ವಾಲ್ಮೀಕಿ ಮತ್ತು ನಾಯಕ ಸಮಾಜದ ವಿರುದ್ಧ ಅವಹೇಳನಕಾರಿ ಹಾಗೂ ಅಶ್ಲೀಲ ಪದ ಬಳಕೆ ಮಾಡಿದ ಆರೋಪದಡಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಆನೇಕ ಎಫ್ ಐಆರ್ ಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದರೂ ಸಹ ಇದುವರೆಗೂ ಅವರನ್ನು ಬಂಧನ ಮಾಡದ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆ ಮುಖ್ಯಸ್ಥರಾದ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರು ಅವರನ್ನು ಗುರುವಾರ ಭೇಟಿ ಮಾಡಿ ತಕ್ಷಣಕ್ಕೆ ಅವರನ್ನು ಬಂಧಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾದ ವತಿಯಿಂದ ಮನವಿ ಸಲ್ಲಿಸಲಾಯಿತು.
ರಾಜ್ಯಾದ್ಯಂತ ಆನೇಕ ಪೊಲೀಸ್ ಠಾಣೆಗಳಲ್ಲಿ ಜಾತಿನಿಂದನೆ ಎಫ್ ಐ ಆರ್ ಗಳು ದಾಖಲಾಗಿವೆ.ಆದರೆ ಇದುವರೆಗೂ ಅವರನ್ನು ಬಂಧನ ಮಾಡದ ಕ್ರಮವನ್ನು ಪ್ರಶ್ನಿಸಿ ಗುರುವಾರ ಡಿಜಿ ಮತ್ತು ಐಜಿ ಹಾಗೂ DCRE ಎಸ್ಪಿ ಅವರನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು ಸಮಾಜದ ಪರವಾಗಿ ಒತ್ತಡವೇರಿ ಬಂಧನ ಮಾಡುವಂತೆ ಮನವಿ ಮಾಡಿಕೊಂಡರು.
ಈ ವೇಳೆ ಅಖಿಲ ಕರ್ನಾಟಕ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾದ ರಾಜ್ಯಾಧ್ಯಕ್ಷರಾದ ಕೆ.ಸುಬ್ರಮಣಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್. ರಮೇಶ್, ಉಪಾಧ್ಯಕ್ಷ ಕೊಳತೂರು ಶ್ರೀನಿವಾಸ್ ಮನವಿ ಸಲ್ಲಿಸಿದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…