Categories: ರಾಜ್ಯ

ಮಾಜಿ ಸಿಎಂ ಕುಮಾರಸ್ವಾಮಿಯವರೇ ಬಡವರ ಮೇಲೆ ಏಕೆ ಈ ಪರಿಯ ದ್ವೇಷ?- ಬಿಜೆಪಿ ನಡವಳಿಕೆಯನ್ನು ಪ್ರಶ್ನಿಸುವ ದಮ್ಮು ತಾಕತ್ ಕುಮಾರಸ್ವಾಮಿಯವರಿಗೆ ಇಲ್ಲ- ಸಿಎಂ‌ ಸಿದ್ದರಾಮಯ್ಯ ಕಿಡಿ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರೇ, ನಿಮಗೆ ಏಕೆ ರಾಜ್ಯದ ಬಡವರ ಮೇಲೆ ಈ ಪರಿಯ ದ್ವೇಷ? ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ದಿನದಿಂದ ಅದರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುವುದು ನಿಮ್ಮ ದಿನಚರಿಯಾಗಿ ಬಿಟ್ಟಿದೆ. ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವುದೆಂದರೆ ಕೋಟ್ಯಂತರ ಸಂಖ್ಯೆಯಲ್ಲಿರುವ ಬಡ ಫಲಾನುಭವಿಗಳನ್ನು ವಿರೋಧಿಸುವುದೆಂದೇ ಅರ್ಥ. ಯಾಕೆ ಬಡವರ ಹೊಟ್ಟೆಗೆ ಹೊಡೆಯುವ ಕಿಚ್ಚು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ರಾಜ್ಯದ ಕೋಟ್ಯಂತರ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳ ಲಾಭ ಪಡೆದು ಸಂಭ್ರಮಿಸುತ್ತಿದ್ದಾರೆ. ಈ ಸಂಭ್ರಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮತದಾರರೂ ಸೇರಿದ್ದಾರೆ. ಗ್ಯಾರಂಟಿ ಯೋಜನೆಗಳ ಫಲಿತಾಂಶವನ್ನು ತಿಳಿದುಕೊಳ‍್ಳಬೇಕಾದ ಪ್ರಾಮಾಣಿಕ ಉದ್ದೇಶ ನಿಮಗಿದ್ದರೆ ಬೆಂಗಳೂರಿನಲ್ಲಿ ಕೂತು ಪತ್ರಿಕಾಗೋಷ್ಠಿ ನಡೆಸುವುದಲ್ಲ, ಹಳ್ಳಿಗಳಿಗೆ ಹೋಗಿ ಅಲ್ಲಿರುವ ಫಲಾನುಭವಿಗಳನ್ನು ಮಾತನಾಡಿಸಿ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳನ್ನು ಬಹಳ ಮುಖ್ಯವಾಗಿ ರಾಜ್ಯದ ಬಡಜನರನ್ನು ಗುರಿಯಾಗಿಸಿಕೊಂಡು ರೂಪಿಸಿರುವಂತಹದ್ದು. ಅದು ಶ್ರೀಮಂತರು ಇಲ್ಲವೇ ಉದ್ಯಮಿಗಳಿಗೆ ನೆರವಾಗುವ ತೆರಿಗೆ ವಿನಾಯಿತಿಯೂ ಅಲ್ಲ, ಅವರ ಸಾಲ ಮನ್ನಾ ಮಾಡುವ ಯೋಜನೆಯೂ ಅಲ್ಲ. ವಂಚಕ ಉದ್ಯಮಿಗಳಿಗೆ ನೆರವಾಗಲು ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಸೊಲ್ಲೆತ್ತಲಾಗದ ಕುಮಾರಸ್ವಾಮಿಯವರು ಮೂರು ಹೊತ್ತು ಗ್ಯಾರಂಟಿ ಯೋಜನೆಗಳ ಚುಂಗು ಹಿಡಿದು ಜಗ್ಗಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸುಳ್ಳು ಆರೋಪಗಳ ಮೂಲಕ  ದಿನನಿತ್ಯ ನನ್ನ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕುಮಾರಸ್ವಾಮಿ ಅವರೇ, ನನ್ನನ್ನು ಟೀಕಿಸುವುದರಿಂದ ನಿಮ್ಮ ಮನಸಿಗೆ ಶಾಂತಿ ಸಿಗುವುದಿದ್ದರೆ ನಿಮ್ಮ ದ್ವೇಷಾಸೂಯೆ ಮುಂದುವರಿಯಲಿ. ಚುನಾವಣಾ ಸೋಲಿನ ನಿಮ್ಮ ನಿರಾಶೆ, ಅದರಿಂದಾಗಿರುವ ಹತಾಶೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ರಾಜ್ಯದ ಬಡವರನ್ನು ಯಾಕೆ ಈ ರೀತಿ ದ್ವೇಷಿಸುತ್ತಿದ್ದೀರಿ. ಬಡವರ ಕಲ್ಯಾಣಕ್ಕಾಗಿಯೇ ರೂಪಿಸಲಾಗಿರುವ ಯೋಜನೆಗಳನ್ನು ಯಾಕೆ ವಿರೋಧಿಸುತ್ತಿದ್ದೀರಿ? ಕಳೆದ ಚುನಾವಣೆಯಲ್ಲಿ ಅವರು ನಿಮ್ಮ ಪಕ್ಷವನ್ನು ತಿರಸ್ಕರಿಸಿದ್ದಕ್ಕಾಗಿ ದ್ವೇಷವೇ? ಎಂದು ಪ್ರಶ್ನಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಹಿಪಾಕ್ರಟಿಕ್ ನಡವಳಿಕೆಯನ್ನು ಇಡೀ ದೇಶ ಕಂಡು ಛೀಮಾರಿ ಹಾಕುತ್ತಿದೆ. ಮೊನ್ನೆ ಮೊನ್ನೆ ವರೆಗೆ ಗ್ಯಾರಂಟಿ ಯೋಜನೆಗಳು ಸೇರಿದಂತೆ ಇಂತಹ ಯೋಜನೆಗಳೆಲ್ಲ ಬಿಟ್ಟಿಭಾಗ್ಯ ಎಂದು ಗೇಲಿ ಮಾಡುತ್ತಿದ್ದ ಬಿಜೆಪಿ ಐದು ರಾಜ್ಯಗಳ ಚುನಾವಣಾ ಪ್ರಣಾಳಿಕೆಯಲ್ಲಿ ಇಂತಹ ‘’ಬಿಟ್ಟಿ ಭಾಗ್ಯ’’ಗಳನ್ನೆಲ್ಲ ಸೇರಿಸಿ ಬಿಟ್ಟಿದೆ. ಇವರಿಗೆ ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ನೈತಿಕತೆ ಇಲ್ಲ, ಬಿಜೆಪಿ ನಡವಳಿಕೆಯನ್ನು ಪ್ರಶ್ನಿಸುವ ದಮ್ಮು ತಾಕತ್ ಕುಮಾರಸ್ವಾಮಿಯವರಿಗೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿನ ಘೋಷಣೆಗಳು. ಅದನ್ನು ಒಪ್ಪಿಕೊಂಡೇ ರಾಜ್ಯದ ಜನ ನಮ್ಮ ಪಕ್ಷವನ್ನು ಗೆಲ್ಲಿಸಿದ್ದಾರೆ. ಈ ಯೋಜನೆಗಳನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡೂ ವಿರೋಧಿಸಿದ್ದವು, ಈ ಪಕ್ಷಗಳ ಸೋಲಿಗೆ ಗ್ಯಾರಂಟಿ ಯೋಜನೆಗಳ ಬಗೆಗಿನ ನಿಮ್ಮ ವಿರೋಧವೂ ಕಾರಣ ಎನ್ನುವುದು ನಿಮಗೆ ಇನ್ನೂ ಅರ್ಥವಾಗದೆ ಇರುವುದು ದುರಂತ. ಇದೇ ರೀತಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಹೋದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡಕ್ಕೂ ರಾಜ್ಯದ ಪ್ರಜ್ಞಾವಂತ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು‌.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

8 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

3 days ago