ಮಾಜಿ ಸಿಎಂ ಎಸ್​.ಎಂ ಕೃಷ್ಣ ವಿಧಿವಶ: ರಾಜ್ಯದಲ್ಲಿ ಇಂದಿನಿಂದ 3 ದಿನ ಶೋಕಾಚರಣೆ: ನಾಳೆ ಸರ್ಕಾರಿ ರಜೆ ಘೋಷಣೆ

ಮಾಜಿ ಮುಖ್ಯಮಂತ್ರಿ ಎಸ್​.ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಇದೇ ವೇಳೆ ನಾಳೆ (ಬುಧವಾರ ಡಿ. 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ, ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *