ದೊಡ್ಡಬಳ್ಳಾಪುರ(ತೂಬಗೆರೆ): ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ 56ನೇ ಹುಟ್ಟುಹಬ್ಬದ ಪ್ರಯುಕ್ತ ತೂಬಗೆರೆಯ ಆರ್ ಎಲ್ ಜಾಲಪ್ಪ ವೃದ್ಧಾಶ್ರಮದಲ್ಲಿ ನಾರಾಯಣಸ್ವಾಮಿ ಅಭಿಮಾನಿಗಳಿಂದ ವೃದ್ಧಾಶ್ರಮ ವಾಸಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ತೂಬಗೆರೆ ಹೋಬಳಿ ಜೆಡಿಎಸ್ ಅಧ್ಯಕ್ಷ ಜಗನ್ನಾಥ ಮಾತಾನಾಡಿ, ನಿಸರ್ಗ ನಾರಾಯಣಸ್ವಾಮಿ ಅವರ ವ್ಯಕ್ತಿತ್ವಕ್ಕೆ ಅನುಗುಣವಾಗಿ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶೋಷಿತರು, ಬಡವರು ಮತ್ತು ನಿರ್ಗತಿಕರ ಪಾಲಿಗೆ ಸದಾ ಸ್ಪಂದಿಸುವ ಗುಣ ಅವರಲ್ಲಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಅವರ ಹುಟ್ಟುಹಬ್ಬದ ನಿಜವಾದ ಅರ್ಥವನ್ನು ಅಭಿಮಾನಿಗಳು ನೀಡಿದ್ದಾರೆ ಎಂದರು.
ಯುವ ಮುಖಂಡ ಉದಯ ಆರಾಧ್ಯ ಮಾತಾನಾಡಿ, ನಿಸರ್ಗ ನಾರಾಯಣಸ್ವಾಮಿ ರವರು ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದಾದ್ಯಂತ ತಮ್ಮದೇ ಆದ ವರ್ಚಸ್ಸನ್ನು ಮೂಡಿಸಿದ್ದಾರೆ. ಬಡ ಮಧ್ಯಮ ವರ್ಗದಲ್ಲಿ ಹುಟ್ಟಿ ಬೆಳೆದು ಇಂದು ಸಕ್ರಿಯ ರಾಜಕಾರಣದಲ್ಲಿ ಮಹತ್ತರ ಮೈಲಿಗಲ್ಲು ಸಾಧಿಸಿದ್ದು ಸಮಾಜ ಸೇವೆಗೆ ತಮ್ಮ ಆದಾಯದ ಬಹುಪಾಲನ್ನು ಮೀಸಲಿಟ್ಟಿರುವುದು ಶ್ಲಾಘನೀಯ. ತೂಬಗೆರೆ ಜನರ ಬಗ್ಗೆ ವಿಶೇಷ ಪ್ರೀತಿ, ಕಾಳಜಿ ಹೊಂದಿರುವ ನಾರಾಯಣಸ್ವಾಮಿ, ಶಾಸಕರಾಗಿದ್ದಾಗ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದರು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್, ಮುಖಂಡ ಶಶಿಕುಮಾರ್, ರೈತ ಮುಖಂಡ ನಾರಾಯಣಸ್ವಾಮಿ, ಯುವ ಮುಖಂಡ ಉದಯ ಆರಾಧ್ಯ, ನಾಗರಾಜು, ವಿಜಯ್, ಶಿವು ಮತ್ತಿತರರು ಹಾಜರಿದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…