‘ಮಾಜಿ‌ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್ ವಿಚಾರ- ಈ ವಯಸ್ಸಿನಲ್ಲಿ ಇಂತಹ ಕೃತ್ಯ ಎಸಗಲು ಸಾಧ್ಯನಾ..?- ನಟ ದರ್ಶನ್ ಬಂಧನ ವಿಚಾರ- ಯಾರೇ ತಪ್ಪಿತಸ್ಥರು ಆಗಿದ್ದರೂ ಅವರ ಮೇಲೆ ಕ್ರಮ ಆಗಬೇಕು’-ನೂತನ ಸಂಸದ ಡಾ.ಕೆ.ಸುಧಾಕರ್

ಮಾಜಿ‌ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದಲ್ಲಿ ನೂತನ ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿ, ಮಾಜಿ‌ ಸಿಎಂ ಯಡಿಯೂರಪ್ಪ ರೈತ ನಾಯಕರು, ಅವರ ಮೇಲೆ‌ ಇಲ್ಲ ಸಲ್ಲದ ಆರೋಪಗಳನ್ನು ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ. ಇದೆಲ್ಲಾ ರಾಜಕೀಯ ಪಿತೂರಿ ಅಷ್ಟೇ. ಈ ವಯಸ್ಸಿನಲ್ಲಿ ಇಂಥಹದನ್ನೆಲ್ಲಾ ಮಾಡಲು ಸಾಧ್ಯನಾ..? ಪಕ್ಷಕ್ಕೆ ಹಾಗೂ ಅವರಿಗೆ ಮುಜುಗರ ಮಾಡಿ, ಅದರ ರಾಜಕೀಯ ಲಾಭವನ್ನು ತೆಗೆದುಕೊಳ್ಳುವ ದುರುದ್ದೇಶ ಕಾಂಗ್ರೆಸ್ ಗೆ ಇದೆ. ನಮಗೆ ನೂರಕ್ಕೆ ನೂರು ನಮ್ಮ ನಾಯಕರ ಮೇಲೆ ನಂಬಿಕೆಯಿದೆ. ಅವರು ಇಂತಹ ಕೃತ್ಯ ಎಸಗಲು ಅಸಾಧ್ಯ ಎಂದು ಹೇಳಿದ್ದಾರೆ.

*ಯಡಿಯೂರಪ್ಪ ಬಂಧನ ಮಾಡುವ ವಿಚಾರ*

ಯಾವುದೇ ಕಾರಣ ಇಲ್ಲದೆ ನಮ್ಮ ನಾಯಕರನ್ನು ಅರೆಸ್ಟ್ ಮಾಡಿದರೆ ಹೋರಾಟ ನಡೆಸುತ್ತೇವೆ. ಕಾನೂನು ಬಾಹಿರವಾಗಿ ಏನು ಮಾಡಲು ಸಾಧ್ಯವಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನಾದರೂ ಮಾಡಬಹುದು. ನಮ್ಮ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ಸದೃಢವಾಗಿದ್ದೇವೆ. ಮೊನ್ನೆ ತಾನೆ ಎಷ್ಟು ಸದೃಡವಾಗಿದ್ದೇವೆ ಎಂದು ತೋರಿಸಿದ್ದೇವೆ. ನಾವು ಬೀದಿಗೆ ಇಳಿಬೇಕು ಎಂದರೆ ಇಳಿಯುತ್ತೇವೆ ಎಂದು ಎಚ್ಚರಿಸಿದ್ದಾರೆ.

ನಟ ದರ್ಶನ್ ಬಂಧನ ವಿಚಾರ

ಯಾರೇ ತಪ್ಪಿತಸ್ಥರು ಆಗಿದ್ದರೂ ಅವರ ಮೇಲೆ ಕ್ರಮ ಆಗಬೇಕು. ಕಾನೂನಿಗಿಂತ ದೊಡ್ಡವರು ಯಾರು ಇರೋದಿಲ್ಲ. ಇನ್ನೊಬ್ಬರನ್ನ ಕೊಲೆ ಮಾಡೋದಕ್ಕೆ ಭಗವಂತ ಶಕ್ತಿ ಕೊಟ್ಟಿಲ್ಲ. ಕೊಲೆ ಎನ್ನುವುದು ಅಮಾನುಷವಾದದ್ದು. ಯಾರು ಕೂಡ ಕೊಲೆ‌ ಮಾಡುವ ಆಲೋಚನೆ ಮಾಡಬಾರದು ಎಂದು ಹೇಳಿದರು.

Ramesh Babu

Journalist

Recent Posts

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

34 minutes ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

3 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

4 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

16 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

16 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

18 hours ago