ವಾಲ್ಮೀಕಿ ಮತ್ತು ನಾಯಕ ಸಮಾಜದ ವಿರುದ್ಧ ಅವಹೇಳನಕಾರಿ ಹಾಗೂ ಅಶ್ಲೀಲ ಪದ ಬಳಕೆ ಮಾಡಿದ ಆರೋಪದಡಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಆನೇಕ ಎಫ್ ಐಆರ್ ಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದರೂ ಸಹ ಇದುವರೆಗೂ ಅವರನ್ನು ಬಂಧನ ಮಾಡದ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆ ಮುಖ್ಯಸ್ಥರಾದ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರು ಅವರನ್ನು ಗುರುವಾರ ಭೇಟಿ ಮಾಡಿ ತಕ್ಷಣಕ್ಕೆ ಅವರನ್ನು ಬಂಧಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾದ ವತಿಯಿಂದ ಮನವಿ ಸಲ್ಲಿಸಲಾಯಿತು.
ರಾಜ್ಯಾದ್ಯಂತ ಆನೇಕ ಪೊಲೀಸ್ ಠಾಣೆಗಳಲ್ಲಿ ಜಾತಿನಿಂದನೆ ಎಫ್ ಐ ಆರ್ ಗಳು ದಾಖಲಾಗಿವೆ.ಆದರೆ ಇದುವರೆಗೂ ಅವರನ್ನು ಬಂಧನ ಮಾಡದ ಕ್ರಮವನ್ನು ಪ್ರಶ್ನಿಸಿ ಗುರುವಾರ ಡಿಜಿ ಮತ್ತು ಐಜಿ ಹಾಗೂ DCRE ಎಸ್ಪಿ ಅವರನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು ಸಮಾಜದ ಪರವಾಗಿ ಒತ್ತಡವೇರಿ ಬಂಧನ ಮಾಡುವಂತೆ ಮನವಿ ಮಾಡಿಕೊಂಡರು.
ಈ ವೇಳೆ ಅಖಿಲ ಕರ್ನಾಟಕ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾದ ರಾಜ್ಯಾಧ್ಯಕ್ಷರಾದ ಕೆ.ಸುಬ್ರಮಣಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್. ರಮೇಶ್, ಉಪಾಧ್ಯಕ್ಷ ಕೊಳತೂರು ಶ್ರೀನಿವಾಸ್ ಮನವಿ ಸಲ್ಲಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…