ಕೋಲಾರ: ರಾಜ್ಯದ ಮಾಜಿ ಮುಖ್ಯಮಂತ್ರಿ, ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ಮಂಗಳವಾರ ಜಿಲ್ಲಾ ಬಿಜೆಪಿ ಪಕ್ಷದ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಮಾತನಾಡಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ರಾಜ್ಯಕ್ಕೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕವನ್ನು ಸದಾಕಾಲ ನೆನೆಯುತ್ತಾರೆ ಅವರ ರಾಜಕೀಯ ಉದ್ದಕ್ಕೂ ಹಿರಿಯರಿಗೆ, ಕಿರಿಯರಿಗೆ ಮಾರ್ಗದರ್ಶನ ನೀಡಿದ್ದಾರೆ ಅವರ ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ಅವರ ಕುಟುಂಬಕ್ಕೆ ನೋವು ಮೆರೆಸುವ ಶಕ್ತಿ ಕೊಟ್ಟು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಮಾವು ಅಭಿವೃದ್ಧಿ ನಿಗಮದ ಅಧ್ಯಕ್ಷ ವಾಸುದೇವ್, ಮುಖಂಡರಾದ ಕೋಳಿ ನಾಗರಾಜ್, ಎಸ್.ಬಿ ಮುನಿವೆಂಕಟಪ್ಪ, ಕೆಂಬೋಡಿ ನಾರಾಯಣಸ್ವಾಮಿ, ಹಾರೋಹಳ್ಲಿ ವೆಂಕಟೇಶ್, ತಿಮ್ಮರಾಯಪ್ಪ, ಓಹಿಲೇಶ್, ಜನಾರ್ದನ, ಅರುಣ್, ಮಂಜುನಾಥ್ ಸಿಂಗ್, ವೆಂಕಟ್, ಮುಂತಾದವರು ಇದ್ದರು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…