೇಳಲು ಹೋದ ನಮ್ಮ ತಂದೆಯನ್ನ ನೂಕಾಡಿದ್ದಾರೆ. ಸರ್ವೆ ಮಾಡಿದ್ದಾಗ ಸುಬ್ರಮಣಿ ನಮ್ಮ ಜಾಗವನ್ನ ಒತ್ತುವರಿ ಮಾಡಿರುವುದು ಬೆಳಕಿಗೆ ಬಂತು, ಆದರೂ ಸಹ ನಮ್ಮ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕೋರ್ಟ್ ನಲ್ಲಿ ತಡೆಯಾಜ್ಞೆ ಇದ್ದರು ಇಂದು ಏಕಾಏಕಿ ಬಂದು ಮನೆಯ ಸುತ್ತ ತಂತಿ ಬೇಲಿ ಹಾಕಿದ್ದಾರೆ, ತಂತಿ ಬೇಲಿಯಿಂದ ಮನೆಯೊಳಕ್ಕೆ ಮತ್ತು ಮನೆಯಿಂದ ಹೊರಗೆ ಬರದಂತೆ ಮಾಡಿದ್ದಾರೆ, ಇತ್ತಿಚೇಗೆ ನನಗೆ ಹೃದಯಾಘಾತವಾಗಿದೆ. ವಯಸ್ಸಾದ ತಂದೆಯವರು ಮನೆಯಲ್ಲಿದ್ದಾರೆ, ನಮಗೆ ರಕ್ಷಣೆ ನೀಡುವಂತೆ ಮತ್ತು ತಂತಿ ಬೇಲಿ ತೆರವು ಮಾಡುವಂತೆ ಪೊಲೀಸರಲ್ಲಿ ಮನವಿ ಮಾಡಿದರು.
ರವಿಕುಮಾರ್ ರವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸುಬ್ರಮಣಿ, ಈ ಹಿಂದೆ ಈ ಜಾಗದಲ್ಲಿ ಕಾಂಪೌಂಡ್ ಇತ್ತು, ಇತ್ತಿಚೇಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರು ಕಾಂಪೌಂಡ್ ಗೆ ಡಿಕ್ಕಿ ಹೊಡೆದಿತ್ತು, ಇದರಿಂದ ಕಾಂಪೌಂಡ್ ಗೋಡೆ ಸಂಪೂರ್ಣ ಕುಸಿದು ಬಿದ್ದಿತ್ತು, ಕೆಲವು ದಿನಗಳ ಹಿಂದೆ ಕಾಂಪೌಂಡ್ ಅವರಣದಲ್ಲಿದ್ದ ಬೈಕ್ ಸಹ ಕಳವಾಗಿತ್ತು, ಕಳ್ಳಕಾಕರ ಭಯದಿಂದ ಕಾಂಪೌಂಡ್ ಇದ್ದ ಜಾಗದಲ್ಲಿಯೇ ತಂತಿ ಬೇಲಿಯನ್ನ ಅಳವಡಿಕೆ ಮಾಡಲಾಗಿದೆ. ಕೋರ್ಟ್ ತಡೆಯಾಜ್ಞೆ ಇರುವುದು ಅವರ ಜಾಗಕ್ಕೆ, ನಮ್ಮ ಜಾಗದಲ್ಲಿ ನಾವು ತಂತಿ ಬೇಲಿ ಹಾಕಲಾಗಿದೆ ಎಂದರು.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…