ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಜನ್ಮದಿನ: ವೃದ್ಧರಿಗೆ ಹಣ್ಣು-ಹಂಪಲು ವಿತರಣೆ

ದೊಡ್ಡಬಳ್ಳಾಪುರ(ತೂಬಗೆರೆ): ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ 56ನೇ ಹುಟ್ಟುಹಬ್ಬದ ಪ್ರಯುಕ್ತ ತೂಬಗೆರೆಯ ಆರ್ ಎಲ್ ಜಾಲಪ್ಪ ವೃದ್ಧಾಶ್ರಮದಲ್ಲಿ ನಾರಾಯಣಸ್ವಾಮಿ ಅಭಿಮಾನಿಗಳಿಂದ ವೃದ್ಧಾಶ್ರಮ ವಾಸಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ತೂಬಗೆರೆ ಹೋಬಳಿ ಜೆಡಿಎಸ್ ಅಧ್ಯಕ್ಷ ಜಗನ್ನಾಥ ಮಾತಾನಾಡಿ, ನಿಸರ್ಗ ನಾರಾಯಣಸ್ವಾಮಿ ಅವರ ವ್ಯಕ್ತಿತ್ವಕ್ಕೆ ಅನುಗುಣವಾಗಿ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶೋಷಿತರು, ಬಡವರು ಮತ್ತು ನಿರ್ಗತಿಕರ ಪಾಲಿಗೆ ಸದಾ ಸ್ಪಂದಿಸುವ ಗುಣ ಅವರಲ್ಲಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಅವರ ಹುಟ್ಟುಹಬ್ಬದ ನಿಜವಾದ ಅರ್ಥವನ್ನು ಅಭಿಮಾನಿಗಳು ನೀಡಿದ್ದಾರೆ ಎಂದರು.

ಯುವ ಮುಖಂಡ ಉದಯ ಆರಾಧ್ಯ ಮಾತಾನಾಡಿ, ನಿಸರ್ಗ ನಾರಾಯಣಸ್ವಾಮಿ ರವರು ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದಾದ್ಯಂತ ತಮ್ಮದೇ ಆದ ವರ್ಚಸ್ಸನ್ನು ಮೂಡಿಸಿದ್ದಾರೆ. ಬಡ ಮಧ್ಯಮ ವರ್ಗದಲ್ಲಿ ಹುಟ್ಟಿ ಬೆಳೆದು ಇಂದು ಸಕ್ರಿಯ ರಾಜಕಾರಣದಲ್ಲಿ ಮಹತ್ತರ ಮೈಲಿಗಲ್ಲು ಸಾಧಿಸಿದ್ದು ಸಮಾಜ ಸೇವೆಗೆ ತಮ್ಮ ಆದಾಯದ ಬಹುಪಾಲನ್ನು ಮೀಸಲಿಟ್ಟಿರುವುದು ಶ್ಲಾಘನೀಯ. ತೂಬಗೆರೆ ಜನರ ಬಗ್ಗೆ ವಿಶೇಷ ಪ್ರೀತಿ, ಕಾಳಜಿ ಹೊಂದಿರುವ ನಾರಾಯಣಸ್ವಾಮಿ, ಶಾಸಕರಾಗಿದ್ದಾಗ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್, ಮುಖಂಡ ಶಶಿಕುಮಾರ್, ರೈತ ಮುಖಂಡ ನಾರಾಯಣಸ್ವಾಮಿ, ಯುವ ಮುಖಂಡ ಉದಯ ಆರಾಧ್ಯ, ನಾಗರಾಜು, ವಿಜಯ್, ಶಿವು ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

17 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

19 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

20 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

1 day ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

1 day ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago