ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಜನ್ಮದಿನ: ವೃದ್ಧರಿಗೆ ಹಣ್ಣು-ಹಂಪಲು ವಿತರಣೆ

ದೊಡ್ಡಬಳ್ಳಾಪುರ(ತೂಬಗೆರೆ): ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ 56ನೇ ಹುಟ್ಟುಹಬ್ಬದ ಪ್ರಯುಕ್ತ ತೂಬಗೆರೆಯ ಆರ್ ಎಲ್ ಜಾಲಪ್ಪ ವೃದ್ಧಾಶ್ರಮದಲ್ಲಿ ನಾರಾಯಣಸ್ವಾಮಿ ಅಭಿಮಾನಿಗಳಿಂದ ವೃದ್ಧಾಶ್ರಮ ವಾಸಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ತೂಬಗೆರೆ ಹೋಬಳಿ ಜೆಡಿಎಸ್ ಅಧ್ಯಕ್ಷ ಜಗನ್ನಾಥ ಮಾತಾನಾಡಿ, ನಿಸರ್ಗ ನಾರಾಯಣಸ್ವಾಮಿ ಅವರ ವ್ಯಕ್ತಿತ್ವಕ್ಕೆ ಅನುಗುಣವಾಗಿ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶೋಷಿತರು, ಬಡವರು ಮತ್ತು ನಿರ್ಗತಿಕರ ಪಾಲಿಗೆ ಸದಾ ಸ್ಪಂದಿಸುವ ಗುಣ ಅವರಲ್ಲಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಅವರ ಹುಟ್ಟುಹಬ್ಬದ ನಿಜವಾದ ಅರ್ಥವನ್ನು ಅಭಿಮಾನಿಗಳು ನೀಡಿದ್ದಾರೆ ಎಂದರು.

ಯುವ ಮುಖಂಡ ಉದಯ ಆರಾಧ್ಯ ಮಾತಾನಾಡಿ, ನಿಸರ್ಗ ನಾರಾಯಣಸ್ವಾಮಿ ರವರು ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದಾದ್ಯಂತ ತಮ್ಮದೇ ಆದ ವರ್ಚಸ್ಸನ್ನು ಮೂಡಿಸಿದ್ದಾರೆ. ಬಡ ಮಧ್ಯಮ ವರ್ಗದಲ್ಲಿ ಹುಟ್ಟಿ ಬೆಳೆದು ಇಂದು ಸಕ್ರಿಯ ರಾಜಕಾರಣದಲ್ಲಿ ಮಹತ್ತರ ಮೈಲಿಗಲ್ಲು ಸಾಧಿಸಿದ್ದು ಸಮಾಜ ಸೇವೆಗೆ ತಮ್ಮ ಆದಾಯದ ಬಹುಪಾಲನ್ನು ಮೀಸಲಿಟ್ಟಿರುವುದು ಶ್ಲಾಘನೀಯ. ತೂಬಗೆರೆ ಜನರ ಬಗ್ಗೆ ವಿಶೇಷ ಪ್ರೀತಿ, ಕಾಳಜಿ ಹೊಂದಿರುವ ನಾರಾಯಣಸ್ವಾಮಿ, ಶಾಸಕರಾಗಿದ್ದಾಗ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್, ಮುಖಂಡ ಶಶಿಕುಮಾರ್, ರೈತ ಮುಖಂಡ ನಾರಾಯಣಸ್ವಾಮಿ, ಯುವ ಮುಖಂಡ ಉದಯ ಆರಾಧ್ಯ, ನಾಗರಾಜು, ವಿಜಯ್, ಶಿವು ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

6 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

6 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

9 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

11 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

13 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

13 hours ago