ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಜನ್ಮದಿನ: ವೃದ್ಧರಿಗೆ ಹಣ್ಣು-ಹಂಪಲು ವಿತರಣೆ

ದೊಡ್ಡಬಳ್ಳಾಪುರ(ತೂಬಗೆರೆ): ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ 56ನೇ ಹುಟ್ಟುಹಬ್ಬದ ಪ್ರಯುಕ್ತ ತೂಬಗೆರೆಯ ಆರ್ ಎಲ್ ಜಾಲಪ್ಪ ವೃದ್ಧಾಶ್ರಮದಲ್ಲಿ ನಾರಾಯಣಸ್ವಾಮಿ ಅಭಿಮಾನಿಗಳಿಂದ ವೃದ್ಧಾಶ್ರಮ ವಾಸಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ತೂಬಗೆರೆ ಹೋಬಳಿ ಜೆಡಿಎಸ್ ಅಧ್ಯಕ್ಷ ಜಗನ್ನಾಥ ಮಾತಾನಾಡಿ, ನಿಸರ್ಗ ನಾರಾಯಣಸ್ವಾಮಿ ಅವರ ವ್ಯಕ್ತಿತ್ವಕ್ಕೆ ಅನುಗುಣವಾಗಿ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶೋಷಿತರು, ಬಡವರು ಮತ್ತು ನಿರ್ಗತಿಕರ ಪಾಲಿಗೆ ಸದಾ ಸ್ಪಂದಿಸುವ ಗುಣ ಅವರಲ್ಲಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಅವರ ಹುಟ್ಟುಹಬ್ಬದ ನಿಜವಾದ ಅರ್ಥವನ್ನು ಅಭಿಮಾನಿಗಳು ನೀಡಿದ್ದಾರೆ ಎಂದರು.

ಯುವ ಮುಖಂಡ ಉದಯ ಆರಾಧ್ಯ ಮಾತಾನಾಡಿ, ನಿಸರ್ಗ ನಾರಾಯಣಸ್ವಾಮಿ ರವರು ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದಾದ್ಯಂತ ತಮ್ಮದೇ ಆದ ವರ್ಚಸ್ಸನ್ನು ಮೂಡಿಸಿದ್ದಾರೆ. ಬಡ ಮಧ್ಯಮ ವರ್ಗದಲ್ಲಿ ಹುಟ್ಟಿ ಬೆಳೆದು ಇಂದು ಸಕ್ರಿಯ ರಾಜಕಾರಣದಲ್ಲಿ ಮಹತ್ತರ ಮೈಲಿಗಲ್ಲು ಸಾಧಿಸಿದ್ದು ಸಮಾಜ ಸೇವೆಗೆ ತಮ್ಮ ಆದಾಯದ ಬಹುಪಾಲನ್ನು ಮೀಸಲಿಟ್ಟಿರುವುದು ಶ್ಲಾಘನೀಯ. ತೂಬಗೆರೆ ಜನರ ಬಗ್ಗೆ ವಿಶೇಷ ಪ್ರೀತಿ, ಕಾಳಜಿ ಹೊಂದಿರುವ ನಾರಾಯಣಸ್ವಾಮಿ, ಶಾಸಕರಾಗಿದ್ದಾಗ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್, ಮುಖಂಡ ಶಶಿಕುಮಾರ್, ರೈತ ಮುಖಂಡ ನಾರಾಯಣಸ್ವಾಮಿ, ಯುವ ಮುಖಂಡ ಉದಯ ಆರಾಧ್ಯ, ನಾಗರಾಜು, ವಿಜಯ್, ಶಿವು ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಮೇ 20 ಇ-ಫಾರ್ಮಸಿ ವಿರೋಧಿ ಬಂದ್‌ಗೆ ಔಷಧ ವ್ಯಾಪಾರಿಗಳ ಬೆಂಬಲ

ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…

5 hours ago

ಹಾಡೋನಹಳ್ಳಿ ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…

7 hours ago

ವಿ.ಡಿ ಸತೀಶನ್ ಕೇರಳದ ನೂತನ ಮುಖ್ಯಮಂತ್ರಿ

ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…

11 hours ago

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ “ಕೈ” ಪ್ರತಿಭಟನೆ

ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…

13 hours ago

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

1 day ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

1 day ago